Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದ ಸರಿಗಮಪ ವೇದಿಕೆಗೆ ಬಂದ ಎಸ್.ಪಿ.ಬಾಲಸುಬ್ರಮಣ್ಯಂ
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಕಾರ್ಯಕ್ರಮ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 14 ದಿನದಿಂದ ದಿನಕ್ಕೆ ಹೆಚ್ಚು ಯಶಸ್ಸು ಕಾಣುತ್ತಿದೆ. ಪ್ರತಿಭಾನ್ವಿತ ಮಕ್ಕಳು ಅದ್ಭುತ ಗಾಯನದ ಮೂಲಕ ಕಾರ್ಯಕ್ರಮದ ಸೊಬಗನ್ನ ಹೆಚ್ಚಿಸುತ್ತಿದ್ದಾರೆ. ಅದಕ್ಕೆ ತೀರ್ಪುಗಾರರಾಗಿ ಹಂಸಲೇಖ, ವಿಜಯ ಪ್ರಕಾಶ್ ಮತ್ತು ಅರ್ಜುನ್ ಜನ್ಯ ಅವರು ಅಷ್ಟೇ ನ್ಯಾಯ ಒದಗಿಸುತ್ತಿದ್ದಾರೆ.
ಈ ವಾರ ಈ ಕಾರ್ಯಕ್ರಮಕ್ಕೆ ಬಹುದೊಡ್ಡ ಅತಿಥಿಯೊಬ್ಬರು ಆಗಮಿಸಿದ್ದಾರೆ. ಸಂಗೀತ ಲೋಕದ ದಿಗ್ಗಜ, ಲೀವಿಂಗ್ ಲೆಜೆಂಡ್ ಎಸ್.ಪಿ ಬಾಲಸುಬ್ರಮಣ್ಯಂ ಅವರು ಸೀಸನ್ 14ರ ಮೆರಗು ಹೆಚ್ಚಿಲು ಅತಿಥಿಯಾಗಿ ಆಗಮಿಸಿದ್ದಾರೆ.
ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳನ್ನ ವಿವಿಧ ಭಾಷೆಗಳಲ್ಲಿ ಹಾಡಿರುವ ಎಸ್.ಪಿ.ಬಿ ಅದೇಷ್ಟೋ ಯುವ ಪ್ರತಿಭೆಗಳಿಗೆ ಮಾದರಿ ಮತ್ತು ಗುರು. ಇಂತಹ ದಿಗ್ಗಜ ಹಾಡುಗಾರ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿರುವುದು ಸಂತಸ ತಂದಿದೆ ಎನ್ನುತ್ತಾರೆ ಕಾರ್ಯಕ್ರಮ ಆಯೋಜಕರು.
'ಕಾಮಿಡಿ ಕಿಲಾಡಿಗಳು' ವೇದಿಕೆಗೆ ಬಂದ ಕ್ರೇಜಿಸ್ಟಾರ್ ರವಿಚಂದ್ರನ್
ಈಗಾಗಲೇ ಕಾರ್ಯಕ್ರಮ ಚಿತ್ರೀಕರಣವಾಗಿದ್ದು, ಎಸ್.ಪಿ.ಬಿ ಆಗಮಿಸಿರುವ ಕೂಡ ಬಿಡುಗಡೆಯಾಗಿದೆ. ಇನ್ನು ಸಂಗೀತ ಅಭಿಮಾನಿಗಳು ಹಾಗೂ ಟಿವಿ ವೀಕ್ಷಕರು ಈ ವಾರದ ಎಪಿಸೋಡ್ ನಲ್ಲಿ ನೋಡಲು ಕಾಯುವಂತಾಗಿದೆ. ಫೆಬ್ರವರಿ 24 ಮತ್ತು 25ರ ರಾತ್ರಿ 7 ಗಂಟೆಯಿಂದ 9 ಗಂಟೆಯವರೆಗೂ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.