Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿ.ವಿ.ಪುರಂನಲ್ಲಿ ಬಾದಾಮಿ ಹಾಲು ಮಾರಿದ ಪ್ರಜ್ವಲ್ ದೇವರಾಜ್
Recommended Video
ಮನರಂಜನೆ ಜೊತೆಗೆ ಸಾಮಾಜಿಕ ಕಳಕಳಿ ಹೊಂದಿರುವ ಕಾರ್ಯಕ್ರಮ ಉದಯ ಟಿವಿಯಲ್ಲಿ ಪ್ರಸಾರ ಆಗುತ್ತಿರುವ 'ಸದಾ ನಿಮ್ಮೊಂದಿಗೆ'. ಕಷ್ಟದಲ್ಲಿ ಇರುವವರಿಗೆ ಸಹಾಯ ಹಸ್ತ ಚಾಚುವ ಉದ್ದೇಶ ಈ ಕಾರ್ಯಕ್ರಮದ್ದು.
ತೆರೆ ಮೇಲಿನ ಹೀರೋ-ಹೀರೋಯಿನ್ ಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನೊಂದ ಕುಟುಂಬದವರಿಗೆ ಆಸರೆ ಆಗಿ ಭೇಷ್ ಎನಿಸಿಕೊಂಡಿದ್ದಾರೆ. ಜನಸಾಮಾನ್ಯರಂತೆ ಒಂದು ದಿನದ ಮಟ್ಟಿಗೆ ಕೆಲಸ ಮಾಡಿ, ಅದರಿಂದ ಬಂದ ಹಣವನ್ನ ನಟ-ನಟಿಯರು ಸಂಕಷ್ಟದಲ್ಲಿ ಇರುವವರಿಗೆ 'ಸದಾ ನಿಮ್ಮೊಂದಿಗೆ' ಮೂಲಕ ನೀಡಿದ್ದಾರೆ.
ಈಗಾಗಲೇ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ, ಧ್ರುವ ಸರ್ಜಾ, ರಶ್ಮಿಕಾ ಮಂದಣ್ಣ, ವಿಜಯ್ ರಾಘವೇಂದ್ರ, ಶ್ರೀಮುರಳಿ, ಚಿರಂಜೀವಿ ಸರ್ಜಾ, ರಾಗಿಣಿ ದ್ವಿವೇದಿ, ಶ್ರೀಮುರಳಿ, ಶರಣ್, ಮಾನ್ವಿತಾ ಹರೀಶ್, ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಹಲವರು ಅತಿಥಿಗಳಾಗಿ ಪಾಲ್ಗೊಂಡಿದ್ದಾರೆ. ಈಗ ನಟ ಪ್ರಜ್ವಲ್ ದೇವರಾಜ್ ಸರದಿ. ಮುಂದೆ ಓದಿರಿ...
ಈ ವಾರದ ಅತಿಥಿ ಪ್ರಜ್ವಲ್ ದೇವರಾಜ್
'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದ ಹಿಂದಿನ ಸಂಚಿಕೆಯಲ್ಲಿ ಲಕ್ಷ್ಮಿ ಹಾಗೂ ಗಿರಿಜಾ ಲೋಕೇಶ್ ಬಂಡಿ ಮಹಾಕಾಳಮ್ಮ ದೇವಸ್ಥಾನದ ಪೂಜಾ ಸಾಮಾಗ್ರಿಗಳನ್ನು ಮಾರಿ ಮಡಿಕೇರಿಯ ಜಯಂತಿ ಕುಟುಂಬಕ್ಕೆ ಸಹಾಯ ಮಾಡಿದ್ದರು. ಈ ವಾರದ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಭಾಗವಹಿಸಿದ್ದಾರೆ.
ಎಳನೀರು ವ್ಯಾಪಾರಿಗಾಗಿ ಎಳನೀರು ಮಾರಿದ ಲವ್ಲಿ ಸ್ಟಾರ್ ಪ್ರೇಮ್
ಸತೀಶ್ ಪುತ್ರಿಗೆ ಸಹಾಯ
ಟೀ ವ್ಯಾಪಾರಿ ಸತೀಶ್ ಪುತ್ರಿಗೆ ಸಹಾಯ ಮಾಡಲು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಚಿಕ್ಕ ಹುಡುಗನ ಆರೋಗ್ಯಕ್ಕಾಗಿ ಪೆನ್ನು ಮಾರಿದ 'ಅಧ್ಯಕ್ಷ' ಶರಣ್
ಸತೀಶ್ ಪುತ್ರಿಗೆ ಏನಾಗಿದೆ.?
ಸತೀಶ್ ಅವರ ಐದು ವರ್ಷದ ಪುತ್ರಿಗೆ ಕಿವಿ ಕೇಳುವುದಿಲ್ಲ. ಮಾತು ಬರುವುದಿಲ್ಲ. ಆಕೆಯ ಶಸ್ತ್ರಚಿಕಿತ್ಸೆಗೆ ಹಣದ ಅವಶ್ಯಕತೆ ಇದೆ. ಈ ಮಗುವಿಗೆ ಸಹಾಯ ಮಾಡಲು ಪ್ರಜ್ವಲ್ ದೇವರಾಜ್ ಮುಂದಾಗಿದ್ದಾರೆ.
'ವಿಕಲಚೇತನ ಟ್ರಸ್ಟ್'ಗಾಗಿ ಕಲ್ಲಂಗಡಿ ಹಣ್ಣು ಮಾರಿದ ನಟಿ ಮಾನ್ವಿತಾ ಹರೀಶ್
ಬಾದಾಮಿ ಹಾಲು ಮಾರಿದ ಪ್ರಜ್ವಲ್
ಸತೀಶ್ ಪುತ್ರಿಗೆ ಸಹಾಯ ಮಾಡಲು ಬೆಂಗಳೂರಿನ ವಿವಿ ಪುರಂನಲ್ಲಿ ಬಾದಾಮಿ ಹಾಲನ್ನು ಮಾರಿ, ಅದರಿಂದ ಬಂದ ಹಣವನ್ನು ಪ್ರಜ್ವಲ್ ನೀಡಿದ್ದಾರೆ. ಅಲ್ಲದೇ, ವೈಯುಕ್ತಿಕವಾಗಿಯೂ ಸತೀಶ್ ಪುತ್ರಿಗೆ ಪ್ರಜ್ವಲ್ ದೇವರಾಜ್ ಹಣ ಸಹಾಯ ಮಾಡಿದ್ದಾರೆ.
ರಿಯಲ್ ಸುದ್ದಿ: ಬೀದಿಬೀದಿಯಲ್ಲಿ ಸೌತೇಕಾಯಿ, ಮಾವಿನಕಾಯಿ ಮಾರಿದ ರಾಗಿಣಿ
ಪ್ರಜ್ವಲ್ ಸಂಗ್ರಹ ಮಾಡಿದ ಹಣ ಎಷ್ಟು.?
ಬಾದಾಮಿ ಹಾಲನ್ನು ಮಾರಿ ಪ್ರಜ್ವಲ್ ದೇವರಾಜ್ ಸಂಗ್ರಹ ಮಾಡಿದ ಹಣ ಎಷ್ಟು.? ಸತೀಶ್ ಕುಟುಂಬದ ಕೈ ಸೇರಿದ ಹಣವೆಷ್ಟು.? ಎಂಬುದನ್ನು ಈ ವಾರದ ಸಂಚಿಕೆಯಲ್ಲಿ ನೀವೇ ನೋಡಿರಿ... 'ಸದಾ ನಿಮ್ಮೊಂದಿಗೆ' ಇದೇ ಭಾನುವಾರ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿದೆ.