Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ'ದಲ್ಲಿ ಮಕ್ಕಳ ಜೊತೆಗೆ ಹಾಡು ಹಾಡಿದ ಅಪ್ಪ ಅಮ್ಮಂದಿರು
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಸರಿಗಮಪ ಸೀಸನ್ 14' ಕಾರ್ಯಕ್ರಮ ದೊಡ್ಡ ಜನಪ್ರಿಯತೆ ಗಳಿಸಿದೆ. ಈ ಕಾರ್ಯಕ್ರಮದಲ್ಲಿ ಹಾಡುವ ಪ್ರತಿ ಮಕ್ಕಳು ಸಹ ತಮ್ಮ ಗಾಯನದ ಮೂಲಕ ಗಮನ ಸೆಳೆದಿದ್ದಾರೆ. ಇಷ್ಟು ದಿನ ಬರೀ ಮಕ್ಕಳ ಹಾಡುಗಳನ್ನು ಕೇಳಿದ್ದ ವೀಕ್ಷರಿಗೆ ಈಗ ಮತ್ತೊಂದು ವಿಶೇಷತೆ ಕಾದಿದೆ.
ಈ ವಾರ 'ಸರಿಗಮಪ' ಕಾರ್ಯಕ್ರಮದಲ್ಲಿ ಮಕ್ಕಳ ಜೊತೆಗೆ ಅವರ ತಂದೆ ತಾಯಿಯರು ಸಹ ಹಾಡಲಿದ್ದಾರೆ. ಪ್ರತಿ ಸಂಚಿಕೆಯಲ್ಲಿಯೂ ಹೊಸತನವನ್ನು ಹೊತ್ತು ತರುವ ಜೀ ಕನ್ನಡ ತಂಡ ಮತ್ತೆ ಅದನ್ನು ಮುಂದುವರೆಸಿದೆ. ಕಾರ್ಯಕ್ರಮದ ಸ್ಪರ್ಧಿಗಳಾದ ಜ್ಞಾನೇಶ್, ತೇಜಸ್ ಶಾಸ್ತಿ, ಅಭಿಜಾತ್ ಭಟ್, ಲಕ್ಷ್ಮಿ, ಅಂಕಿತಾ ಸೇರಿದಂತೆ ಎಲ್ಲ ಮಕ್ಕಳು ತಮ್ಮ ತಂದೆ ತಾಯಿಯರ ಜೊತೆಗೆ ಹಾಡು ಹಾಡಿದ್ದಾರೆ. ಹಂಸಲೇಖ, ವಿಜಯ ಪ್ರಕಾಶ್, ಅರ್ಜುನ್ ಜನ್ಯ ಮಕ್ಕಳ ಜೊತೆಗೆ ಹಾಡಿದ ಅಪ್ಪ ಅಮ್ಮಂದಿರ ಹಾಡನ್ನು ಎಂಜಾಯ್ ಮಾಡಿದರು.
ಸಾಕಿದ ಕರು ಮಾರಿ 'ಸರಿಗಮಪ' ವೇದಿಕೆ ಏರಿದ ಮಂಡ್ಯದ ಬಡ ಹುಡುಗ!
ಈಗಾಗಲೇ ಈ ಸಂಚಿಕೆಯ ಪ್ರೋಮೋ ಜೀ ಕನ್ನಡ ವಾಹಿನಿಯ ಫೇಸ್ ಬುಕ್ ಪೇಜ್ ನಲ್ಲಿ ಲಭ್ಯವಿದೆ. ಪ್ರೋಮೋ ನೋಡಿರುವ ಸಾಕಷ್ಟು ವೀಕ್ಷಕರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕಾರ್ಯಕ್ರಮವನ್ನು ನೋಡುವ ತವಕದಲ್ಲಿ ಇದ್ದಾರೆ. ಅಂದಹಾಗೆ, ಸರಿಗಮಪ ಕಾರ್ಯಕ್ರಮದ ಈ ವಿಶೇಷ ಸಂಚಿಕೆ ಇದೇ ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಪ್ರಸಾರ ಆಗಲಿದೆ.
ಬಳ್ಳಾರಿಯ ಈ ಬಡ ಹುಡುಗನ ಹಾಡು ಕೇಳಿ ಕೈ ಮುಗಿದ ಹಂಸಲೇಖ!