Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿ ಹಬ್ಬದ ಸಂಭ್ರಮ: ಉದಯ ಟಿವಿಯಲ್ಲಿ ನಾನ್ ಸ್ಟಾಪ್ ಮನರಂಜನೆ
ಎರಡು ದಶಕಗಳಿಂದ ನಿಮ್ಮ ನೆಚ್ಚಿನ ಉದಯ ಟಿವಿ ಕನ್ನಡಿಗರಲ್ಲಿ ಬೆರೆತಿರುವ ಮನರಂಜನಾ ವಾಹಿನಿ. ಇಲ್ಲಿ ಬಿತ್ತರವಾಗುವ ಧಾರಾವಾಹಿಗಳು ರಿಯಾಲಿಟಿ ಶೋಗಳು ಜನಜನಿತ. ಜನರಿಗೆ ಹತ್ತಿರವಾಗಲು ಧಾರಾವಾಹಿಯ ನಟ-ನಟಿಯರು ಕರ್ನಾಟಕದಾದ್ಯಂತ ವೀಕ್ಷಕರನ್ನು ಭೇಟಿ ಮಾಡುವುದು ಅವರೊಂದಿಗೆ ಸಂವಾದ ಮಾಡುವುದು ಸರ್ವೆ ಸಾಮಾನ್ಯ.
ಅದರಂತೆ, ಉದಯ ಟಿವಿಯಲ್ಲಿ ಪ್ರಸಾರವಾಗುವ ಸೂಪರ್ ಹಿಟ್ ಧಾರಾವಾಹಿಗಳ ಕಲಾವಿದರ ಜೊತೆ ಕನ್ನಡದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ಅನುರಾಧ ಭಟ್ ತಮ್ಮ ಹಾಡುಗಳ ಮೂಲಕ ಚಿತ್ರದುರ್ಗದಲ್ಲಿ ನೆರೆದಿದ್ದ ಸಾವಿರಾರು ಜನರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದು, ಒಟ್ಟಾರೆ ವೀಕ್ಷಕರಿಗೆ ಉದಯ ಸಂಕ್ರಾಂತಿ ಉತ್ಸವ ಮನರಂಜನೆಯ ಮಹಾಪೂರವನ್ನೇ ಹರಿಸಲಿದೆ.
ಕನ್ನಡ ಕಿರುತೆರೆಯಲ್ಲಿ ರಾಧಿಕಾ ಶರತ್ ಕುಮಾರ್: ಉದಯ ಟಿವಿಯಲ್ಲಿ ಹೊಸ ಸೀರಿಯಲ್ 'ಚಂದ್ರಕುಮಾರಿ'
ಉದಯ ಟಿವಿಯಲ್ಲಿ ಇದೇ ಮಂಗಳವಾರ... ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಧ್ಯಾಹ್ನ 1 ಗಂಟೆಗೆ 'ಉದಯ ಸಂಕ್ರಾಂತಿ ಉತ್ಸವ' ಕಾರ್ಯಕ್ರಮ ಪ್ರಸಾರವಾಗಲಿದೆ.
ಅಂದು ಸಂಜೆ 4 ಗಂಟೆಗೆ ಸೀರಿಯಲ್ ನಟ-ನಟಿಯರ ಜೊತೆ ನಡೆದ ವಿಶೇಷ ಕಾರ್ಯಕ್ರಮ 'ಉದಯ ಸೀರಿಯಲ್ ಸಂಕ್ರಾಂತಿ' ಪ್ರಸಾರವಾಗಲಿದೆ.
ಇದರ ಜೊತೆ ಕಾಮಿಡಿ ಕಿಂಗ್ ಶರಣ್ ಅಭಿನಯದ ಬ್ಲಾಕ್ ಬಸ್ಟರ್ ಪ್ರೀಮಿಯರ್ ಮೂವಿ 'ವಿಕ್ಟರಿ-2' ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ.
ಕಲಾವಿದನಿಗೆ ಸಹಾಯ ಮಾಡಿದ ಗಾಯಕ ರಾಜೇಶ್ ಕೃಷ್ಣನ್
ಹಾಗೆ ಸಂಕ್ರಾಂತಿ ಹಬ್ಬದ ವಿಶೇಷವಾಗಿ ನಂದಿನಿ ಧಾರಾವಾಹಿಯ ಮಹಾಸಂಚಿಕೆ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ.
ಈ ಸಂಕ್ರಾಂತಿ ಹಬ್ಬಕ್ಕೆ ಉದಯ ಟಿವಿ ನಾನ್ ಸ್ಟಾಪ್ ಮನರಂಜನೆಯನ್ನು ಕರುನಾಡ ಜನೆತೆಗೆ ನೀಡಲಿದೆ.