Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
25 ಲಕ್ಷದ ಪ್ರಶ್ನೆ ನೋಡಿ ಆಟ ಕ್ವಿಟ್ ಮಾಡಿದ ರಾಘವೇಂದ್ರ: ಯಾವುದು ಆ ಪ್ರಶ್ನೆ?
ಕನ್ನಡದ ಕೋಟ್ಯಧಿಪತಿ ನಾಲ್ಕನೇ ಆವೃತ್ತಿಯಲ್ಲಿ ಇದುವರೆಗೂ ಯಾರು ಕೂಡ 25 ಲಕ್ಷ ಗೆದ್ದಿಲ್ಲ. ಆದರೆ ನಾಲ್ಕೈದು ಜನ 25 ಲಕ್ಷದ ಪ್ರಶ್ನೆಯನ್ನ ಎದುರಿಸಿದ್ದಾರೆ. ಕಳೆದ ವಾರವಷ್ಟೆ ಅನುರಾಧ ಅವರು 25 ಲಕ್ಷದ ಪ್ರಶ್ನೆ ಎದುರಿಸಿ ತಪ್ಪು ಉತ್ತರ ನೀಡಿದ್ದರು.
ಹಾಗಾಗಿ ದೊಡ್ಡ ಮೊತ್ತ ಕಳೆದುಕೊಳ್ಳಬೇಕಾಯಿತು. ಈ ವಾರ ರಾಘವೇಂದ್ರ ಅವರು ಕೂಡ 25 ಲಕ್ಷ ಪ್ರಶ್ನೆಯನ್ನ ಎದುರಿಸಿದರು. 12.5 ಲಕ್ಷದ ವರೆಗೂ ಉತ್ತಮ ಆಟ ಆಡಿದ್ದ ರಾಘವೇಂದ್ರ ಅವರು ಮುಖ್ಯವಾದ ಹಂತದಲ್ಲಿ ಕ್ವಿಟ್ ಮಾಡಿ ಗಳಿಸಿದ ಹಣವನ್ನ ತಮ್ಮಲ್ಲೇ ಉಳಿಸಿಕೊಂಡರು.
ಕೂದಲೆಳೆಯ ಅಂತರದಲ್ಲಿ 25 ಲಕ್ಷ ಕಳೆದುಕೊಂಡ ಕೋಟ್ಯಧಿಪತಿ ಸ್ಪರ್ಧಿ ಅನುರಾಧ
ಅಷ್ಟಕ್ಕೂ, ರಾಘವೇಂದ್ರ ಅವರು ಎದುರಿಸಿ 25 ಲಕ್ಷದ ಪ್ರಶ್ನೆ ಏನಾಗಿತ್ತು? ಯಾವ ವಿಷಯದ ಬಗ್ಗೆ ಕಾಲುಕೋಟಿಯ ಪ್ರಶ್ನೆ ಕೇಳಲಾಗಿತ್ತು.? ಮುಂದ ಓದಿ...
25 ಲಕ್ಷದ ಪ್ರಶ್ನೆ ಯಾವುದು?
ಜವಹರಲಾಲ ನೆಹರು ಅವರನ್ನು ಹೊರತು ಪಡಿಸಿ, ನೆಹರು-ಗಾಂಧಿ ಕುಟುಂಬದ ಈ ವ್ಯಕ್ತಿಗಳಲ್ಲಿ ಯಾರ ಸಹಿಯನ್ನು ಭಾರತ ಸಂವಿಧಾನದ ಮೂಲ ಪ್ರತಿಯ ಮೇಲೆ ಕಾಣಬಹುದು?
A ಕೃಷ್ಣಾ ಹಥಿಸಿಂಗ್
B ಇಂದಿರಾ ಗಾಂಧಿ
C ಮೋತಿಲಾಲ ನೆಹರು
D ಫಿರೋಜ್ ಷಾ ಗಾಂಧಿ
ಕೋಟ್ಯಧಿಪತಿಯಲ್ಲಿ 25 ಲಕ್ಷ ಗೆಲ್ಲುವ ಅವಕಾಶ ಕಳೆದುಕೊಂಡ ವೈಭವ್
ಕ್ವಿಟ್ ಮಾಡಿದ ರಾಘವೇಂದ್ರ
ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಗೊತ್ತಿಲ್ಲದ ರಾಘವೇಂದ್ರ ಅವರು ಆಟವನ್ನ ಕ್ವಿಟ್ ಮಾಡಲು ನಿರ್ಧರಿಸಿದರು. ಅದಕ್ಕೂ ಮುಂಚೆ ಇಂದಿರಾ ಗಾಂಧಿ ಮತ್ತು ಮೋತಿಲಾಲ ನೆಹರು ಇಬ್ಬರಲ್ಲಿ ಒಬ್ಬರು ಇರಬಹುದು ಎಂದು ಊಹಿಸಿದ್ದರು. ಮೋತಿಲಾಲ ನೆಹರು ಸರಿ ಉತ್ತರ ಇರಬಹುದು ಎಂದು ಗೆಸ್ ಮಾಡುತ್ತಿದ್ದರು.
ಕೋಟ್ಯಧಿಪತಿಯ ಈ ಆವೃತ್ತಿಯಲ್ಲಿ ಯಾರೂ ಮಾಡದ ದಾಖಲೆ ಮಾಡ್ತಾರಾ ಅನುರಾಧಾ ?
ಹಾಗಿದ್ರೆ ಸರಿ ಉತ್ತರ ಯಾವುದು?
ಸ್ಪಷ್ಟ ಉತ್ತರ ಗೊತ್ತಿಲ್ಲದೇ ಆಟವನ್ನ ಕ್ವಿಟ್ ಮಾಡಿದರು. ಆಟಮುಗಿದ ಮೇಲೆ ಯಾವುದು ಲಾಕ್ ಮಾಡುತ್ತಿದ್ರಿ ಎಂದು ಕೇಳಿದ್ದಕ್ಕೆ ಮೋತಿಲಾಲ ನೆಹರು ಎಂದು ರಾಘವೇಂದ್ರ ಉತ್ತರಿಸಿದ್ದರು. ಆದರೆ ಅದು ತಪ್ಪು ಉತ್ತರ ಆಗಿತ್ತು. ಸರಿಯಾದ ಉತ್ತರ ಫಿರೋಜ್ ಷಾ ಗಾಂಧಿ ಆಗಿತ್ತು.
25 ಲಕ್ಷದ ಪ್ರಶ್ನೆಗೆ ಉತ್ತರ ಗೊತ್ತಿದ್ದರೂ ದೇವಮ್ಮ 'ಕೋಟ್ಯಧಿಪತಿ' ಆಟ ಕ್ವಿಟ್ ಮಾಡಿದ್ದೇಕೆ?
12.5 ಲಕ್ಷದ ಪ್ರಶ್ನೆ ಯಾವುದಾಗಿತ್ತು?
ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿ ಎರಡರ ಜೊತೆಯಲ್ಲಿಯೂ ತನ್ನ ಸಮುದ್ರತೀರ ಹಂಚಿಕೊಳ್ಳುವ ಕೇಂದ್ರಾಡಳಿತ ಪ್ರದೇಶ ಯಾವುದು?
A ಪುದುಚೇರಿ
B ದಿಮನ್ ಮತ್ತು ದಿಯು
C ಅಂಡಮಾನ್ ಮತ್ತು ನಿಕೋಬಾರ್
D ಲಕ್ಷದ್ವೀಪ
ಫೋನ್ ಎ ಫ್ರೆಂಡ್ ಲೈಫ್ ಲೈನ್ ಬಳಸಿದ ರಾಘವೇಂದ್ರ ಅವರು A ಪುದುಚೇರಿ ಎಂದು ಉತ್ತರಿಸಿದರು.