Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆಮ್ಮೆಯ ಕನ್ನಡಿಗ' ಪ್ರಶಸ್ತಿಯನ್ನು ಶಾಲಾ ಮಕ್ಕಳಿಗೆ ಅರ್ಪಿಸಿದ ರಿಷಭ್
ನಿರ್ದೇಶಕ, ನಟ ರಿಷಭ್ ಶೆಟ್ಟಿ ಜೀ ಕನ್ನಡ ವಾಹಿನಿ ಕಡೆಯಿಂದ ಈ ವರ್ಷದ 'ಹೆಮ್ಮೆಯ ಕನ್ನಡಿಗ' ಪ್ರಶಸ್ತಿ ಪಡೆದಿದ್ದಾರೆ. 'ಹೆಮ್ಮೆಯ ಪ್ರತಿಭೆ' ಎಂದು ಜೀ ಕನ್ನಡ ವಾಹಿನಿ ಅವರನ್ನು ಗುರುತಿಸಿದೆ.
'ಕಿರಿಕ್ ಪಾರ್ಟಿ' ಸಿನಿಮಾದ ದೊಡ್ಡ ಯಶಸ್ಸಿ ನಂತರ 'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾ ಮಾಡಿದ ರಿಷಭ್ ಅಲ್ಲಿಯೂ ಗೆದ್ದರು. ಅವರ ಈ ಪ್ರಯೋಗಕ್ಕೆ ಒಳ್ಳೆಯ ಹೆಸರು, ಪ್ರಶಸ್ತಿಗಳು ಸಿಕ್ಕವು.
'ಹೆಮ್ಮೆಯ ಕನ್ನಡಿಗ' ವೇದಿಕೆಯಲ್ಲಿ ಜೈಜಗದೀಶ್ ಪುತ್ರಿಯರ ಡ್ಯಾನ್ಸ್
ನಿರ್ದೇಶನ ಮಾತ್ರವಲ್ಲದೆ ರಿಷಭ್ ಹೊಸ ಹೊಸ ರೀತಿಯ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನ, ನಿರ್ಮಾಣದ ಬಳಿಕ 'ಬೆಲ್ ಬಾಟಂ' ಮೂಲಕ ನಟನೆಯಲ್ಲಿಯೂ ಫುಲ್ ಮಾರ್ಕ್ ಪಡೆದಿದ್ದಾರೆ.
ಈ ರೀತಿ ಮೂರು ವಿಭಾಗದಲ್ಲಿ ಗುರುತಿಸಿಕೊಂಡು ಯಶಸ್ಸು ಗಳಿಸಿದ ರಿಷಬ್ ಶೆಟ್ಟಿ ಇದೀಗ ಜೀ ಕನ್ನಡ ವಾಹಿನಿಯ 'ಹೆಮ್ಮೆಯ ಪ್ರತಿಭೆ' ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖುಷಿ ವಿಷಯ ಏನೆಂದರೆ, ಈ ಪ್ರಶಸ್ತಿಯನ್ನು ಅವರು ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಮಕ್ಕಳಿಗೆ ಅರ್ಪಣೆ ಮಾಡಿದ್ದಾರೆ. ಈ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಅವರು ಹಂಚಿಕೊಂಡಿದ್ದಾರೆ.