Don't Miss!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- News ಡಾ.ಮಂಜುನಾಥ್ ಅವರಿಗೆ ಕೇಂದ್ರ ಸಚಿವ ಸ್ಥಾನ: ಸುಳಿವು ಕೊಟ್ಟ ಹೆಚ್ ಡಿ ದೇವೇಗೌಡ
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಪ್ಪು ತಿಳಿಬೇಡಿ...ಉಪೇಂದ್ರ ಬಗ್ಗೆ ರಾಜೇಶ್ ಕೃಷ್ಣನ್ ಹೇಳಿದ್ದು ಹಾಗಲ್ಲ..!
ಕನ್ನಡದ ಗಾಯಕ ರಾಜೇಶ್ ಅವರು ಸದ್ಯ ನಟ ಉಪೇಂದ್ರ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದರು. ಕಿರುತೆರೆಯ 'ಸೂಪರ್ ಟಾಕ್ ಟೈಂ' ಕಾರ್ಯಕ್ರಮಕ್ಕೆ ಆಗಮಿಸಿದ ರಾಜೇಶ್ ಕೃಷ್ಣನ್ ಉಪೇಂದ್ರ ಬಗ್ಗೆ ಒಂದು ಕಾಮೆಂಟ್ ಮಾಡಿದ್ದರು.
ಕಾರ್ಯಕ್ರಮದಲ್ಲಿ ಅಕುಲ್ 'ಯಾವ ನಟ ಹಾಡುವುದನ್ನು ನಿಲ್ಲಿಸಬೇಕು ಇವತ್ತಿನಿಂದ....' ಅಂತ ಪ್ರಶ್ನೆ ಕೇಳಿದ್ದರು. ಆಗ ರಾಜೇಶ್ ಕೃಷ್ಣನ್ ಉಪೇಂದ್ರ ಅವರ ಹೆಸರು ತೆಗೆದುಕೊಂಡಿದ್ದರು. ರಾಜೇಶ್ ಕೃಷ್ಣ ಅವರ ಈ ಮಾತಿಗೆ ಉಪೇಂದ್ರ ಅಭಿಮಾನಿಗಳು ಕೋಪಗೊಂಡಿದ್ದರು. ಆ ಬಳಿಕ ಈಗ ರಾಜೇಶ್ ಕೃಷ್ಣನ್ ಈ ವಿವಾದದ ಬಗ್ಗೆ ಫೇಸ್ ಬುಕ್ ಲೈವ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಮುಂದೆ ಓದಿ...
ತಮಾಷೆ ಕಾರ್ಯಕ್ರಮ
''ಸೂಪರ್ ಟಾಕ್ ಟೈಂ' ಒಂದು ತಮಾಷೆಯ ಕಾರ್ಯಕ್ರಮ. ಆ ಕಾರ್ಯಕ್ರಮದಲ್ಲಿ ನಿರೂಪಕ ಅಕುಲ್ 'ಕನ್ನಡದ ಯಾವ ನಟರು ಹಾಡುವುದನ್ನು ನಿಲ್ಲಿಸಬೇಕು' ಅಂತ ಕೇಳಿದರು. ಆಗ ನಾನು ಉಪೇಂದ್ರ ಅಂತ ಹೇಳಿದ್ದೆ'' ಎಂದು ರಾಜೇಶ್ ಕೃಷ್ಣನ್ ಸ್ಪಷ್ಟನೆ ನೀಡಿದ್ದಾರೆ.
