Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಿಢೀರ್ ಅಂತ ಯೋಗರಾಜ್ ಭಟ್ರು ಐಸ್ ಕ್ರೀಮ್ ಮಾರಿದ್ದು ಯಾಕೆ.?
'ಮುಂಗಾರು ಮಳೆ' ಅಂತಹ ಸೂಪರ್ ಹಿಟ್ ಚಿತ್ರವನ್ನ ಸ್ಯಾಂಡಲ್ ವುಡ್ ಗೆ ನೀಡಿದ ಯೋಗರಾಜ್ ಭಟ್ ದಿಢೀರ್ ಅಂತ ಬೀದಿಬದಿಯಲ್ಲಿ ಕೋನ್ ಐಸ್ ಮಾರಾಟ ಮಾಡಿದ್ದಾರೆ.
ಅರೇ.. ಸದಾ ಡೈರೆಕ್ಟರ್ ಕ್ಯಾಪ್ ತೊಡುವ ಭಟ್ರು, ನಟನೆ ಏನಾದರೂ ಮಾಡ್ತಿದ್ದಾರಾ ಅಂತ ಅಂದುಕೊಳ್ಳಬೇಡಿ. ಯಾಕಂದ್ರೆ, ಇದು 'ರೀಲ್' ನ್ಯೂಸ್ ಅಲ್ಲ.. 'ರಿಯಾಲಿಟಿ' ನ್ಯೂಸ್.!
'ಪಂಚತಂತ್ರ' ಚಿತ್ರದ ನಟ ವಿಹಾನ್ ಗೌಡ ಜೊತೆಗೆ ಸೇರಿ 'ಸದಾ ನಿಮ್ಮೊಂದಿಗೆ' ಕಾರ್ಯಕ್ರಮಕ್ಕಾಗಿ ಯೋಗರಾಜ್ ಭಟ್ ಐಸ್ ಕ್ರೀಮ್ ಮಾರಾಟ ಮಾಡಿದ್ದಾರೆ. ಕ್ರೀಡಾಪಟುವಿಗೆ ಸಹಾಯ ಮಾಡಲು ಯೋಗರಾಜ್ ಭಟ್ ಮತ್ತು 'ಪಂಚತಂತ್ರ' ಹೀರೋ ಮುಂದಾಗಿದ್ದಾರೆ. ಮುಂದೆ ಓದಿರಿ...
ಈ ವಾರದ ಅತಿಥಿ
'ಸದಾ ನಿಮ್ಮೊಂದಿಗೆ' ಕಾರ್ಯಕ್ರಮದ ಕಳೆದ ಸಂಚಿಕೆಯಲ್ಲಿ ಲೂಸ್ ಮಾದ ಯೋಗಿ, ಸಚಿನ್ ಅವರಿಗೋಸ್ಕರ ಬಲೂನ್ ಮಾರಿ ಸಹಾಯ ಮಾಡಿದ್ದರು.
ಈ ವಾರದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸುತ್ತಿರುವವರು ಹೆಸರಾಂತ ನಿರ್ದೇಶಕ, ವಿಕಟ ಕವಿ ಯೋಗರಾಜ್ ಭಟ್.
ವಿಜಯನಗರದ ಫುಟ್ ಪಾತ್ ನಲ್ಲಿ ರಂಗಾಯಣ ರಘು ತರಕಾರಿ ಮಾರಿದ್ದು ಯಾಕೆ.?
ಯಾರಿಗಾಗಿ ಯೋಗರಾಜ್ ಭಟ್ ಸಹಾಯ.?
ಶಿವಕುಮಾರ್ ಎಂಬ ಕ್ರೀಡಾಪಟುವಿಗಾಗಿ ಐಸ್ ಕ್ರೀಮ್ ಮಾರಿ ಸಹಾಯ ಮಾಡಿದ್ದಾರೆ ಯೋಗರಾಜ್ ಭಟ್. ಹಾಗೆ ಇವರ ಜೊತೆ 'ಪಂಚತಂತ್ರ' ಚಿತ್ರದ ನಾಯಕ ವಿಹಾನ್ ಗೌಡ ಕೂಡ ಕೈ ಜೋಡಿಸಿದ್ದಾರೆ.
ರಾಮಕೃಷ್ಣ ಆಶ್ರಮದ ಮುಂದೆ ಕಾಫಿ, ಟೀ ಮಾರಿದ ಅಜಯ್ ರಾವ್
ಹೂವಿನ ವ್ಯಾಪಾರ ಮಾಡುತ್ತಿರುವ ಶಿವಕುಮಾರ್
ಶಿವಕುಮಾರ್ 'ಖೋ ಖೋ' ಕ್ರೀಡಾಪಟುವಾಗಿದ್ದು, ಮನೆಯಲ್ಲಿನ ತೊಂದರೆಗಾಗಿ ತಮ್ಮ ಆಟವನ್ನು ಬದಿಗೊತ್ತಿ ಕೆಲಸವನ್ನು ಮಾಡುತ್ತಿದ್ದಾರೆ. ಶಿವಕುಮಾರವರಿಗೆ ಇಬ್ಬರು ಅಕ್ಕಂದಿರು, ಅವರ ಮದುವೆಗಾಗಿ ತಂದೆ ಮಾಡಿದ ಸಾಲ ತೀರಿಸೋಕೆ ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಹೂವಿನ ವ್ಯಾಪಾರ ಮಾಡುತ್ತಿದ್ದಾರೆ.
ವಿ.ವಿ.ಪುರಂನಲ್ಲಿ ಬಾದಾಮಿ ಹಾಲು ಮಾರಿದ ಪ್ರಜ್ವಲ್ ದೇವರಾಜ್
ಯಾರೀ ಶಿವಕುಮಾರ್.?
ಶಿವಕುಮಾರ್.. 2017ರ ಅಂತರಾಷ್ಟ್ರೀಯ ಖೋ ಖೋ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ವಿರುದ್ಧ ಗೆದ್ದು ಪ್ರಥಮ ಸ್ಥಾನ ಪಡೆಯುವ ಮುಖಾಂತರ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇಂಥ ಪ್ರತಿಭೆ ಸಂಪೂರ್ಣವಾಗಿ ಕ್ರೀಡೆಯಲ್ಲಿ ತೊಡಗದಿರಲು ಅಕ್ಕಂದಿರ ಮದುವೆಯ ಸಾಲ ಅಡ್ಡಿಯಾಗಿದೆ.
ರಿಯಲ್ ಸುದ್ದಿ: ಬೀದಿಬೀದಿಯಲ್ಲಿ ಸೌತೇಕಾಯಿ, ಮಾವಿನಕಾಯಿ ಮಾರಿದ ರಾಗಿಣಿ
ಪ್ರಸಾರ ಯಾವಾಗ.?
ಯೋಗರಾಜ್ ಭಟ್ರು ಹಾಗೂ ವಿಹಾನ್ ಅವರು ಶಿವಕುಮಾರ್ ಗಾಗಿ ಸಂಗ್ರಹಿಸಿದ ಹಣವೆಷ್ಟು ಎಂಬುದು ಈ ವಾರದ ಸಂಚಿಕೆಯಲ್ಲಿ ಗೊತ್ತಾಗಲಿದೆ. 'ಸದಾ ನಿಮ್ಮೊಂದಿಗೆ' ಇದೇ ಭಾನುವಾರ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತದೆ.