Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಮೇಕ್ ಸಿನಿಮಾಗಳ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಬೇಸರ
ಕನ್ನಡ ಚಿತ್ರರಂಗದಲ್ಲಿ ರಿಮೇಕ್ ಸಿನಿಮಾಗಳು ಆಗಾಗ ಬರುತ್ತಿರುತ್ತದೆ. ಬೇರೆ ಭಾಷೆಯ ಸಿನಿಮಾಗಳನ್ನು ಇಲ್ಲಿ ರಿಮೇಕ್ ಮಾಡುವ ಬಗ್ಗೆ ಕೆಲವು ನಿರ್ದೇಶಕರಿಗೆ ವಿರೋಧ ಇದೆ.
ಇದೀಗ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸಹ ರಿಮೇಕ್ ಸಿನಿಮಾಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅರ್ಥವಿಲ್ಲದ ಚಿತ್ರಗಳಲ್ಲಿ ಅರ್ಥವಿಲ್ಲದ ಹಾಗೆ ರಿಮೇಕ್ ಮಾಡುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ವಿಷ್ಣು ಕಪಾಳಕ್ಕೆ ಸುಹಾಸಿನಿ ಹೊಡೆದ ದೃಶ್ಯ ಬಾಬು ಎಂದಿಗೂ ಮರೆಯೋಲ್ಲ!
''ಕನ್ನಡ ಚಿತ್ರಗಳು ಸೋಲಲು ಕಾರಣವೇ ನಮ್ಮ ತನ ಇರದೆ ಇರುವುದು. ಇಂದಿನ ಸಿನಿಮಾಗಳಲ್ಲಿ ನಮ್ಮ ಕಥೆ ಇಲ್ಲ, ನಮ್ಮ ತನ ಇಲ್ಲ, ನಮ್ಮ ಸಂಸ್ಕೃತಿ ಇಲ್ಲ, ನಮ್ಮ ಸಂಸ್ಕಾರ ಇಲ್ಲ. ನಮ್ಮ ಮಣ್ಣಿನ ವಾಸನೆ ಇಲ್ಲ. ಒಂದು ತಮಿಳು ಸಿನಿಮಾವನ್ನು ರಿಮೇಕ್ ಮಾಡಿ ಅಲ್ಲಿನ ಮೀಸೆ ಅಂಟಿಸಿಕೊಂಡು ಬರುತ್ತಾರೆ.'' ಎಂದು ರಿಮೇಕ್ ಚಿತ್ರಗಳ ಸ್ಥಿತಿಯನ್ನು ವಿವರಿಸಿದ್ದಾರೆ.
''ನಾನು ಎಂದಿಗೂ ಪ್ರೇಕ್ಷಕರನ್ನು ಬೈಯುವುದಿಲ್ಲ. ಅವರು ಎಂದಿಗೂ ಸರಿ. ಇದನ್ನು ಇಡೀ ಪ್ರಪಂಚದಲ್ಲಿ ಎಲ್ಲರೂ ಹೇಳಿದ್ದಾರೆ. ಪ್ರೇಕ್ಷಕರೇ ಸುಪ್ರೀಂ ಕೋರ್ಟ್.'' ಎಂದು ಹೇಳುವ ಮೂಲಕ ಪ್ರೇಕ್ಷಕರ ತೀರ್ಪೇ ಅಂತಿಮ ಎಂದಿದ್ದಾರೆ.
ವಿಷ್ಣು - ಅಂಬಿ ಮಾಡಬೇಕಿದ್ದ ಈ ಸಿನಿಮಾ ಕನಸಾಗಿಯೇ ಉಳಿದಿದೆ
ನಮ್ಮ ಕನ್ನಡದಲ್ಲಿಯೇ ಎಷ್ಟೊಂದು ಕತೆಗಳು ಇವೆ. ನಿರ್ದೇಶಕರು ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಕಥೆಗಳನ್ನು ಸಿನಿಮ್ಯಾಟಿಕ್ ಆಗಿ ಹೇಳುವುದು ಹೇಗೆ ಎನ್ನುವುದನ್ನು ಯೋಚನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.