Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಮಿಡಿ ಕಿಲಾಡಿಗಳು' ವೇದಿಕೆಗೆ ಬಂದ ಕ್ರೇಜಿಸ್ಟಾರ್ ರವಿಚಂದ್ರನ್
ಜೀ ಕನ್ನಡ ವಾಹಿನಿಯ ಜನಪ್ರಿಯ ಹಾಸ್ಯ ಕಾರ್ಯಕ್ರಮ 'ಕಾಮಿಡಿ ಕಿಲಾಡಿಗಳು' ಸೀಸನ್ 2 ಈಗಾಗಲೇ ಪ್ರಸಾರ ಆಗುತ್ತಿದೆ. ಕೆಲವರು ಕಾರ್ಯಕ್ರಮವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಳೆದ ಬಾರಿಯ 'ಕಾಮಿಡಿ ಕಿಲಾಡಿಗಳು'ಗೆ ಹೋಲಿಸಿದರೆ ಇದು ಅಷ್ಟು ಮಜಾ ನೀಡುತ್ತಿಲ್ಲ ಎನ್ನುತ್ತಿದ್ದಾರೆ.
'ಆಪ್ತಮಿತ್ರ 2' ಚಿತ್ರಕ್ಕೆ ಕ್ರೇಜಿ ಸ್ಟಾರ್ ರವಿಚಂದ್ರನ್ ಹೀರೋ!
ಇದರ ಜೊತೆಗೆ ಈಗ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ರವಿಚಂದ್ರನ್ 'ಕಾಮಿಡಿ ಕಿಲಾಡಿಗಳು' ವೇದಿಕೆ ಏರಿದ್ದಾರೆ. ರವಿಚಂದ್ರನ್ ಅವರ ಸಂಚಿಕೆಯ ಚಿತ್ರೀಕರಣ ಈಗಾಗಲೇ ನಡೆದಿದೆ.
ಚಿತ್ರೀಕರಣದ ವೇಳೆ ರವಿಚಂದ್ರನ್ ಜೊತೆಗೆ ಜಗ್ಗೇಶ್, ಯೋಗರಾಜ್ ಭಟ್, ರಕ್ಷಿತಾ ಮತ್ತು ಮಾಸ್ಟರ್ ಆನಂದ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. 'ಜೀ ಕನ್ನಡ' ವಾಹಿನಿ ಇನ್ಟಾಗ್ರಾಮ್ ಖಾತೆಯಲ್ಲಿ ಈ ಫೋಟೋವನ್ನು ಹಾಕಲಾಗಿದೆ. ಇನ್ನೂ ಫೋಟೋ ನೋಡಿರುವ ಅಭಿಮಾನಿಗಳು ಖುಷಿ ಆಗಿದ್ದಾರೆ. ರವಿಚಂದ್ರನ್ 'ಸರಿಗಮಪ' ಕಾರ್ಯಕ್ರಮಕ್ಕೆ ಸಹ ಬರಬೇಕು ಎನ್ನುವುದು ಅನೇಕರ ಕೋರಿಕೆ ಆಗಿದೆ. ಹಂಸಲೇಖ ಮತ್ತು ರವಿಚಂದ್ರನ್ ಅವರನ್ನು ಒಂದೇ ಕಾರ್ಯಕ್ರಮದಲ್ಲಿ ನೋಡಲು ಅವರ ಅಭಿಮಾನಿಗಳು ಬಯಸಿದ್ದಾರೆ.
ಅಂದಹಾಗೆ, 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟಗೆ ಪ್ರಸಾರ ಆಗಲಿದೆ.