Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲಾ ಓಕೆ, ಕೋಟ್ಯಾಧಿಪತಿ ಹಾಟ್ ಸೀಟಿನಲ್ಲಿ ಉಪೇಂದ್ರ ಯಾಕೆ?
ಏಪ್ರಿಲ್ 24 ವರನಟ ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ. ರಾಜ್ ಹುಟ್ಟುಹಬ್ಬವೆಂದರೆ ಇಡೀ ಕನ್ನಡ ಚಿತ್ರೋದ್ಯಮಕ್ಕೆ ಹಬ್ಬದ ಸಂಭ್ರಮ. ಸಿನಿಮಾ ಲೋಕದ ದಂತಕತೆ ಡಾ. ರಾಜ್ ಜನ್ಮದಿನದ ಕನ್ನಡದ ಕೋಟ್ಯಾಧಿಪತಿ ವಿಶೇಷ ಸಂಚಿಕೆಯಲ್ಲಿ ಸುವರ್ಣ ವಾಹಿನಿ ರಿಯಲ್ ಸ್ಟಾರ್ ಉಪೇಂದ್ರ ಅವರನ್ನು ಆಹ್ವಾನಿಸಿದೆ.
ನಾನು ಸೂಪರ್ರೋ..ರಂಗಾ ಎಂದು ಉಪೇಂದ್ರ ಹಾಟ್ ಸೀಟಿನಲ್ಲಿ ಕೂತು ಲಕ್ಷ.. ಲಕ್ಷ ಗೆಲ್ಲಲು ಒಂದು ಸದುದ್ದೇಶ ಇಟ್ಟುಕೊಂಡು ಈ ರಿಯಾಲಿಟಿ ಶೋನಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನಿರೂಪಕ ಪುನೀತ್ ಜೊತೆ ಉಪೇಂದ್ರ ಬರೀ ಓಳು.. ಬರೀ ಓಳು ಹಾಡಿಗೆ ಹೆಜ್ಜೆ ಕೂಡಾ ಹಾಕಲಿದ್ದಾರೆ. ಅಷ್ಟೇ ಅಲ್ಲದೆ ಆಲ್ ಟೈಮ್ ಫೇಮಸ್ ರಕ್ತ ಕಣ್ಣೀರು ಚಿತ್ರದ ಕೆಲವು ಡೈಲಾಗ್ ಬೇರೆ ಹೊಡೆಯಲಿದ್ದಾರೆ ಮ್ಯಾನ್.. ಡೈಲಾಗ್ ಹೊಡೆಯಲಿದ್ದಾರೆ.
ಕನ್ನಡ ಚಿತ್ರರಂಗದ ಈ ಇಬ್ಬರೂ ಖ್ಯಾತ ನಟರು ತಮ್ಮ ಮಾಹಿತಿ, ಅನುಭವಗಳನ್ನು ಮತ್ತು ಉಪೇಂದ್ರ ತಮ್ಮ ಜೀವನದ ಕುತೂಹಲಕಾರಿ ಅಂಶಗಳನ್ನು ಹಂಚಿಕೊಳ್ಳುತ್ತಾ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಕೋಟಿ ಗೆಲ್ಲುವ ಆಟವಾಡಲಿದ್ದಾರೆ.
ಸುವರ್ಣ ವಾಹಿನಿ ರಾಜ್ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಉಪ್ಪಿಯನ್ನು ಆಹ್ವಾನಿಸಿದ್ದಕ್ಕೆ ಕಾರಣವೇನು? ಸ್ಲೈಡಿನಲ್ಲಿ ನೋಡಿ..
ಉಪ್ಪಿ ಇನ್ ಕೋಟ್ಯಾಧಿಪತಿ
ಉಪೇಂದ್ರ ನಿರ್ದೇಶನ ಮಾಡಿದ ಓಂ ಚಿತ್ರವನ್ನು ನಿರ್ಮಿಸಿದ್ದೇ ರಾಜಕುಮಾರ್ ಫ್ಯಾಮಿಲಿ. ವಜ್ರೇಶ್ವರಿ ಕಂಬೈನ್ಸ್ ನಲ್ಲಿ ಮೂಡಿಬಂದ ಓಂ ಚಿತ್ರ ಕನ್ನಡ ಚಿತ್ರರಂಗದಲ್ಲಿ ಇವತ್ತಿಗೂ ದಾಖಲೆ ಪ್ರದರ್ಶನ ಕಾಣುತ್ತಲೇ ಇದೆ.
ಉಪ್ಪಿ ಇನ್ ಕೋಟ್ಯಾಧಿಪತಿ
ಉಪೇಂದ್ರ ಓಂ ಚಿತ್ರವನ್ನು ಆ ಮಟ್ಟದಲ್ಲಿ ನಿರ್ದೇಶನ ಮಾಡಿದ್ದರು. ಶಿವಣ್ಣನ ವೃತ್ತಿ ಜೀವನಕ್ಕೆ ಒಂದು ಅದ್ಭುತ ತಿರುವು ತಂದುಕೊಟ್ಟ ಚಿತ್ರ. ಇವತ್ತಿಗೂ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡರೆ ಕನಿಷ್ಟ ಪಕ್ಷ ಲಕ್ಷದಷ್ಟಾದರೂ ಲಾಭ ಗಳಿಸೇ ಗಳಿಸುತ್ತದೆ.
ಉಪ್ಪಿ ಇನ್ ಕೋಟ್ಯಾಧಿಪತಿ
ಅಂಥ ಓಂ ಚಿತ್ರವನ್ನು ನಿರ್ದೇಶಿಸಿ, ಚಿತ್ರೋದ್ಯಮದಲ್ಲಿ ದೊಡ್ಡ ಮೊತ್ತದ ಹಣವನ್ನು ಉಪೇಂದ್ರ ಮೊಟ್ಟಮೊದಲ ಬಾರಿಗೆ ಪಡೆದಿದ್ದು ಸ್ವತಃ ಪಾರ್ವತಮ್ಮ ರಾಜ್ಕುಮಾರ್ ಅವರ ಕೈಯಿಂದ. ಡಾ.ರಾಜ್ ಕೂಡ ಓಂ ಚಿತ್ರ ನೋಡಿ ಉಪ್ಪಿಯ ಬೆನ್ನು ತಟ್ಟಿದ್ದರು.
ಉಪ್ಪಿ ಇನ್ ಕೋಟ್ಯಾಧಿಪತಿ
ಅಲ್ಲಿಂದ ಇಲ್ಲಿ ತನಕ ಉಪ್ಪಿ ನಡೆದದ್ದೇ ಹಾದಿ ಎನ್ನುವಂತೇ ಅವರು ಚಿತ್ರೋದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಅಂಥ ಉಪ್ಪಿ ಹಾಟ್ ಸೀಟಿಗೆ ಬಂದು ಲಕ್ಷ ಲಕ್ಷ ಗೆದ್ದಿದ್ದಾರೆ.
ಉಪ್ಪಿ ಇನ್ ಕೋಟ್ಯಾಧಿಪತಿ
ಅಂಥದ್ದೊಂದು ಲಕ್ಷಾಂತರ ಮೊತ್ತವನ್ನು (6 ಲಕ್ಷ 40 ಸಾವಿರ ರೂಪಾಯಿ) ನಗರದ ಮೈಸೂರು ರಸ್ತೆಯಲ್ಲಿರುವ ಬ್ಯಾಲಾಳು ಮತ್ತು ಚಿಂಚಲಗೂಪ್ಪೆ ಗ್ರಾಮದಲ್ಲಿರುವ ಎರಡು ಕನ್ನಡ ಮಾಧ್ಯಮ ಶಾಲೆಗಳಿಗೆ ಸಮವಾಗಿ ಹಂಚಬೇಕು ಎನ್ನುವ ಚಾರಿಟೆಬಲ್ ಉದ್ದೇಶ ಉಪೇಂದ್ರ ಅವರದ್ದಾಗಿದೆ. ಈ ಕಾರ್ಯಕ್ರಮ ಇದೇ ಬುಧವಾರ ಎಪ್ರಿಲ್ 24 ರಂದು ರಾತ್ರಿ 8 ಗಂಟೆಗೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.