Just In
Don't Miss!
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Lifestyle
ಆರೋಗ್ಯಕರ ಋತುಚಕ್ರಕ್ಕೆ ಇಲ್ಲಿವೆ ಕೆಲವೊಂದು ಯೋಗಾಸನಗಳು
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಂಡ್ಯ ಜನರಿಗಾಗಿ ರಾಕ್ ಲೈನ್ ವೆಂಕಟೇಶ್ ಕೈಗೊಂಡ ಹೊಸ ನಿರ್ಧಾರ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್ ಅವರು ಭರ್ಜರಿ ಜಯ ಕಂಡಿದ್ದರು. ಇದು ಸುಮಲತಾ ಅವರ ಗೆಲುವಲ್ಲ, 'ಇದು ಮಂಡ್ಯ ಜನರ ಗೆಲುವು, ಅಂಬರೀಶ್ ಅವರ ಗೆಲುವು' ಎಂದು ಸಕ್ಕರೆ ನಾಡಿನ ಜನರಿಗೆ ಅರ್ಪಿಸಿದರು.
ಸುಮಲತಾ ಅವರ ಪರವಾಗಿ ಜೋಡೆತ್ತುಗಳಾಗಿ ಶ್ರಮಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಇಬ್ಬರು 'ಸ್ವಾಭಿಮಾನ ವಿಜಯೋತ್ಸವ' ವೇದಿಕೆಯಲ್ಲಿ ಮಂಡ್ಯ ಜನರ ಪಾದಕ್ಕೆ ನಮಸ್ಕರಿಸಿದರು. ಸುಮಲತಾ ಅವರ ಗೆಲುವು ಸ್ವಾಭಿಮಾನದ ಗೆಲುವು ಎಂದು ಬಿಂಬಿಸಿದರು.
ಆಗಿನ ಕಾಲಕ್ಕೆ ದೊಡ್ಡ 'ಸ್ಟಾರ್' ಆಗಿದ್ದರು ಸುಮಲತಾ ಅಂಬರೀಶ್ ತಂದೆ
ಸುಮಲತಾ ಅವರನ್ನ ಗೆಲ್ಲಿಸಿದ್ದಕ್ಕಾಗಿ ಮಂಡ್ಯ ಜನರಿಗೆ ಏನಾದರೂ ಮಾಡಬೇಕು ಎಂಬ ಯೋಚನೆ ಮಾಡಿದ ರಾಕ್ ಲೈನ್ ವೆಂಕಟೇಶ್ ತಮ್ಮ ಸಿನಿಮಾಗಳ ಮೂಲಕ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
''ಇನ್ನು ಮುಂದೆ ರಾಕ್ ಲೈನ್ ವೆಂಕಟೇಶ್ ಮಾಡುವ ಪ್ರತಿಯೊಂದು ಚಿತ್ರದ ಟೈಟಲ್ ಕಾರ್ಡ್ ನಲ್ಲಿ 'ಮಂಡ್ಯ ಜಿಲ್ಲೆಯ ಸ್ವಾಭಿಮಾನ ಜನರ ಆಶೀರ್ವಾದದೊಂದಿಗೆ' ಎಂದು ಸಿನಿಮಾ ಆರಂಭಿಸುವುದಕ್ಕೆ ನಾನು ನಿರ್ಧರಿಸಿದ್ದೇನೆ'' ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ತಿಳಿಸಿದರು.
'ಸುಮಲತಾ ಅವರನ್ನೆ ಮದುವೆ ಆಗ್ತೀನಿ' ಎಂದು ಹೇಳಿದ್ರಂತೆ ಪುನೀತ್ ರಾಜ್ ಕುಮಾರ್
ಅಂಬರೀಶ್ ಅವರ ಆಪ್ತರಾಗಿದ್ದ ರಾಕ್ ಲೈನ್ ವೆಂಕಟೇಶ್, ಸುಮಲತಾ ಅವರ ಗೆಲುವಿಗಾಗಿ ಶ್ರಮಿಸಿದ್ದರು. ಸುಮಲತಾ ಅವರ ಪ್ರಚಾರ, ರಾಜಕೀಯ ಬೆಳವಣಿಗೆಯ ಹಿಂದೆ ಇವರು ಕೂಡ ಇದ್ದರು.