Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿರಡಿ ಸಾಯಿಬಾಬಾ ಅವತಾರದಲ್ಲಿ ನೀನಾಸಂ ಅಶ್ವತ್ಥ್
ಸುವರ್ಣ ವಾಹಿನಿಯಲ್ಲಿ 'ರಾಘವೇಂದ್ರ ವೈಭವ' ಧಾರಾವಾಹಿ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಈ ಹಿನ್ನೆಲೆಯಲ್ಲಿ ವಾಹಿನಿ ಮತ್ತೊಂದು ಭಕ್ತಿ ಪ್ರಧಾನ ಧಾರಾವಾಹಿಯನ್ನು ಪ್ರಸಾರ ಮಾಡುತ್ತಿದೆ. 'ಸಮರ್ಥ ಸದ್ಗುರು' ಹೆಸರಿನ ಶಿರಡಿ ಸಾಯಿಬಾಬಾ ಅವರ ಚರಿತೆ ಪ್ರಸಾರವಾಗುತ್ತಿದೆ.
ಸಾಯಿಗೋಲ್ಡ್ ಪ್ಯಾಲೇಸ್ ನ ಶರವಣನ್ ನಿರ್ಮಿಸಿರುವ ಈ ಧಾರಾವಾಹಿಯನ್ನು ಬುಕ್ಕಾಪಟ್ಟಣ ವಾಸು ನಿರ್ದೇಶಿಸಿದ್ದಾರೆ. ಒಟ್ಟು 300 ಎಪಿಸೋಡುಗಳನ್ನು ನಿರ್ಮಿಸಿ ಮೆಗಾ ಧಾರಾವಾಹಿ ಮಾಡುವ ಬಯಕೆಯನ್ನು ಶರವಣನ್ ಹೊಂದಿದ್ದಾರೆ.
ಸೋಮವಾರದಿಂದ ಶುಕ್ರವಾರದ ತನಕ ಸಂಜೆ 5.30ಕ್ಕೆ ಧಾರಾವಾಹಿ ಪ್ರಸಾರವಾಗಲಿದೆ. ಪ್ರತಿದಿನ ಅರ್ಧಗಂಟೆ ಕಾಲ ಶಿರಡಿ ಸಾಯಿಬಾಬಾ ಅವರ ಜೀವನ, ಪವಾಡ ಹಾಗೂ ಮಹಿಮೆಗಳನ್ನು ವೀಕ್ಷಕರು ನೋಡಬಹುದು. 'ಸಬ್ ಕಾ ಮಾಲಿಕ್ ಏಕ್ ಹೈ' ಎಂದ ಶಿರಡಿ ಸಾಯಿಬಾಬಾ ಅವರು ಜಾತ್ಯಾತೀತ ಗುರು ಎಂಬುದರಲ್ಲಿ ಎರಡು ಮಾತಿಲ್ಲ.
ದೊಡ್ಡಬಿದರಿಕಲ್ಲು, ಕರ್ನಾಟಕದ ಸ್ಥಳಗಳು ಮತ್ತು ಮಹರಾಷ್ಟ್ರದ ಕೆಲವು ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಧಾರಾವಾಹಿಯಲ್ಲಿ ಶಿರಡಿ ಸಾಯಿಬಾಬಾ ಪಾತ್ರವನ್ನು ನೀನಾಸಂ ಅಶ್ವತ್ಥ್ ಪೋಷಿಸಿದ್ದಾರೆ. ಉಳಿದ ಪಾತ್ರವರ್ಗದಲ್ಲಿ ಮಾಸ್ಟರ್ ಹಿರಣ್ಣಯ್ಯ, ಶ್ರೀನಿವಾಸಮೂರ್ತಿ, ಗಾಯಕ ರಾಜೇಶ್ ಕೃಷ್ಣನ್ ಮುಂತಾದವರಿದ್ದಾರೆ. (ಏಜೆನ್ಸೀಸ್)