ಜನ್ಮದಿನ: ಕಲ್ಲು-ಮುಳ್ಳಿನ ಹಾದಿಯಲ್ಲಿ ಅರಳಿದ ಹೂವು ಉಮಾಶ್ರೀ

By ಪೂರ್ವ

ಇಂದು ನಟಿ ಉಮಾಶ್ರೀಯವರ ಜನ್ಮದಿನ. ನಟಿ ಉಮಾಶ್ರೀ ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ.ರಂಗಭೂಮಿಯ ಪ್ರತಿಭೆ ಉಮಾಶ್ರೀಗೆ ಯಾವ ಪಾತ್ರಗಳೂ ಸವಾಲಲ್ಲ. ಭಾವನೆ, ಹಾವ ಭಾವ, ಅಭಿವ್ಯಕ್ತಿ ಎಲ್ಲದರಲ್ಲೂ ಅತ್ಯುತ್ತಮ. ಕನ್ನಡ ಚಿತ್ರರಂಗ ಕಂಡ ಅದ್ಭುತವಾದ ಪ್ರತಿಭೆ.

ನಟಿ ಉಮಾಶ್ರೀ ಮೇ 10, 1957 ರಂದು ತುಮಕೂರು ಜಿಲ್ಲೆಯ ನೊಣವಿನಕೆರೆ ಗ್ರಾಮದಲ್ಲಿ ಜನಿಸಿದರು. ಬಹಳ ಬಡ ಕುಟುಂಬದಲ್ಲಿ ಜನಿಸಿದ್ದ ಉಮಾಶ್ರೀ ಅವರ ಮನೆಯಲ್ಲಿ ದಿನನಿತ್ಯದ ಆಹಾರಕ್ಕೂ ಕಷ್ಟಪಡುವ ಪರಿಸ್ಥಿತಿ ಇತ್ತು. ರಂಗಭೂಮಿಗೆ ಸೇರಿದರೆ ತಿನ್ನಲು ಊಟ ಕೊಡುತ್ತಾರೆ ಎಂಬ ಕಾರಣಕ್ಕೆ ರಂಗಭೂಮಿಗೆ ಕಾಲಿಟ್ಟವರು ಉಮಾಶ್ರೀ. ಪ್ರೀತಿಸಿ ಮದುವೆಯಾಗಿದ್ದ ಉಮಾಶ್ರೀ ಅವರ ವೈವಾಹಿಕ ಜೀವನ ತುಂಬಾ ದಿನ ಚೆನ್ನಾಗಿರಲಿಲ್ಲ.

ಊಟ ಸಿಗುತ್ತದೆಂದು ನಾಟಕ ತಂಡ ಸೇರಿದ್ದ ಉಮಾಶ್ರೀ

ಊಟ ಸಿಗುತ್ತದೆಂದು ನಾಟಕ ತಂಡ ಸೇರಿದ್ದ ಉಮಾಶ್ರೀ

ತುಮಕೂರು ಜಿಲ್ಲೆಯ ನೊಣವಿನಕೆರೆ ಗ್ರಾಮದಲ್ಲಿ ಜನಿಸಿದರು. ಬಡ ಕುಡುಂಬದಲ್ಲಿ ಹುಟ್ಟಿದ ಉಮಾಶ್ರೀ, "ನಾನು ನಾಟಕಕ್ಕೆ ಸೇರಿದ್ದೇ ತಿನ್ನಲು ಚಿತ್ರಾನ್ನ ಸಿಗುತ್ತದೆ" ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ಕಷ್ಟಪಟ್ಟು ದುಡಿದು ತಮ್ಮಿಬ್ಬರು ಮಕ್ಕಳನ್ನು ಉತ್ತಮ ವಿದ್ಯಾವಂತರಾಗಿಸಿರುವ ಉಮಾಶ್ರೀ ತಮ್ಮ ಬದುಕಿನ ಜವಾಬ್ಧಾರಿಗಳನ್ನು ಕೂಡಾ ಸಮರ್ಥವಾಗಿ ಪೂರೈಸಿದ್ದಾರೆ. ಉಮಾಶ್ರೀ ಅವರದ್ದು ವೃತ್ತಿ ರಂಗಭೂಮಿಯಲ್ಲಿ ದೊಡ್ಡ ಹೆಸರು. ಹಲವಾರು ಐತಿಹಾಸಿಕ, ಪೌರಾಣಿಕ ಪಾತ್ರಗಳನ್ನು ನಿರ್ವಹಿಸಿ, ಹವ್ಯಾಸಿ ರಂಗಭೂಮಿಯಲ್ಲಿ ಬಿ.ವಿ.ಕಾರಂತ್, ನಾಗಾಭರಣ, ಕೃಷ್ಣಸ್ವಾಮಿ ಅವರುಗಳ ನಿರ್ದೇಶನದಲ್ಲಿ ಅನೇಕ ನಾಟಕಗಳಲ್ಲಿ ಅಭಿನಯಿಸಿದಾಕೆ ಉಮಾಶ್ರೀ. ಅವರ ಒಡಲಾಳ ನಾಟಕದ ಸಾಕವ್ವನ ಅಭಿನಯ ಅಂದಿನ ದಿನಗಳಲ್ಲಿ ಅತ್ಯಂತ ಜನಪ್ರಿಯವಾಗಿತ್ತು.

ಪುಟ್ಮಲ್ಲಿಯಾಗಿ ಕನ್ನಡಿಗರ ಮನಸ್ಸಲ್ಲಿ ನೆಲೆಯೂರಿದ ನಟಿ

ಪುಟ್ಮಲ್ಲಿಯಾಗಿ ಕನ್ನಡಿಗರ ಮನಸ್ಸಲ್ಲಿ ನೆಲೆಯೂರಿದ ನಟಿ

1984ರಲ್ಲಿ ತೆರೆಗೆ ಬಂದ ಅನುಭವ ಸಿನಿಮಾ ಉಮಾಶ್ರೀ ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ ಸಿನಿಮಾ. ಕಾಶಿನಾಥ್ ಅಭಿನಯಿಸಿ, ನಿರ್ದೇಶಿಸಿದ್ದ ಈ ಸಿನಿಮಾದಲ್ಲಿ ಪದ್ದಿಯಾಗಿ ಮೋಡಿ ಮಾಡಿದವರು. ಆ ಸಿನಿಮಾದಲ್ಲಿ ತಮ್ಮ ಬೋಲ್ಡ್ ಅಭಿನಯದಿಂದ ಉಮಾಶ್ರೀ ಕನ್ನಡ ಕಲಾ ರಸಿಕರ ಮನಸು ಸೊರೆ ಮಾಡಿದವರು.

ಅನುಭವದ ಬಳಿಕ ಉಮಾಶ್ರೀ ಬರೀ ಡಬಲ್ ಮೀನಿಂಗ್‌ನ ಹಾಸ್ಯ ಪಾತ್ರಗಳಿಗಷ್ಟೇ ಸೀಮಿತವಾದರು. ಆಗ ಬಂದಿದ್ದೇ ಪುಟ್ನಂಜ ಸಿನಿಮಾ. 1995 ರಲ್ಲಿ ಕ್ರೇಜಿಸ್ಟಾರ್ ನಟಿಸಿ, ನಿರ್ದೇಶಿಸಿದ್ದ ಈ ಸಿನಿಮಾದಲ್ಲಿ ಪುಟ್ಮಲ್ಲಿಯಾಗಿ ಉಮಾಶ್ರೀ ಪರಕಾರ ಪ್ರವೇಶ ಮಾಡಿದರು. ಈ ಚಿತ್ರವು 25 ವಾರಗಳಿಗೂ ಹೆಚ್ಚು ಕಾಲ ಓಡಿ, ಬ್ಲಾಕ್ ಬಸ್ಟರ್ ಆಯಿತು. ಉಮಾಶ್ರೀ ಪುಟ್ಮಲ್ಲಿಯಾಗಿ ಕನ್ನಡಿಗರ ಮನಸ್ಸಲ್ಲಿ ನೆಲೆಯೂರಿದ್ದರು.

