Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೇಮಶ್ರೀ ಸಾವಿನ ಹಿಂದೆ ಅಂತೆಕಂತೆಗಳ ಮಹಾಪೂರ
ಇದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬ ಬಗ್ಗೆ ಹೆಬ್ಬಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬುಧವಾರ (ಅ.10)ನಡೆದ ಮರಣೋತ್ತರ ಪರೀಕ್ಷೆ ವರದಿಯೂ ಇನ್ನೂ ಖಚಿತವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವರದಿಯನ್ನು ಕಳುಹಿಸಲಾಗಿದೆ.
ಏತನ್ಮಧ್ಯೆ ಪೊಲೀಸರು ಹೇಮಶ್ರೀ ಅವರ ಪತಿ ಸುರೇಂದ್ರ ಬಾಬು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಪೊಲೀಸರು ಆರೋಪಿಯನ್ನು 10 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
ಸರಿ ಮುಂದೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕು. ಇಷ್ಟಕ್ಕೂ ಹೇಮಶ್ರೀ ಯಾರು ಏನು ಎತ್ತ? ಈಕೆಯ ಸ್ವಂತ ಊರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹೊಸಹಳ್ಳಿ. ತಂದೆ ನಾಗರಾಜ್ ಬ್ಯಾಂಕ್ ಉದ್ಯೋಗಿಯಾಗಿದ್ದರು. ಹೇಮಶ್ರೀ ತಾಯಿ ಲೀಲಾವತಿ ಗೃಹಿಣಿ.
ಬೆಂಗಳೂರಿನಲ್ಲೇ ವಿದ್ಯಾಭ್ಯಾಸ ಪಡೆದ ಹೇಮಾಶ್ರೀ, ಚಿತ್ರರಂಗಕ್ಕೆ ಪ್ರವೇಶಿಸಿದ್ದು ಆಕಸ್ಮಿಕವಾಗಿ. ಬಳಿಕ ಈಕೆಗೆ ಜೆಡಿಎಸ್ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಸುರೇಂದ್ರ ಬಾಬು ಜೊತೆ ಜೂ.22, 2011ರಲ್ಲಿ ಮದುವೆ ಮಾಡಲಾಯಿತು. ಆದರೆ ಈ ಮದುವೆ ಆಕೆಗೆ ಇಷ್ಟವಿರಲಿಲ್ಲವಂತೆ.
ಮದುವೆಯಾದ ಮರುದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು ಹೇಮಶ್ರೀ. ಅಂದಿನ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರಿಗೆ ದೂರು ನೀಡಿದ್ದರು. ಕುಟುಂಬದವರು ಬಲವಂತವಾಗಿ 48 ವರ್ಷದ ವ್ಯಕ್ತಿಯ ಜೊತೆ ನನಗೆ ಮದುವೆ ಮಾಡಿದ್ದಾರೆ. ಆತನಿಗೆ ಈಗಾಗಲೆ ಮದುವೆಯಾಗಿದೆ ಎಂದು ದೂರು ನೀಡಿದ್ದರು.
ಬಳಿಯ ಹಿರಿಯರು ಮಧ್ಯಪ್ರವೇಶಿಸಿ ಸಂಧಾನ ನಡೆಸುವ ಮೂಲಕ ತಮ್ಮ ದೂರನ್ನು ಹೇಮಶ್ರೀ ವಾಪಸ್ಸು ಪಡೆದಿದ್ದರು. ಈ ದಂಪತಿಗಳು ಬೆಂಗಳೂರು ಬನಶಂಕರಿಯ 3ನೇ ಹಂತದಲ್ಲಿ ವಾಸವಾಗಿದ್ದರು. ಮದುವೆಯಾದ ಬಳಿಕ ಅಷ್ಟಾಗಿ ಸಿನೆಮಾಗಳ ಕಡೆಗೆ ಹೇಮಶ್ರೀ ಗಮನಹರಿಸುತ್ತಿರಲಿಲ್ಲ ಎನ್ನಲಾಗಿದೆ.
ಮಾನಸಿಕವಾಗಿ ನೊಂದಿದ್ದ ಆಕೆ ನಿಮ್ಹಾನ್ಸ್ ನಲ್ಲೂ ಚಿಕಿತ್ಸೆ ಪಡೆದಿದ್ದರಂತೆ. ಸಾಂಸಾರಿಕವಾಗಿ ಜರ್ಝರಿತಾಗಿದ್ದ ಆಕೆ ವೈದ್ಯರ ಸಲಹೆ ಮೇರೆಗೆ ನಿದ್ದೆ ಮಾತ್ರೆಗಳನ್ನು ಸೇವಿಸುತ್ತಿದ್ದರಂತೆ. ಗಂಡನೊಂದಿಗೆ ಪ್ರವಾಸಕ್ಕೆಂದು ಹೋದ ಹೇಮಶ್ರೀ ಬಾರದ ಲೋಕಕ್ಕೆ ಹೋಗಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಪುಕ್ಕಲು ಸ್ವಭಾವದವಳಲ್ಲ ಎನ್ನುತ್ತಾರೆ ಆಕೆಯನ್ನು ಹತ್ತಿರದಿಂದ ಬಲ್ಲ ಗೆಳೆತಿಯರು.