Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿಕಲಚೇತನ ಟ್ರಸ್ಟ್'ಗಾಗಿ ಕಲ್ಲಂಗಡಿ ಹಣ್ಣು ಮಾರಿದ ನಟಿ ಮಾನ್ವಿತಾ ಹರೀಶ್
Recommended Video
ಆರ್ಥಿಕ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಹಸ್ತ ಚಾಚುವುದೇ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದ ಉದ್ದೇಶ. ಸಾಮಾನ್ಯ ಜನರ ರೀತಿ ತಾರೆಯರು ಒಂದು ದಿನ ಕೆಲಸ ಮಾಡಿ, ಅದರಿಂದ ಬಂದ ಹಣಕ್ಕೆ ಮತ್ತಷ್ಟು ಸೇರಿಸಿ ಜನರ ಕಣ್ಣೀರನ್ನು ಒರೆಸುವ ಕಾರ್ಯಕ್ರಮ 'ಸದಾ ನಿಮ್ಮೊಂದಿಗೆ'.
ಈಗಾಗಲೇ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ, ರಶ್ಮಿಕಾ ಮಂದಣ್ಣ, ರಿಯಲ್ ಸ್ಟಾರ್ ಉಪೇಂದ್ರ, ಪ್ರಿಯಾಂಕ ಉಪೇಂದ್ರ, ಲವ್ಲಿ ಸ್ಟಾರ್ ಪ್ರೇಮ್, ವಿಜಯ್ ರಾಘವೇಂದ್ರ, ಶ್ರೀಮುರಳಿ, ಪ್ರಿಯಾಮಣಿ, ಧನಂಜಯ್ ಸೇರಿದಂತೆ ಹಲವರು ಬೀದಿಬದಿಯಲ್ಲಿ ಕೆಲಸ ಮಾಡಿ ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡಿದ್ದರು.
ಇದೀಗ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾನ್ವಿತಾ ಹರೀಶ್ ಪಾಲ್ಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಫೋಟೋ ಸ್ಲೈಡ್ ಗಳಲ್ಲಿದೆ, ಓದಿರಿ...
ಈ ವಾರದ ಅತಿಥಿ
ಕಳೆದ ವಾರದ 'ಸದಾ ನಿಮ್ಮೊಂದಿಗೆ' ಸಂಚಿಕೆಯಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಅವರು ದೇವರಾಜ್ ಎಂಬ ಎಳನೀರು ವ್ಯಾಪಾರಿಗೋಸ್ಕರ ಎಳನೀರು ಮಾರಿ ಸಹಾಯ ಮಾಡಿದ್ದನ್ನ ನೀವು ನೋಡಿದ್ರಿ. ಇದೀಗ ನಟಿ ಮಾನ್ವಿತಾ ಹರೀಶ್ ಸರದಿ.
ದೋಸೆ ಮಾರಿದ ಉಪೇಂದ್ರ: ಇದು ರಿಯಲ್ ಸ್ಟಾರ್ ಮಾಡಿದ ರಿಯಲ್ ಕೆಲಸ.!
ಧನಲಕ್ಷ್ಮಿ ಗೆ ಸಹಾಯ
ಈ ವಾರದ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ 'ಕೆಂಡಸಂಪಿಗೆ' ಚೆಲುವೆ ಮಾನ್ವಿತಾ ಹರೀಶ್ ಅವರು ಧನಲಕ್ಷ್ಮಿ ಎಂಬುವರಿಗೆ ಸಹಾಯ ಮಾಡಲು ಭಾಗವಹಿಸಿದ್ದಾರೆ. ಹಾಗೇ, ಟ್ರಸ್ಟ್ ಒಂದಕ್ಕೆ ಸಹಾಯ ಹಸ್ತ ಚಾಚಲು ಮಾನ್ವಿತಾ ಮುಂದಾಗಿದ್ದಾರೆ.
ಇದೇ ರಿಯಾಲಿಟಿ: ಬೀದಿಬದಿಯಲ್ಲಿ ಮೂಸಂಬಿ ಜ್ಯೂಸ್ ಮಾರಿದ ಧನಂಜಯ್.!
ಪೋಲಿಯೋ ಅಟ್ಯಾಕ್
ಚಿಕ್ಕ ವಯಸ್ಸಿನಲ್ಲೇ ಪೋಲಿಯೋ ಅಟ್ಯಾಕ್ ಆಗಿ ಬದುಕು ಸಾಗಿಸೋಕೆ ಕಷ್ಟಪಡುತ್ತಿರುವಾಕೆ ಧನಲಕ್ಷ್ಮಿ. ತನ್ನ ಹಾಗೆ ಇರುವ ಬೇರೆ ವಿಕಲಚೇತನರಿಗೆ ಕಷ್ಟ ಬರಬಾರದೆಂದು 'ನಮಿತಾಂಜಲಿ' ಎನ್ನುವ ಗೆಳತಿಯ ಹೆಸರಲ್ಲಿ ಒಂದು ಟ್ರಸ್ಟ್ ಓಪನ್ ಮಾಡಿ ಒಂದಷ್ಟು ವಿಕಲಚೇತನರಿಗೆ ಆಶ್ರಯ ಕೊಟ್ಟಿದ್ದಾರೆ.
ಬೀದಿಬೀದಿಯಲ್ಲಿ ಭೇಲ್ ಪೂರಿ ಮಾರಿದ ನಟ ಸೃಜನ್ ಲೋಕೇಶ್.!
ಕುತೂಹಲ ಇದೆ
ಇಲ್ಲಿ ಒಂದು ವಿಶೇಷ ಎಂದರೆ ನಮಿತಾಂಜಲಿ ಎನ್ನುವರು ಈ ಧನಲಕ್ಷ್ಮಿಯ ಸ್ನೇಹಿತೆ. ಇವರ ಹೆಸರಿನಲ್ಲಿ ಟ್ರಸ್ಟ್ ಪ್ರಾರಂಭಿಸಿದ್ದು ಏಕೆ? ಎಂಬುದನ್ನು ಈ ವಾರದ ಸಂಚಿಕೆಯಲ್ಲಿ ನೋಡಬಹುದು.
ಕಲ್ಲಂಗಡಿ ಹಣ್ಣು ಮಾರಿದ ಮಾನ್ವಿತಾ
ವಿಕಲಚೇತನ ಟ್ರಸ್ಟ್ ಗೆ ಕೈ ಜೋಡಿಸಲು ಮಾನ್ವಿತಾ ಹರೀಶ್ ಕಲ್ಲಂಗಡಿ ಹಣ್ಣನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಮಾರಿದ್ದಾರೆ. ಹಾಗಾದರೆ ಮಾನ್ವಿತಾ ಮಾರಿದ ಕಲ್ಲಂಗಡಿ ಹಣ್ಣಿನ ಒಟ್ಟು ಮೊತ್ತ ಎಷ್ಟು? ಇದೇ ಭಾನುವಾರ ನಿಮಗೆ ಉತ್ತರ ಸಿಗಲಿದೆ.
ಧನಲಕ್ಷ್ಮಿಗೆ ಸಿಕ್ಕ ಹಣ ಎಷ್ಟು.?
ಧನಲಕ್ಷ್ಮಿಯ ಟ್ರಸ್ಟ್ ಗೆ ಸೇರಿದ ಹಣ ಎಷ್ಟು? ಎಂಬುದು ಈ ವಾರದ 'ಸದಾ ನಿಮ್ಮೊಂದಿಗೆ'ಯಲ್ಲಿ ಗೊತ್ತಾಗುತ್ತೆ. "ಸದಾ ನಿಮ್ಮೊಂದಿಗೆ" ಇದೇ ಭಾನುವಾರ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.