Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕನ್ನಡದ ಕೋಟ್ಯಾಧಿಪತಿ'ಗೆ ಬರ್ತಾರೆ ಪುನೀತ್, ಯಶ್, ಗಣೇಶ್
Recommended Video
ಕಿರುತೆರೆಯಲ್ಲಿ ಮತ್ತೆ ಕೋಟಿ ಗೆಲ್ಲುವ ಅವಕಾಶ ಬಂದಿದೆ. 'ಕನ್ನಡ ಕೋಟ್ಯಾಧಿಪತಿ' ಕಾರ್ಯಕ್ರಮ ಮತ್ತೊಮ್ಮೆ ಶುರು ಆಗುತ್ತಿದೆ. ವಿಶೇಷ ಅಂದರೆ ಈ ಬಾರಿಯ ಕಾರ್ಯಕ್ರಮದಲ್ಲಿ ನಟರಾದ ಪುನೀತ್ ರಾಜ್ ಕುಮಾರ್, ಯಶ್ ಹಾಗೂ ಗಣೇಶ್ ಕೂಡ ಇರಲಿದ್ದಾರಂತೆ.
ಕ್ರಮದ ಮೊದಲ ಸಂಚಿಕೆಯಲ್ಲಿ ಈ ಮೂರು ನಟರನ್ನು ಕರೆ ತರುವ ತಯಾರಿಗಳು ನಡೆಯುತ್ತಿದೆ. ಹಾಗೆನಾದರೂ ಅದು ಸಾಧ್ಯ ಆಗದಿದ್ದರೆ, ಕಾರ್ಯಕ್ರಮದ ಬೇರೆ ಬೇರೆ ಸಂಚಿಕೆಯಲ್ಲಿಯಾದರೂ ಪುನೀತ್ ರಾಜ್ ಕುಮಾರ್, ಯಶ್ ಹಾಗೂ ಗಣೇಶ್ ಭಾಗಿಯಾಗಲಿದ್ದಾರೆ. ರಮೇಶ್ ಜೊತೆಗೆ ವೀಕ್ಷಕರು ಈ ಮೂರು ನಟರನ್ನು ಸಹ ನೋಡಬಹುದಾಗಿದೆ.
ನೀವು 'ಕೋಟ್ಯಾಧಿಪತಿ'ಯ ಹಾಟ್ ಸೀಟ್ ಮೇಲೆ ಕೂರಬೇಕು ಅಂದ್ರೆ ಹೀಗೆ ಮಾಡ್ಬೇಕು
'ಕನ್ನಡದ ಕೋಟ್ಯಾಧಿಪತಿ'ಯ ಮೊದಲೇರಡು ಸೀಸನ್ ಸಾರಥ್ಯವನ್ನು ಪುನೀತ್ ರಾಜ್ ಕುಮಾರ್ ವಹಿಸಿದ್ದು, ಈ ಬಾರಿ ಅವರ ಅಭಿಮಾನಿಗಳು ಅಪ್ಪು ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ, ಈಗ ಪುನೀತ್ ಕೂಡ ಕಾರ್ಯಕ್ರಮದ ಒಂದು ಸಂಚಿಕೆಯಲ್ಲಿ ಬರಲಿದ್ದು, ಇದು ಅವರ ಫ್ಯಾನ್ಸ್ ಗಳಿಗೆ ಖುಷಿಯ ವಿಚಾರವಾಗಿದೆ. ವಿಶೇಷ ಅಂದರೆ, ರಮೇಶ್ ಕೂಡ ಕಾರ್ಯಕ್ರಮದ ಮೊದಲ ಸಂಚಿಕೆಯಲ್ಲಿಯೇ ಪುನೀತ್ ರನ್ನು ಅತಿಥಿಯಾಗಿ ನೋಡುವ ಬಯಕೆಯನ್ನು ವ್ಯಕ್ತ ಪಡಿಸಿದ್ದರು.
ಅಂದಹಾಗೆ, 'ಕನ್ನಡದ ಕೋಟ್ಯಾಧಿಪತಿ' ಕಾರ್ಯಕ್ರಮದ ಕೊನೆಯ ಹಂತದ ಸಿದ್ಧತೆಗಳು ಸದ್ಯ ನಡೆಯುತ್ತಿದೆ. ಕಾರ್ಯಕ್ರಮ ಇದೇ ತಿಂಗಳು ಕೊನೆಯಿಂದ ಪ್ರಸಾರ ಆಗುವ ಸಾಧ್ಯತೆ ಇದೆ.