Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಲ್ ಸುದ್ದಿ: ಬೀದಿಬೀದಿಯಲ್ಲಿ ಸೌತೇಕಾಯಿ, ಮಾವಿನಕಾಯಿ ಮಾರಿದ ರಾಗಿಣಿ
Recommended Video
ಒಂದ್ಕಾಲದಲ್ಲಿ 'ತುಪ್ಪ ಬೇಕಾ ತುಪ್ಪ..' ಅಂತ ಗಾಂಧಿನಗರದ ತುಂಬೆಲ್ಲಾ ಬಿಸಿ ಬಿಸಿ ತುಪ್ಪ ಮಾರಿದ್ದ ರಾಗಿಣಿ ದ್ವಿವೇದಿ ಇದೀಗ ಸೌತೇಕಾಯಿ ಹಾಗೂ ಮಾವಿನ ಕಾಯಿ ಮಾರಿದ್ದಾರೆ.
ಓ.. ಇದ್ಯಾವುದೋ ರೀಲ್ ಸುದ್ದಿ ಇರಬೇಕು... ಹಾಡೊಂದಕ್ಕಾಗಿ ರಾಗಿಣಿ ದ್ವಿವೇದಿ ಸೌತೇಕಾಯಿ, ಮಾವಿನಕಾಯಿ ಮಾರಿರಬೇಕು ಅಂತ ನೀವು ಅಂದುಕೊಳ್ಳಬೇಡಿ. ಯಾಕಂದ್ರೆ, ಇದು ಅಪ್ಪಟ ರಿಯಲ್ ಸುದ್ದಿ.
ಚಿರು ದೊಡ್ಡ ಮನಸ್ಸಿಗೆ ಹ್ಯಾಟ್ಸ್ ಆಫ್: ಮೆಕ್ಯಾನಿಕ್ ಕೆಲಸ ಮಾಡಿದ ಸರ್ಜಾ ಕುಡಿ.!
ಬಣ್ಣ ಹಚ್ಚದೆ ಬೀದಿಬೀದಿಯಲ್ಲಿ ರಾಗಿಣಿ ಸೌತೇಕಾಯಿ ಮಸಾಲೆ ಮಾರಿರುವುದು ನಿಜ. ಅದು 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮಕ್ಕಾಗಿ ಅನ್ನೋದು ವಿಶೇಷ. ಈಗಾಗಲೇ, 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ, ಶ್ರೀಮುರಳಿ, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಪ್ರಿಯಾಮಣಿ, ಮಾನ್ವಿತಾ ಹರೀಶ್ ಸೇರಿದಂತೆ ಹಲವು ತಾರೆಯರು ಜನಸಾಮಾನ್ಯರಂತೆ ಕೆಲಸ ಮಾಡಿ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿದ್ದಾರೆ. ಇದೀಗ ನಟಿ ರಾಗಿಣಿ ದ್ವಿವೇದಿ ಸರದಿ.
ಈ ವಾರದ ಅತಿಥಿ ರಾಗಿಣಿ ದ್ವಿವೇದಿ
ಕಳೆದ ವಾರದ 'ಸದಾ ನಿಮ್ಮೊಂದಿಗೆ' ಸಂಚಿಕೆಯಲ್ಲಿ ನಟ ಶರಣ್ ಅವರು ಲವಣ್ ಎಂಬ 9 ವರ್ಷದ ಗೋಲ್ಡ್ ಮೆಡಲಿಸ್ಟ್ ಗೋಸ್ಕರ ರಸ್ತೆ ರಸ್ತೆಗಳಲ್ಲಿ ಸೊಳ್ಳೆಬ್ಯಾಟ್, ಪೆನ್ ಸೇರಿದಂತೆ ಇತರ ವಸ್ತುಗಳನ್ನ ಮಾರಾಟ ಮಾಡಿ ಸಹಾಯ ಮಾಡಿದ್ದರು. ಅದೇ ರೀತಿ ಈ ವಾರದ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ತುಪ್ಪದ ಬೆಡಗಿ ರಾಗಿಣಿ ಅವರು ಅತಿಥಿಯಾಗಿ ಭಾಗವಹಿಸಿದ್ದಾರೆ.
ಒಂದೊಳ್ಳೆ ಕಾರಣಕ್ಕಾಗಿ ಗಾಂಧಿ ಬಜಾರ್ ನಲ್ಲಿ ಹೂ ಮಾರಿದ ಪ್ರಿಯಾಂಕಾ ಉಪೇಂದ್ರ.!
ಅಂಧ ಹುಡುಗನಿಗೆ ರಾಗಿಣಿ ಸಹಾಯ
ರಾಗಿಣಿ ಅವರು ವಿನೋದ್ ಎನ್ನುವ ಅಂಧ ಹುಡುಗನಿಗೋಸ್ಕರ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ವಿನೋದ್ ಹುಟ್ಟಿದಾಗ ಕಣ್ಣಿನ ಯಾವುದೇ ತೊಂದರೆ ಇರಲಿಲ್ಲ. ಬೆಳೆಯುತ್ತ ಬೆಳೆಯುತ್ತ ಕಣ್ಣಿನ ಸಮಸ್ಯೆಯಾಗಿ ಚಿಕಿತ್ಸೆ ಫಲಕಾರಿಯಾಗದೇ ಎರಡು ಕಣ್ಣಿನ ದೃಷ್ಠಿಯನ್ನ ಕಳೆದುಕೊಂಡಿದ್ದಾನೆ. ಈ ಹುಡುಗನಿಗೆ ಸಹಾಯ ಮಾಡಲು ರಾಗಿಣಿ ಮುಂದಾಗಿದ್ದಾರೆ.
ದೋಸೆ ಮಾರಿದ ಉಪೇಂದ್ರ: ಇದು ರಿಯಲ್ ಸ್ಟಾರ್ ಮಾಡಿದ ರಿಯಲ್ ಕೆಲಸ.!
ಮಾವಿನಕಾಯಿ ಮಾರಿದ ರಾಗಿಣಿ
ವಿನೋದ್ ನರ್ಸರಿಯನ್ನು ಪ್ರಾರಂಭಿಸಿ ಅದರಿಂದ ಸಾಕಷ್ಟು ನಷ್ಟವನ್ನು ಹೊಂದಿದ್ದಾನೆ. ಆ ಸಾಲವನ್ನು ವಾಪಸ್ ಮಾಡಲು ರಾಗಿಣಿ ಆತನ ಬೆಂಬಲವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ರಾಗಿಣಿ ಮಾವಿನಕಾಯಿ, ಸೌತೆಕಾಯಿ ಗಳನ್ನು ದಬ್ಬುವ ಬಂಡಿಯಲ್ಲಿ ಮಾರಿದ್ದಾರೆ.
ಇದೇ ರಿಯಾಲಿಟಿ: ಬೀದಿಬದಿಯಲ್ಲಿ ಮೂಸಂಬಿ ಜ್ಯೂಸ್ ಮಾರಿದ ಧನಂಜಯ್.!
ರಾಗಿಣಿ ಸಂಗ್ರಹಿಸಿದ ಹಣ ಎಷ್ಟು.?
ರಾಗಿಣಿ ಒಟ್ಟು ಎಷ್ಟು ಹಣವನ್ನು ಸಂಗ್ರಹಿಸಿದ್ದಾರೆ ಎಂಬುದನ್ನ ಈ ವಾರದ ಸಂಚಿಕೆಯಲ್ಲಿ ನೋಡಬಹುದು. "ಸದಾ ನಿಮ್ಮೊಂದಿಗೆ" ಇದೇ ಭಾನುವಾರ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.