Just In
- 12 min ago
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
- 1 hr ago
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
- 2 hrs ago
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
- 2 hrs ago
ಸೋನು ಸೂದ್ ಟೈಲರ್ ಶಾಪ್: ರಸ್ತೆ ಬದಿ ಕುಳಿತು ಬಟ್ಟೆ ಹೊಲಿಯುತ್ತಿರುವ ರಿಯಲ್ ಹೀರೋ
Don't Miss!
- News
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯ ಮುನ್ಸೂಚನೆ
- Sports
ಭಾರತ vs ಆಸ್ಟ್ರೇಲಿಯಾ: ಬ್ರಿಸ್ಬೇನ್ನಲ್ಲಿ ವಾಖಲೆಯ ಜೊತೆಯಾಟವಾಡಿದ ಶಾರ್ದೂಲ್- ಸುಂದರ್
- Finance
ಈ 6 ಕಂಪೆನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ 1,13,018.94 ಕೋಟಿ ರು. ಹೆಚ್ಚಳ
- Automobiles
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಿಮೇಕ್ ಸಿನಿಮಾಗಳ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಬೇಸರ
ಕನ್ನಡ ಚಿತ್ರರಂಗದಲ್ಲಿ ರಿಮೇಕ್ ಸಿನಿಮಾಗಳು ಆಗಾಗ ಬರುತ್ತಿರುತ್ತದೆ. ಬೇರೆ ಭಾಷೆಯ ಸಿನಿಮಾಗಳನ್ನು ಇಲ್ಲಿ ರಿಮೇಕ್ ಮಾಡುವ ಬಗ್ಗೆ ಕೆಲವು ನಿರ್ದೇಶಕರಿಗೆ ವಿರೋಧ ಇದೆ.
ಇದೀಗ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸಹ ರಿಮೇಕ್ ಸಿನಿಮಾಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅರ್ಥವಿಲ್ಲದ ಚಿತ್ರಗಳಲ್ಲಿ ಅರ್ಥವಿಲ್ಲದ ಹಾಗೆ ರಿಮೇಕ್ ಮಾಡುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ವಿಷ್ಣು ಕಪಾಳಕ್ಕೆ ಸುಹಾಸಿನಿ ಹೊಡೆದ ದೃಶ್ಯ ಬಾಬು ಎಂದಿಗೂ ಮರೆಯೋಲ್ಲ!
''ಕನ್ನಡ ಚಿತ್ರಗಳು ಸೋಲಲು ಕಾರಣವೇ ನಮ್ಮ ತನ ಇರದೆ ಇರುವುದು. ಇಂದಿನ ಸಿನಿಮಾಗಳಲ್ಲಿ ನಮ್ಮ ಕಥೆ ಇಲ್ಲ, ನಮ್ಮ ತನ ಇಲ್ಲ, ನಮ್ಮ ಸಂಸ್ಕೃತಿ ಇಲ್ಲ, ನಮ್ಮ ಸಂಸ್ಕಾರ ಇಲ್ಲ. ನಮ್ಮ ಮಣ್ಣಿನ ವಾಸನೆ ಇಲ್ಲ. ಒಂದು ತಮಿಳು ಸಿನಿಮಾವನ್ನು ರಿಮೇಕ್ ಮಾಡಿ ಅಲ್ಲಿನ ಮೀಸೆ ಅಂಟಿಸಿಕೊಂಡು ಬರುತ್ತಾರೆ.'' ಎಂದು ರಿಮೇಕ್ ಚಿತ್ರಗಳ ಸ್ಥಿತಿಯನ್ನು ವಿವರಿಸಿದ್ದಾರೆ.
''ನಾನು ಎಂದಿಗೂ ಪ್ರೇಕ್ಷಕರನ್ನು ಬೈಯುವುದಿಲ್ಲ. ಅವರು ಎಂದಿಗೂ ಸರಿ. ಇದನ್ನು ಇಡೀ ಪ್ರಪಂಚದಲ್ಲಿ ಎಲ್ಲರೂ ಹೇಳಿದ್ದಾರೆ. ಪ್ರೇಕ್ಷಕರೇ ಸುಪ್ರೀಂ ಕೋರ್ಟ್.'' ಎಂದು ಹೇಳುವ ಮೂಲಕ ಪ್ರೇಕ್ಷಕರ ತೀರ್ಪೇ ಅಂತಿಮ ಎಂದಿದ್ದಾರೆ.
ವಿಷ್ಣು - ಅಂಬಿ ಮಾಡಬೇಕಿದ್ದ ಈ ಸಿನಿಮಾ ಕನಸಾಗಿಯೇ ಉಳಿದಿದೆ
ನಮ್ಮ ಕನ್ನಡದಲ್ಲಿಯೇ ಎಷ್ಟೊಂದು ಕತೆಗಳು ಇವೆ. ನಿರ್ದೇಶಕರು ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಕಥೆಗಳನ್ನು ಸಿನಿಮ್ಯಾಟಿಕ್ ಆಗಿ ಹೇಳುವುದು ಹೇಗೆ ಎನ್ನುವುದನ್ನು ಯೋಚನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.