Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೀದಿಬೀದಿಯಲ್ಲಿ ಭೇಲ್ ಪೂರಿ ಮಾರಿದ ನಟ ಸೃಜನ್ ಲೋಕೇಶ್.!
Recommended Video
ಸದಾ ನಿಮ್ಮೊಂದಿಗೆ ಕಾರ್ಯಕ್ರಮದ ಕಳೆದ ವಾರದ ಸಂಚಿಕೆಯಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಭಾಗವಹಿಸಿ ರೇಖಾ ಮಹಾಂತೇಶ್ ಕುಟುಂಬಕ್ಕೋಸ್ಕರ ಕಬ್ಬಿನ ಜ್ಯೂಸ್ ಮಾರಾಟ ಮಾಡಿದರು.
ಅದರಿಂದ ಬಂದ ಒಂದೊಂದು ರೂಪಾಯಿಗೂ ಉದಯ ವಾಹಿನಿ 100 ರೂ. ಸೇರಿಸಿ ಒಟ್ಟು 1,55,000 ರೂಪಾಯಿಯನ್ನ ರೇಖಾ ಮಹಾಂತೇಶ್ ಕುಟುಂಬಕ್ಕೆ ನೀಡಿತ್ತು.
ರೈತ ಕುಟುಂಬಕ್ಕಾಗಿ ಕಬ್ಬಿನ ಹಾಲು ಮಾರಿದ ಶ್ರೀಮುರಳಿ
ಅದೇ ರೀತಿ ಈ ವಾರದ ಸಂಚಿಕೆಯಲ್ಲಿ ಗಾರೆ ಕೆಲಸ ಮಾಡುವಾಗ ಶಾಕ್ ಹೊಡೆದು 2 ಕೈ, 1 ಕಾಲು ಕಳೆದುಕೊಂಡಿರುವ ನಾಗೇಶ್ ಅವರಿಗೋಸ್ಕರ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್, ತಾವು ಓದಿದ ಶಾಲೆಗೆ ಹೋಗಿ ಅಲ್ಲಿನ ಮಕ್ಕಳಿಗೆ, ಶಿಕ್ಷಕರಿಗೆ ಪಾನಿಪೂರಿ ಮಾರಾಟ ಮಾಡಿದ್ದಾರೆ.
ಹಾಗೇ, ಸಾರ್ವಜನಿಕ ಸ್ಥಳಗಳಲ್ಲಿ ಗಾಡಿಯನ್ನು ನೂಕುತ್ತಾ ರಸ್ತೆಯಲ್ಲಿ ಭೇಲ್ ಪೂರಿ ಮಾರಿದ್ದಾರೆ. ಹಾಗ್ನೋಡಿದ್ರೆ, ಪಾನಿಪೂರಿ ಮಾರೋದು ಇವರ ಬಾಲ್ಯ ವಯಸ್ಸಿನ ಕನಸಾಗಿತ್ತಂತೆ.
ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಗೆ ಹೋಗಿ ಕಾರ್ಯಕ್ರಮದ ಉದ್ದೇಶವನ್ನ ಸೃಜನ್ ಲೋಕೇಶ್ ತಿಳಿಸಿದಾಗ ಅಲ್ಲಿನ ಮಕ್ಕಳು, ಶಿಕ್ಷಕರು ಸಂಪೂರ್ಣವಾಗಿ ಪ್ರೋತ್ಸಾಹ ನೀಡಿದ್ರು. ಹಾಗೆ ಸೃಜನ್ ಅವರು ತಮ್ಮ ಅಭಿಮಾನಿಗಳ ಕೋರಿಕೆಯಂತೆ ಕೆಲವರ ಜೊತೆ ಸ್ಟೆಪ್ ಹಾಕಿ, ಸೆಲ್ಫಿ ತೆಗೆಸಿಕೊಂಡು ಕಾರ್ಯಕ್ರಮದ ಉದ್ದೇಶವನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾದರು.
ರೀಲ್ ಅಲ್ಲ ರಿಯಲ್: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿದ ರಶ್ಮಿಕಾ ಮಂದಣ್ಣ
'ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್' ಭೇಲ್ ಪೂರಿ ಮಾರಿ ತಂದ ಹಣವಾದರೂ ಎಷ್ಟು? ಎಂಬುದು ಇದೇ ಭಾನುವಾರ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.