Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆಯಲ್ಲಿ ರವಿ ಬೆಳಗೆರೆ 'ಹೇಳಿ ಹೋಗು ಕಾರಣ'
ಭಾವನಾ ಬೆಳಗೆರೆ ನಿರ್ಮಿಸುತ್ತಿರುವ ಈ ಧಾರಾವಾಹಿಯ ಚಿತ್ರೀಕರಣ ಈಗಾಗಲೆ ಭರದಿಂದ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ಸ್ವತಃ ರವಿ ಬೆಳಗೆರೆ ಅವರು ಪಾತ್ರವೊಂದನ್ನೂ ಪೋಷಿಸುತ್ತಿದ್ದಾರೆ ಎನ್ನುತ್ತವೆ ಮೂಲಗಳು. ಧಾರಾವಾಹಿ ಯಾವ ಟಿವಿ ವಾಹಿನಿಯಲ್ಲಿ ಮೂಡಿಬರಲಿದೆ, ಎಂದಿನಿಂದ ಆರಂಭ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಶೀಘ್ರದಲ್ಲೇ ಸಿಗಲಿದೆ.
2003ರಲ್ಲಿ ಮೊದಲ ಮುದ್ರಣ ಕಂಡ 'ಹೇಳಿ ಹೋಗು ಕಾರಣ' ಕಾದಂಬರಿ ಈಗಾಗಲೆ ಹಲವಾರು ಮರು ಮುದ್ರಣಗಳನ್ನು ಕಂಡಿದೆ. ಈ ಹಿಂದೆಮ್ಮೊ ಇದೇ ಧಾರಾವಾಹಿಯನ್ನು ಸಿನಿಮಾ ಮಾಡಲು ನಿರ್ದೇಶಕ ಗುರುಪ್ರಸಾದ್ ಮುಂದಾಗಿದ್ದರು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಧಾರಾವಾಹಿ ರೂಪದಲ್ಲಿ ಕಿರುತೆರೆ ವೀಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ.
ಈ ಕಾದಂಬರಿ ಬಗ್ಗೆ ರವಿ ಬೆಳಗೆರೆ ಹೀಗೆನ್ನುತ್ತಾರೆ, "ಕೆಲವು ಲಕ್ಷ ಜನ ಹುಡುಗರು ತಮ್ಮನ್ನು ಈ ಕಾದಂಬರಿಯ ನಾಯಕ ಹಿಮವಂತನೊಂದಿಗೆ ಐಡೆಂಟಿಫೈ ಮಾಡಿಕೊಂಡರು. ಹಾಗೆಯೇ ಅನೇಕ ಹುಡುಗಿಯರು ತಮ್ಮೊಳಗಿನ ಕೊಂಚ ಪ್ರಾರ್ಥನಾ- ಕೊಂಚ ಊರ್ಮಿಳಾರ ವ್ಯಕ್ತಿತ್ವಗಳ ಮಧ್ಯೆ ಜೀಕುತ್ತ ಖುಷಿಪಟ್ಟರು, ನಾಚಿಕೊಂಡರು, ನನ್ನನ್ನು ಸಣ್ಣಗೆ ಗದರಿಕೊಂಡರು...
ಪತ್ರಿಕೆಯಲ್ಲಿ ವಾರ ಧಾರಾವಾಹಿಯಾಗಿ ಪ್ರಕಟಗೊಂಡ ಈ ಕಾದಂಬರಿ, ಪ್ರಕಟವಾಗುತ್ತಿದ್ದಷ್ಟು ದಿನವೂ ಇದು ಮನೆಮನೆಯ ಚರ್ಚೆಯಾಗಿತ್ತು. ಎಲ್ಲೋ ರಸ್ತೆಯಲ್ಲಿ ಹೋಗುತ್ತಿದ್ದವನನ್ನು ನಿಲ್ಲಿಸಿ 'ದಯವಿಟ್ಟು ಹಿಮವಂತನಿಗೆ ಮೋಸ ಮಾಡಬೇಡಿ ಸಾರ್, ಅವನಿಗೆ ಪ್ರಾರ್ಥನಾ ಸಿಗೋ ಹಾಗೆ ಮಾಡಿ' ಅಂತ ಗೋಗರೆದ ಹುಡುಗರು ಎಷ್ಟು ಜನವೋ?" ಎಂದು ಕಾದಂಬರಿಯ ಬೆನ್ನುಡಿಯಲ್ಲಿ ಹೇಳಿದ್ದಾರೆ. (ಒನ್ಇಂಡಿಯಾ ಕನ್ನಡ)