Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ' ಕ್ವಾರ್ಟರ್ ಫೈನಲ್ ಹಂತ ತಲುಪುವವರು ಯಾರು?
Recommended Video
ಜೀ ಕನ್ನಡ ವಾಹಿನಿಯ 'ಸರಿಗಮಪ' ಸೀಸನ್ 14 ಕಾರ್ಯಕ್ರಮ ದೊಡ್ಡ ಜನಪ್ರಿಯತೆ ಗಳಿಸಿದೆ. ಈ ಕಾರ್ಯಕ್ರಮ ಇದೀಗ ಕ್ವಾಟರ್ ಫೈನಲ್ ಹಂತಕ್ಕೆ ಬಂದಿದೆ. ಇದೇ ಶನಿವಾರ ಮತ್ತು ಭಾನುವಾರ ಕ್ವಾರ್ಟರ್ ಫೈನಲ್ ಹಂತಕ್ಕೆ ಆಯ್ಕೆ ಆಗುವ ಮಕ್ಕಳು ಯಾರು ಎಂಬುದು ತಿಳಿಯಲಿದೆ.
ಈ ಕಾರ್ಯಕ್ರಮದ ದೊಡ್ಡ ಹೈಲೈಟ್ ಅಂದರೆ ಅಲ್ಲಿರುವ ಮಕ್ಕಳು. ಒಬ್ಬೊಬ್ಬರು ಕೂಡ ಇಷ್ಟು ದಿನ ತಮ್ಮ ಅಮೋಘ ಕಂಠಸಿರಿ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಒಬ್ಬರಿಗೆ ಇನ್ನೊಬ್ಬರು ಪೈಪೋಟಿ ನೀಡುವಂತೆ ಹಾಡುತ್ತಿದ್ದಾರೆ. ಎಷ್ಟೋ ಬಾರಿ ತೀರ್ಪುಗಾರರಾದ ಹಂಸಲೇಖ, ವಿಜಯ ಪ್ರಕಾಶ್ ಮತ್ತು ಅರ್ಜುನ್ ಜನ್ಯ ಅವರೇ ಮಕ್ಕಳು ಹಾಡು ಕೇಳಿ ಯಾರನ್ನು ಆಯ್ಕೆ ಮಾಡುವುದು ಎಂದು ಚಿಂತೆ ಮಾಡುತ್ತಾರೆ.
'ಸರಿಗಮಪ' ವೇದಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ
ಇನ್ನು ಸರಿಗಮಪ ಕಾರ್ಯಕ್ರಮದಲ್ಲಿ ಪ್ರತಿ ವಾರ ಎಲಿಮಿನೇಷನ್ ಇರುವುದಿಲ್ಲ. ಆದರೆ ಈ ಸಂಚಿಕೆಯಲ್ಲಿ ಟಾಪ್ ಐದು ಮಕ್ಕಳನ್ನು ಆಯ್ಕೆ ಮಾಡಲೇ ಬೇಕಾಗಿದೆ. ಇನ್ನೊಂದು ಈ ಕಾರ್ಯಕ್ರಮ ನೋಡುವ ವೀಕ್ಷಕರಿಗೆ ಸಹ ದೊಡ್ಡ ನಿರೀಕ್ಷೆ ಇದೆ.
ಇದೇ ಶನಿವಾರ ಮತ್ತು ಭಾನುವಾರ ಪ್ರಸಾರ ಆಗುವ ಈ ಸಂಚಿಕೆಯಲ್ಲಿ ಅತಿಥಿಗಳಾಗಿ 'ರಾಂಬೋ 2' ಚಿತ್ರತಂಡ ಆಗಮಿಸಿದೆ. ನಟ ಶರಣ್, ನಟಿ ಆಶಿಕಾ ರಂಗನಾಥ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮಕ್ಕಳ ಹಾಡನ್ನು ಎಂಜಾಯ್ ಮಾಡಿದ್ದಾರೆ.