Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೊಳ್ಳೆ ಕಾರಣಕ್ಕಾಗಿ ಗಾಂಧಿ ಬಜಾರ್ ನಲ್ಲಿ ಹೂ ಮಾರಿದ ಪ್ರಿಯಾಂಕಾ ಉಪೇಂದ್ರ.!
ಬರೀ ಮನರಂಜನೆ ನೀಡುವುದು ಮಾತ್ರ ಅಲ್ಲ, ಎಂಟರ್ ಟೇನ್ಮೆಂಟ್ ಜೊತೆಗೆ ಜನರಿಗೆ ಸಹಾಯ ಹಸ್ತ ಚಾಚುವುದು ಉದಯ ವಾಹಿನಿಯ ಉದ್ದೇಶ. ಈ ನಿಟ್ಟಿನಲ್ಲಿ ರೂಪುಗೊಂಡ ಕಾರ್ಯಕ್ರಮವೇ 'ಸದಾ ನಿಮ್ಮೊಂದಿಗೆ'.
ಲೋಕೇಶ್ ಪ್ರೊಡಕ್ಷನ್ಸ್ ಮೂಲಕ ರೆಡಿ ಆಗುತ್ತಿರುವ 'ಸದಾ ನಿಮ್ಮೊಂದಿಗೆ' ಶೋ ಪ್ರತಿ ವಾರಾಂತ್ಯದಲ್ಲಿ ಉದಯ ಟಿವಿಯಲ್ಲಿ ಪ್ರಸಾರ ಆಗುತ್ತಿದೆ. ಇದೇ ಕಾರ್ಯಕ್ರಮಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿದ್ದರು.
ರೈತರ ಕುಟುಂಬಕ್ಕೆ ಸಹಾಯ ಆಗಲಿ ಅಂತ ರೋರಿಂಗ್ ಸ್ಟಾರ್ ಶ್ರೀಮುರಳಿ ಕಬ್ಬಿನ ಹಾಲು ಮಾರಿದ್ದರು. ಎಲೆಕ್ಟ್ರಿಕ್ ಶಾಕ್ ನಿಂದ ಕೈಕಾಲು ಕಳೆದುಕೊಂಡಿದ್ದ ನಾಗೇಶ್ ಗಾಗಿ ಸೃಜನ್ ಲೋಕೇಶ್ ಭೇಲ್ ಪೂರಿ, ಪಾನಿ ಪೂರಿ ಮಾರಾಟ ಮಾಡಿದ್ದರು.
ಇನ್ನೂ ಡಾಲಿ ಧನಂಜಯ್ ಕೂಡ ಮೂಸಂಬಿ ಜ್ಯೂಸ್ ಮಾರಿ ರವಿ ಕುಟುಂಬಕ್ಕೆ ಕೈಲಾದ ಸಹಾಯ ಮಾಡಿದ್ದರು. ಇದೀಗ ನಟಿ ಪ್ರಿಯಾಂಕಾ ಉಪೇಂದ್ರ ಸರದಿ. ಮುಂದೆ ಓದಿರಿ...
'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಉಪೇಂದ್ರ
ಉತ್ತಮ ಉದ್ದೇಶ ಹೊಂದಿರುವ ಉದಯ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ಉಪೇಂದ್ರ ಮಡದಿ ಪ್ರಿಯಾಂಕಾ ಭಾಗವಹಿಸಿದ್ದಾರೆ.
ಇದೇ ರಿಯಾಲಿಟಿ: ಬೀದಿಬದಿಯಲ್ಲಿ ಮೂಸಂಬಿ ಜ್ಯೂಸ್ ಮಾರಿದ ಧನಂಜಯ್.!
ಹೂವಿನ ವ್ಯಾಪಾರ ಮಾಡಿದ ಪ್ರಿಯಾಂಕಾ ಉಪೇಂದ್ರ
'ಹೂವೇ.. ಹೂವೇ...' ಅಂತ ಪ್ರಿಯಾಂಕಾ ಹಾಡಿ ಕುಣಿದಿದ್ದನ್ನ ನೀವು ಸಿನಿಮಾದಲ್ಲಿ ನೋಡಿರಬಹುದು. ಇದೀಗ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮಕ್ಕಾಗಿ ಗಾಂಧಿ ಬಜಾರ್ ನಲ್ಲಿ ಹೂವಿನ ವ್ಯಾಪಾರ ಮಾಡಿದ್ದಾರೆ ನಟಿ ಪ್ರಿಯಾಂಕಾ ಉಪೇಂದ್ರ.
ಬೀದಿಬೀದಿಯಲ್ಲಿ ಭೇಲ್ ಪೂರಿ ಮಾರಿದ ನಟ ಸೃಜನ್ ಲೋಕೇಶ್.!
ಪುಷ್ಪಲತಾ ಕುಟುಂಬಕ್ಕೆ ಸಹಾಯ
ಪುಷ್ಪಲತಾ ಕುಟುಂಬಕ್ಕೆ ಸಹಾಯ ಆಗಲಿ ಎಂದು ಪ್ರಿಯಾಂಕಾ ಉಪೇಂದ್ರ ಹೂ ಮಾರಿದ್ದಾರೆ. ಪುಷ್ಪಲತಾ ಅವರಿಗೆ 4 ಜನ ಹೆಣ್ಮಕ್ಕಳು. ಬಡತನದಲ್ಲಿ ಜೀವನ ಸಾಗಿಸುತ್ತಿರುವ ಇವರ ಕೊನೆಯ ಮಗಳು ನಯನಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ನಯನಾ ಚಿಕಿತ್ಸೆಗಾಗಿ ಪ್ರಿಯಾಂಕಾ ಉಪೇಂದ್ರ ಹೂವಿನ ವ್ಯಾಪಾರ ಮಾಡಿದ್ದಾರೆ.
ರೀಲ್ ಅಲ್ಲ ರಿಯಲ್: ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿದ ರಶ್ಮಿಕಾ ಮಂದಣ್ಣ
ಎಷ್ಟು ಸಂಪಾದನೆ ಮಾಡಿದರು.?
ಹೂ ಮಾರಾಟ ಮಾಡಿದ ಪ್ರಿಯಾಂಕಾ ಉಪೇಂದ್ರ ಸಂಪಾದನೆ ಮಾಡಿದೆಷ್ಟು.? ಪುಷ್ಪಲತಾ ಕುಟುಂಬಕ್ಕೆ ಸಿಕ್ಕ ಹಣವೆಷ್ಟು.? ಈ ಪ್ರಶ್ನೆಗಳಿಗೆ ಉತ್ತರ ಬರುವ ಭಾನುವಾರ ರಾತ್ರಿ 9 ಗಂಟೆಗೆ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ಸಿಗಲಿದೆ.