Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Automobiles ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವೀಕೆಂಡ್ ವಿತ್ ರಮೇಶ್'ಗೆ ಕಾರ್ನಾಡರನ್ನು ಕರೆಸೋ ಪ್ಲಾನ್ ಫೇಲ್ ಆಯ್ತು
Recommended Video
'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಅನೇಕ ವಿಭಾಗದ, ಅನೇಕ ಸಾಧಕರು ಬಂದು ಹೋಗಿದ್ದಾರೆ. ಅದೇ ರೀತಿ ಕನ್ನಡದ ಖ್ಯಾತ ಕವಿ, ಬರಹಗಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಕಾರ್ನಾಡ್ ಕೂಡ ಈ ಕಾರ್ಯಕ್ರಮಕ್ಕೆ ಬರಬೇಕಿತ್ತು.
ಕಾರ್ನಾಡರನ್ನು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಕರೆ ತರುವ ತಯಾರಿ ನಡೆದಿತ್ತು. ಆದರೆ, ಅವರು ಸಾಧಕರ ಸೀಟ್ ಮೇಲೆ ಕೂರುವ ಮೊದಲೇ ಇಹಲೋಕ ತ್ಯಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರನ್ನು ನೋಡುವ ಕನಸು ಹಾಗೆಯೇ ಉಳಿದಿದೆ.
ಗಿರೀಶ್ ಕಾರ್ನಾಡ್ ನಿರ್ದೇಶನದ ಪ್ರಮುಖ ಸಿನಿಮಾಗಳ ಪಟ್ಟಿ
ಈ ವಿಷಯವನ್ನು ಜೀ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾರ್ನಾಡರ ಒಂದು ವಿಡಿಯೋವನ್ನು ಶೇರ್ ಮಾಡಿ ''ನಾವು ನಿಮ್ಮನ್ನು ತುಂಬ ಮಿಸ್ ಮಾಡಿಕೊಳ್ಳುತ್ತೇನೆ ಸರ್. ನಿಮ್ಮನ್ನು ವೀಕೆಂಡ್ ವಿತ್ ರಮೇಶ್ ಕುರ್ಚಿ ಮೇಲೆ ಕೂರಿಸಬೇಕು ಎಂದು ತುಂಬ ದಿನದಿಂದ ಕಾಯುತ್ತಿದ್ದೆವು. ಆದರೆ, ಅದು ಫೇಲ್ ಆಯ್ತು.'' ಎಂದಿದ್ದಾರೆ.
ಕನ್ನಡ ಸಾಹಿತ್ಯ, ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿರುವ ಕಾರ್ನಾಡರನ್ನು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ನೋಡುವುದು ಬಹಳ ಖುಷಿಯ ವಿಷಯ ಆಗಿತ್ತು. ಆದರೆ, ಅದು ಇನ್ನೆಂದು ಈಡೇರುವುದಿಲ್ಲ.
ತಮ್ಮ ಕೊನೆಯ ನಾಟಕದಲ್ಲಿ ನಟಿಸಲು ಅನಂತ್ ನಾಗ್ ರಿಗೆ ಆಫರ್ ನೀಡಿದ್ರು ಕಾರ್ನಾಡ್
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಕಳೆದ ಸೋಮವಾರ ಬೆಳಗ್ಗೆ ವಿಧಿವಶರಾದರು. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದರು.