Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಧಕರ ಸೀಟ್ ಮೇಲೆ ಪ್ರಾಣೇಶ್ ಆಯ್ತು: ಈಗ ಪ್ರೊ.ಕೃಷ್ಣೇಗೌಡರ ಸರದಿ.!
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದ ಸಾಧಕರ ಸೀಟ್ ಮೇಲೆ ಗಂಗಾವತಿ ಪ್ರಾಣೇಶ್ ಕುಳಿತಿದ್ದಾಯ್ತು. ಈಗ ಪ್ರೊ.ಕೃಷ್ಣೇಗೌಡರ ಸರದಿ.
ವೃತ್ತಿಯಲ್ಲಿ ಉಪಾಧ್ಯಾಯ, ಪ್ರವೃತ್ತಿಯಲ್ಲಿ ಹಾಸ್ಯಗಾರರಾಗಿರುವ ಪ್ರೊ.ಕೃಷ್ಣೇಗೌಡ ರವರ ಲೈಫ್ ಸ್ಟೋರಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರಸಾರ ಆಗಲಿದೆ.
ಮಂಡ್ಯದ 'ಮಾತಿನ ಮಲ್ಲ'
ವೇದಿಕೆ ಹತ್ತಿದರೆ ಸಾಕು, ತಿಳಿಹಾಸ್ಯದ ಹೊನಲು ಹರಿಸುವ ಪ್ರೊ.ಕೃಷ್ಣೇಗೌಡ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕನಗನ ಮರಡಿ ಎಂಬ ಗ್ರಾಮದಲ್ಲಿ. ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕಗಳೊಂದಿಗೆ ಎಂ.ಎ ಪದವಿ ಪಡೆದ ಕೃಷ್ಣೇಗೌಡ, ಕನ್ನಡ ಸಾಹಿತ್ಯದ ವಿದ್ಯಾರ್ಥಿಯಾಗಿ, ಹಾಡುಗಾರರಾಗಿ, ಅಧ್ಯಾಪಕರಾಗಿ, ಹಾಸ್ಯಗಾರನಾಗಿ ಬೆಳೆದ ಯಶೋಗಾಥೆ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರಸಾರ ಆಗಲಿದೆ.
ಪಡೆದಿರುವ ಬಹುಮಾನ ಲೆಕ್ಕವಿಲ್ಲ.!
ಚಿಕ್ಕವಯಸ್ಸಿನಿಂದಲೇ ಹಲವಾರು ರಾಜ್ಯ, ರಾಷ್ಟ್ರ ಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿದ ಕೃಷ್ಣೇಗೌಡರು ಚರ್ಚಾಪಟುವಾಗಿ, ಹಾಡುಗಾರನಾಗಿ ಪಡೆದ ಬಹುಮಾನಗಳ ಸಂಖ್ಯೆ ಲೆಕ್ಕವಿಲ್ಲದಷ್ಟು.
ಕಚಗುಳಿ ಇಡುವ ಪ್ರೊ.ಕೃಷ್ಣೇಗೌಡ ಹಾಸ್ಯ
ಸಾಹಿತ್ಯ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಹಾಸ್ಯ ವಿಷಯಗಳಲ್ಲಿ ಪ್ರೊ.ಕೃಷ್ಣೇಗೌಡ ಮಾಡಿರುವ ಭಾಷಣ ಕೂಡ ಲೆಕ್ಕವಿಲ್ಲದಷ್ಟು. 'ಶಿವರಾತ್ರಿ' ಪ್ರಯುಕ್ತ ನಡೆಯುವ 'ನಗೆ ಜಾಗರಣೆ'ಯಲ್ಲಿ ಪ್ರೊ.ಕೃಷ್ಣೇಗೌಡರ ರವರ ಹಾಸ್ಯ ಚಟಾಕಿ ಕೇಳುವುದಕ್ಕಾಗಿಯೇ ಸಾವಿರಾರು ಮಂದಿ ಜಮಾಯಿಸುತ್ತಾರೆ.
ಪ್ರಸಾರ ಯಾವಾಗ.?
'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾಗವಹಿಸಿರುವ ಸಂಚಿಕೆಯ ಚಿತ್ರೀಕರಣ ಮುಗಿದಿದೆ. ಪ್ರಸಾರ ಯಾವಾಗ ಎಂಬುದರ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ.