Don't Miss!
- Sports
IND vs NZ 3rd T20: ಅಹಮದಾಬಾದ್ ಪಿಚ್ ಬಗ್ಗೆ ಆಸಕ್ತಿಕರ ಮಾಹಿತಿ ನೀಡಿದ ಕ್ಯುರೇಟರ್: ಹೇಗಿರಲಿದೆ ಪಿಚ್?
- News
7th Pay Commission; ವೇತನ ಶ್ರೇಣಿ, ಹೊಸ ವೇತನ ರಚನೆ ಮಾನದಂಡಗಳು
- Lifestyle
Horoscope Today 1 Feb 2023: ಬುಧವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Technology
ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ವಿವೋ Y100; ಖರೀದಿಗೆ ಕ್ಯೂ ಖಚಿತ!
- Automobiles
ಭಾರತದಲ್ಲಿ ಹ್ಯುಂಡೈ i20 ಕಾರುಗಳ ಬೆಲೆ ಏರಿಕೆ
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಿರುತೆರೆಯಲ್ಲಿ ರವಿ ಬೆಳಗೆರೆ 'ಹೇಳಿ ಹೋಗು ಕಾರಣ'
ಭಾವನಾ ಬೆಳಗೆರೆ ನಿರ್ಮಿಸುತ್ತಿರುವ ಈ ಧಾರಾವಾಹಿಯ ಚಿತ್ರೀಕರಣ ಈಗಾಗಲೆ ಭರದಿಂದ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ಸ್ವತಃ ರವಿ ಬೆಳಗೆರೆ ಅವರು ಪಾತ್ರವೊಂದನ್ನೂ ಪೋಷಿಸುತ್ತಿದ್ದಾರೆ ಎನ್ನುತ್ತವೆ ಮೂಲಗಳು. ಧಾರಾವಾಹಿ ಯಾವ ಟಿವಿ ವಾಹಿನಿಯಲ್ಲಿ ಮೂಡಿಬರಲಿದೆ, ಎಂದಿನಿಂದ ಆರಂಭ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಶೀಘ್ರದಲ್ಲೇ ಸಿಗಲಿದೆ.
2003ರಲ್ಲಿ ಮೊದಲ ಮುದ್ರಣ ಕಂಡ 'ಹೇಳಿ ಹೋಗು ಕಾರಣ' ಕಾದಂಬರಿ ಈಗಾಗಲೆ ಹಲವಾರು ಮರು ಮುದ್ರಣಗಳನ್ನು ಕಂಡಿದೆ. ಈ ಹಿಂದೆಮ್ಮೊ ಇದೇ ಧಾರಾವಾಹಿಯನ್ನು ಸಿನಿಮಾ ಮಾಡಲು ನಿರ್ದೇಶಕ ಗುರುಪ್ರಸಾದ್ ಮುಂದಾಗಿದ್ದರು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಧಾರಾವಾಹಿ ರೂಪದಲ್ಲಿ ಕಿರುತೆರೆ ವೀಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ.
ಈ ಕಾದಂಬರಿ ಬಗ್ಗೆ ರವಿ ಬೆಳಗೆರೆ ಹೀಗೆನ್ನುತ್ತಾರೆ, "ಕೆಲವು ಲಕ್ಷ ಜನ ಹುಡುಗರು ತಮ್ಮನ್ನು ಈ ಕಾದಂಬರಿಯ ನಾಯಕ ಹಿಮವಂತನೊಂದಿಗೆ ಐಡೆಂಟಿಫೈ ಮಾಡಿಕೊಂಡರು. ಹಾಗೆಯೇ ಅನೇಕ ಹುಡುಗಿಯರು ತಮ್ಮೊಳಗಿನ ಕೊಂಚ ಪ್ರಾರ್ಥನಾ- ಕೊಂಚ ಊರ್ಮಿಳಾರ ವ್ಯಕ್ತಿತ್ವಗಳ ಮಧ್ಯೆ ಜೀಕುತ್ತ ಖುಷಿಪಟ್ಟರು, ನಾಚಿಕೊಂಡರು, ನನ್ನನ್ನು ಸಣ್ಣಗೆ ಗದರಿಕೊಂಡರು...
ಪತ್ರಿಕೆಯಲ್ಲಿ ವಾರ ಧಾರಾವಾಹಿಯಾಗಿ ಪ್ರಕಟಗೊಂಡ ಈ ಕಾದಂಬರಿ, ಪ್ರಕಟವಾಗುತ್ತಿದ್ದಷ್ಟು ದಿನವೂ ಇದು ಮನೆಮನೆಯ ಚರ್ಚೆಯಾಗಿತ್ತು. ಎಲ್ಲೋ ರಸ್ತೆಯಲ್ಲಿ ಹೋಗುತ್ತಿದ್ದವನನ್ನು ನಿಲ್ಲಿಸಿ 'ದಯವಿಟ್ಟು ಹಿಮವಂತನಿಗೆ ಮೋಸ ಮಾಡಬೇಡಿ ಸಾರ್, ಅವನಿಗೆ ಪ್ರಾರ್ಥನಾ ಸಿಗೋ ಹಾಗೆ ಮಾಡಿ' ಅಂತ ಗೋಗರೆದ ಹುಡುಗರು ಎಷ್ಟು ಜನವೋ?" ಎಂದು ಕಾದಂಬರಿಯ ಬೆನ್ನುಡಿಯಲ್ಲಿ ಹೇಳಿದ್ದಾರೆ. (ಒನ್ಇಂಡಿಯಾ ಕನ್ನಡ)