ರಾಜಕೀಯದಲ್ಲಿದ್ದುಕೊಂಡು ಜನರಿಗೆ ಸಹಾಯ ಮಾಡುತ್ತಿದ್ದ ನಟಿ

ರಾಜಕೀಯದಲ್ಲಿದ್ದುಕೊಂಡು ಜನರಿಗೆ ಸಹಾಯ ಮಾಡುತ್ತಿದ್ದ ನಟಿ

ಉಮಾಶ್ರೀ ಬರೀ ರಂಗಭೂಮಿ, ಸಿನಿಮಾ ಅಷ್ಟೇ ಅಲ್ಲ ರಾಜಕೀಯದಲ್ಲೂ ಕೆಲಸ ಮಾಡಿದ ಅನುಭವಸ್ಥೆ. ಕಾಂಗ್ರೆಸ್ ಪಕ್ಷದ ಸದಸ್ಯೆಯಾಗಿರುವ ಉಮಾಶ್ರೀ, ಶಾಸಕಿಯಾಗಿ, ಸಚಿವೆಯಾಗಿ ಜನಸೇವೆ ಮಾಡಿದ್ದಾರೆ. ಉಮಾಶ್ರೀ ಅವರು ನೋವು-ನಲಿವನ್ನು ಸಮನಾಗಿ ಉಂಡವರು. ಅವರ ಬಗ್ಗೆ, ಅವರ ಪಾತ್ರಗಳ ಬಗ್ಗೆ ಆಡಿಕೊಂಡು ಡಬಲ್ ಮೀನಿಂಗ್ ಜೋಕ್ ಮಾಡಿದ್ದ ಅದೇ ಪ್ರೇಕ್ಷಕರು ಅವರ ಅಮೋಘ ಅಭಿನಯ ನೋಡಿ ಎದ್ದುನಿಂತು ಚಪ್ಪಾಳೆ ತಟ್ಟಿದರು. ಗುಲಾಬಿ ಟಾಕೀಸ್ ಎಂಬ ಸಿನಿಮಾಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿಯೂ ಬಂತು. ಸದ್ಯ ಉಮಾಶ್ರೀ ಅವರು ಕಿರುತೆರೆಯಲ್ಲಿ ಪುಟ್ಟಕ್ಕನಾಗಿ ಮಿಂಚುತ್ತಿದ್ದಾರೆ.

ಮೊಮ್ಮಕ್ಕಳೊಂದಿಗೆ ಹಾಯಾಗಿರುವ ಉಮಾಶ್ರೀ

ಮೊಮ್ಮಕ್ಕಳೊಂದಿಗೆ ಹಾಯಾಗಿರುವ ಉಮಾಶ್ರೀ

ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ಕಷ್ಟಪಟ್ಟು ದುಡಿದು ತಮ್ಮಿಬ್ಬರು ಮಕ್ಕಳನ್ನು ಉತ್ತಮ ವಿದ್ಯಾವಂತರಾಗಿಸಿರುವ ಉಮಾಶ್ರೀ ತಮ್ಮ ಬದುಕಿನ ಜವಾಬ್ಧಾರಿಗಳನ್ನು ಕೂಡಾ ಸಮರ್ಥವಾಗಿ ಪೂರೈಸಿದ್ದಾರೆ. ಉಮಾಶ್ರೀ ಅವರಿಗೆ ಇಬ್ಬರು ಮಕ್ಕಳು, ಅವರ ಮಗ ವಿಜಯ್ ಕುಮಾರ್ ಅವರದ್ದು ವಕೀಲಿ ವೃತ್ತಿ, ಆಸ್ಟ್ರೇಲಿಯಾದಲ್ಲಿ ಲಾ ಪದವಿ ಪಡೆದಿದ್ದಾರೆ. ಉಮಾಶ್ರೀ ಅವರ ಮಗಳು ಗಾಯತ್ರಿ ವೃತ್ತಿಯಲ್ಲಿ ವೈದ್ಯರು. ಸಿನಿಮಾ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿರುವ ಉಮಾಶ್ರೀ ಅವರು ಮಹಿಳೆಯರಿಗಾಗಿ ಸಾಕಷ್ಟು ಚಟುವಟಿಕೆಗಳನ್ನು ಮಾಡಿಸಿದ್ದಾರೆ. ಸಧ್ಯಕ್ಕೆ ಮಕ್ಕಳು ಮತ್ತು ಮೊಮ್ಮಕ್ಕಳ ಜೊತೆ ಸುಖ ಜೀವನ ನಡೆಸುತ್ತಿದ್ದಾರೆ. ಉಮಾಶ್ರೀ ಅವರಿಗೆ ಅಭಿಮಾನಿಗಳ ಕಡೆಯಿಂದ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ. ಇನ್ನಷ್ಟು ಉತ್ತಮ ಸಿನಿಮಾಗಳಲ್ಲಿ ಧಾರವಾಹಿಗಳಲ್ಲಿ ನಟಿಸಲಿ ಎಂಬುವುದೇ ಆಶಯ.

More from Filmibeat

English summary
Puttakkana Makkalu Actress Umasri Birth Day. Hear is more details about her.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X