Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಮೇಕ್ ಸಿನಿಮಾಗಳ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಬೇಸರ
ಕನ್ನಡ ಚಿತ್ರರಂಗದಲ್ಲಿ ರಿಮೇಕ್ ಸಿನಿಮಾಗಳು ಆಗಾಗ ಬರುತ್ತಿರುತ್ತದೆ. ಬೇರೆ ಭಾಷೆಯ ಸಿನಿಮಾಗಳನ್ನು ಇಲ್ಲಿ ರಿಮೇಕ್ ಮಾಡುವ ಬಗ್ಗೆ ಕೆಲವು ನಿರ್ದೇಶಕರಿಗೆ ವಿರೋಧ ಇದೆ.
ಇದೀಗ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸಹ ರಿಮೇಕ್ ಸಿನಿಮಾಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅರ್ಥವಿಲ್ಲದ ಚಿತ್ರಗಳಲ್ಲಿ ಅರ್ಥವಿಲ್ಲದ ಹಾಗೆ ರಿಮೇಕ್ ಮಾಡುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ವಿಷ್ಣು ಕಪಾಳಕ್ಕೆ ಸುಹಾಸಿನಿ ಹೊಡೆದ ದೃಶ್ಯ ಬಾಬು ಎಂದಿಗೂ ಮರೆಯೋಲ್ಲ!
''ಕನ್ನಡ ಚಿತ್ರಗಳು ಸೋಲಲು ಕಾರಣವೇ ನಮ್ಮ ತನ ಇರದೆ ಇರುವುದು. ಇಂದಿನ ಸಿನಿಮಾಗಳಲ್ಲಿ ನಮ್ಮ ಕಥೆ ಇಲ್ಲ, ನಮ್ಮ ತನ ಇಲ್ಲ, ನಮ್ಮ ಸಂಸ್ಕೃತಿ ಇಲ್ಲ, ನಮ್ಮ ಸಂಸ್ಕಾರ ಇಲ್ಲ. ನಮ್ಮ ಮಣ್ಣಿನ ವಾಸನೆ ಇಲ್ಲ. ಒಂದು ತಮಿಳು ಸಿನಿಮಾವನ್ನು ರಿಮೇಕ್ ಮಾಡಿ ಅಲ್ಲಿನ ಮೀಸೆ ಅಂಟಿಸಿಕೊಂಡು ಬರುತ್ತಾರೆ.'' ಎಂದು ರಿಮೇಕ್ ಚಿತ್ರಗಳ ಸ್ಥಿತಿಯನ್ನು ವಿವರಿಸಿದ್ದಾರೆ.
''ನಾನು ಎಂದಿಗೂ ಪ್ರೇಕ್ಷಕರನ್ನು ಬೈಯುವುದಿಲ್ಲ. ಅವರು ಎಂದಿಗೂ ಸರಿ. ಇದನ್ನು ಇಡೀ ಪ್ರಪಂಚದಲ್ಲಿ ಎಲ್ಲರೂ ಹೇಳಿದ್ದಾರೆ. ಪ್ರೇಕ್ಷಕರೇ ಸುಪ್ರೀಂ ಕೋರ್ಟ್.'' ಎಂದು ಹೇಳುವ ಮೂಲಕ ಪ್ರೇಕ್ಷಕರ ತೀರ್ಪೇ ಅಂತಿಮ ಎಂದಿದ್ದಾರೆ.
ವಿಷ್ಣು - ಅಂಬಿ ಮಾಡಬೇಕಿದ್ದ ಈ ಸಿನಿಮಾ ಕನಸಾಗಿಯೇ ಉಳಿದಿದೆ
ನಮ್ಮ ಕನ್ನಡದಲ್ಲಿಯೇ ಎಷ್ಟೊಂದು ಕತೆಗಳು ಇವೆ. ನಿರ್ದೇಶಕರು ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಕಥೆಗಳನ್ನು ಸಿನಿಮ್ಯಾಟಿಕ್ ಆಗಿ ಹೇಳುವುದು ಹೇಗೆ ಎನ್ನುವುದನ್ನು ಯೋಚನೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.