Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ' ವೇದಿಕೆಯಲ್ಲಿ ಮೊದಲ ಚಲನಚಿತ್ರ ಗೀತೆ ಹಾಡಿದ ಲಕ್ಷ್ಮಿ
ಜೀ-ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ಸರಿಗಮಪ 14ನೇ ಆವೃತ್ತಿ ಹೊಸ ಹೊಸ ಪ್ರತಿಭೆಗಳಿಂದ ಗಮನ ಸೆಳೆಯುತ್ತಿದೆ. ಪುಟ್ಟ ಪುಟ್ಟ ಮಕ್ಕಳು ತಮ್ಮ ಟ್ಯಾಲೆಂಟ್ ಮೂಲಕ ಪ್ರೇಕ್ಷಕರ ಮನಮುಟ್ಟುತ್ತಿದ್ದಾರೆ. ಅದರಲ್ಲೂ, 14 ವರ್ಷ ಲಕ್ಷ್ಮಿ ಎಂಬ ಬಾಲಕಿ ಸ್ವಲ್ಪ ವಿಶೇಷ.
'ಸರಿಗಮಪ' ಆಡಿಷನ್ ಸುತ್ತಿನಲ್ಲಿ ತಮ್ಮ ಗಾಯನದ ಮೂಲಕ ಜಡ್ಜ್ ಗಳನ್ನ ಮೂಕವಿಸ್ಮಿತರನ್ನಾಗಿಸಿದ್ದ ಲಕ್ಷ್ಮಿ ಈ ವಾರ ಮೊದಲ ಚಲನಚಿತ್ರ ಗೀತೆಯನ್ನ ವೇದಿಕೆ ಮೇಲೆ ಹಾಡುವ ಮೂಲಕ ಮತ್ತಷ್ಟು ಮೆಚ್ಚಿಸಿದ್ದಾರೆ. ಅಂದ್ರೆ, ಇಲ್ಲಿಯವರೆಗೂ ಲಕ್ಷ್ಮಿ ಜಾನಪದ ಗೀತೆಯ ಮೂಲಕ ಈ ಕಾರ್ಯಕ್ರಮಕ್ಕೆ ಮೆರಗು ನೀಡಿದ್ದರು.
ತೀರ್ಪುಗಾರರನ್ನ ಮೂಕವಿಸ್ಮಿತಗೊಳಿಸಿದ 'ಲಕ್ಷ್ಮಿ' ಬದುಕಿನ ರೋಚಕ ಕಥೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಸುಧರಾಣಿ ಅಭಿನಯಿಸಿದ್ದ ರಣರಂಗ ಚಿತ್ರದ ''ಇವ ಯಾವ ಸೀಮೆಯ ಗಂಡು'' ಹಾಡನ್ನ ಹಾಡಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಲಕ್ಷ್ಮಿ ಹಾಡಿರುವ ಈ ಹಾಡು ಈಗ ಯ್ಯೂಟ್ಯೂಬ್ ಹಾಗೂ ಫೇಸ್ ಬುಕ್ ನಲ್ಲಿ ವೈರಲ್ ಆಗಿದೆ.
9ನೇ ತರಗತಿ ಓದುತ್ತಿರುವ ಲಕ್ಷ್ಮಿ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಗೋಡಿಗೇರಿಯವರು. ಇವರ ಅಪ್ಪ ಮತ್ತು ಅಮ್ಮ ಕೂಲಿ ಕೆಲಸ ಮಾಡುತ್ತಾರೆ. ಲಕ್ಷ್ಮಿಗೊಬ್ಬರು ಅಣ್ಣ ಇದ್ದಾರೆ. ಅಂದ್ಹಾಗೆ, ಲಕ್ಷ್ಮಿ ಇದುವರೆಗೂ ಯಾವುದೇ ಸಂಗೀತ ಅಭ್ಯಾಸ ಮಾಡಿಲ್ಲ. ಯಾವುದೇ ತರಗತಿಗೂ ಹೋಗಿಲ್ಲ. ಮೊಬೈಲ್ ನಲ್ಲೇ ಹಾಡಿ ಕೇಳಿ, ಹಾಡುವ ಅಭ್ಯಾಸ ಮಾಡಿಕೊಂಡಿದ್ದಾರೆ.