Don't Miss!
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀ ಕನ್ನಡದ ಸರಿಗಮಪ ವೇದಿಕೆಗೆ ಬಂದ ಎಸ್.ಪಿ.ಬಾಲಸುಬ್ರಮಣ್ಯಂ
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ಜನಪ್ರಿಯ ಕಾರ್ಯಕ್ರಮ ಸರಿಗಮಪ ಲಿಟ್ಲ್ ಚಾಂಪ್ಸ್ ಸೀಸನ್ 14 ದಿನದಿಂದ ದಿನಕ್ಕೆ ಹೆಚ್ಚು ಯಶಸ್ಸು ಕಾಣುತ್ತಿದೆ. ಪ್ರತಿಭಾನ್ವಿತ ಮಕ್ಕಳು ಅದ್ಭುತ ಗಾಯನದ ಮೂಲಕ ಕಾರ್ಯಕ್ರಮದ ಸೊಬಗನ್ನ ಹೆಚ್ಚಿಸುತ್ತಿದ್ದಾರೆ. ಅದಕ್ಕೆ ತೀರ್ಪುಗಾರರಾಗಿ ಹಂಸಲೇಖ, ವಿಜಯ ಪ್ರಕಾಶ್ ಮತ್ತು ಅರ್ಜುನ್ ಜನ್ಯ ಅವರು ಅಷ್ಟೇ ನ್ಯಾಯ ಒದಗಿಸುತ್ತಿದ್ದಾರೆ.
ಈ ವಾರ ಈ ಕಾರ್ಯಕ್ರಮಕ್ಕೆ ಬಹುದೊಡ್ಡ ಅತಿಥಿಯೊಬ್ಬರು ಆಗಮಿಸಿದ್ದಾರೆ. ಸಂಗೀತ ಲೋಕದ ದಿಗ್ಗಜ, ಲೀವಿಂಗ್ ಲೆಜೆಂಡ್ ಎಸ್.ಪಿ ಬಾಲಸುಬ್ರಮಣ್ಯಂ ಅವರು ಸೀಸನ್ 14ರ ಮೆರಗು ಹೆಚ್ಚಿಲು ಅತಿಥಿಯಾಗಿ ಆಗಮಿಸಿದ್ದಾರೆ.
ಸುಮಾರು 40 ಸಾವಿರಕ್ಕೂ ಅಧಿಕ ಹಾಡುಗಳನ್ನ ವಿವಿಧ ಭಾಷೆಗಳಲ್ಲಿ ಹಾಡಿರುವ ಎಸ್.ಪಿ.ಬಿ ಅದೇಷ್ಟೋ ಯುವ ಪ್ರತಿಭೆಗಳಿಗೆ ಮಾದರಿ ಮತ್ತು ಗುರು. ಇಂತಹ ದಿಗ್ಗಜ ಹಾಡುಗಾರ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿರುವುದು ಸಂತಸ ತಂದಿದೆ ಎನ್ನುತ್ತಾರೆ ಕಾರ್ಯಕ್ರಮ ಆಯೋಜಕರು.
'ಕಾಮಿಡಿ ಕಿಲಾಡಿಗಳು' ವೇದಿಕೆಗೆ ಬಂದ ಕ್ರೇಜಿಸ್ಟಾರ್ ರವಿಚಂದ್ರನ್
ಈಗಾಗಲೇ ಕಾರ್ಯಕ್ರಮ ಚಿತ್ರೀಕರಣವಾಗಿದ್ದು, ಎಸ್.ಪಿ.ಬಿ ಆಗಮಿಸಿರುವ ಕೂಡ ಬಿಡುಗಡೆಯಾಗಿದೆ. ಇನ್ನು ಸಂಗೀತ ಅಭಿಮಾನಿಗಳು ಹಾಗೂ ಟಿವಿ ವೀಕ್ಷಕರು ಈ ವಾರದ ಎಪಿಸೋಡ್ ನಲ್ಲಿ ನೋಡಲು ಕಾಯುವಂತಾಗಿದೆ. ಫೆಬ್ರವರಿ 24 ಮತ್ತು 25ರ ರಾತ್ರಿ 7 ಗಂಟೆಯಿಂದ 9 ಗಂಟೆಯವರೆಗೂ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.