ಉಪೇಂದ್ರ ಬಗ್ಗೆ ಹಾಗೆ ಹೇಳಿಲ್ಲ
''ಅಕುಲ್ ಪ್ರಶ್ನೆಗೆ ನಾನು ಹೇಳಿದಾಗ ನಾನು ಉಪೇಂದ್ರ.. ಪುನೀತ್... ಈ ರೀತಿಯ ನಟರು ಅಷ್ಟೊಂದು ಚೆನ್ನಾಗಿ ಹಾಡಿದರೆ ನಮಗೆ ಕೆಲಸ ಇರುವುದಿಲ್ಲ. ಅದಕ್ಕೆ ಉಪೇಂದ್ರ ಅವರು ಹಾಡುವುದನ್ನು ನಿಲ್ಲಿಸಬೇಕು ಅಂತ ಹೇಳಿದ್ದೆ'' - ರಾಜೇಶ್ ಕೃಷ್ಣನ್, ಗಾಯಕ.
ಎಡಿಟ್ ಆಗಿದೆ
''ನನ್ನ ಮಾತನ್ನು ಪೂರ್ಣವಾಗಿ ಹಾಕಿದರೆ ಕಾರ್ಯಕ್ರಮದ ಸಮಯ ಜಾಸ್ತಿ ಆಗುತ್ತದೆ ಎಂದು ಅದನ್ನು ಎಟಿಟ್ ಮಾಡಲಾಗಿದೆ. ಆ ಕಾರಣದಿಂದ ಇದು ತಪ್ಪಾಗಿ ಬಿಂಬಿತವಾಗಿದೆ ಅಷ್ಟೆ'' - ರಾಜೇಶ್ ಕೃಷ್ಣನ್, ಗಾಯಕ.
ನಾನು ಅವರ ಅಭಿಮಾನಿ
''ನಾನು ಉಪೇಂದ್ರ ಅವರ ಮೊದಲ ಸಿನಿಮಾದಿಂದ ಹಾಡಿಕೊಂಡು ಬಂದಿದ್ದೇನೆ. ನಾನು ಕೂಡ ಅವರ ಹಾಡಿಗೆ ಅಭಿಮಾನಿ. ಉಪೇಂದ್ರ ಅವರು ನನಗೆ ನಟ ಆಗುವುದಕ್ಕಿಂತ ಮುಂಚೆಯಿಂದಲೂ ಪರಿಚಯ. ನನ್ನ ಆ ಮಾತನ್ನು ಯಾರು ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ'' - ರಾಜೇಶ್ ಕೃಷ್ಣನ್, ಗಾಯಕ.
ಏನಿದು ವಿವಾದ..?
'ಸೂಪರ್ ಟಾಕ್ ಟೈಂ' ಕಾರ್ಯಕ್ರಮದಲ್ಲಿ 'ಯಾವ ನಟ ಹಾಡುವುದನ್ನು ನಿಲ್ಲಿಸಬೇಕು ಇವತ್ತಿನಿಂದ....' ಎಂದು ಗಾಯಕ ರಾಜೇಶ್ ಕೃಷ್ಣನ್ ಗೆ ಅಕುಲ್ ಬಾಲಾಜಿ ಪ್ರಶ್ನೆ ಕೇಳಿದರು. ಜೊತೆಗೆ ''ಪುನೀತ್, ಶರಣ್, ಸುದೀಪ್, ಉಪೇಂದ್ರ'' ಎಂಬ ನಾಲ್ಕು ಆಯ್ಕೆಗಳನ್ನು ಮುಂದಿಟ್ಟರು ನಾಲ್ಕು ಆಯ್ಕೆಗಳ ಪೈಕಿ 'ಉಪೇಂದ್ರ' ಹೆಸರನ್ನು ರಾಜೇಶ್ ಕೃಷ್ಣನ್ ಹೇಳಿದರು. 'ಸೂಪರ್ ಟಾಕ್ ಟೈಮ್' ಕಾರ್ಯಕ್ರಮದಲ್ಲಿ 'ಸ್ಪರ್ಶ' ರೇಖಾ, 'ಗಾಳಿಪಟ' ಭಾವನ ಜೊತೆ ಗಾಯಕ ರಾಜೇಶ್ ಕೃಷ್ಣನ್ ಅತಿಥಿಯಾಗಿ ಭಾಗವಹಿಸಿದ್ದರು.