Don't Miss!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- News ‘ಮೋದಿಯನ್ನು ಬಾಯಿಗೆ ಬಂದ ಹಾಗೆ ಬೈದ ದೇವೇಗೌಡ್ರು ಈಗ ಅಪ್ಪಿಕೊಳ್ಳುವುದು ಎಂದರೆ ಏನರ್ಥ?’
- Lifestyle ಹೌಸ್ವೈಫ್ ಆಗಿರುವ ಈ ಮಹಿಳೆ ದಿನದಲ್ಲಿ 2 ಗಂಟೆ ಕೆಲಸ ಮಾಡಿ ಲಕ್ಷ ಗಳಿಸುತ್ತಿದ್ದಾರಂತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Automobiles ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ' ಕ್ವಾರ್ಟರ್ ಫೈನಲ್ ಹಂತ ತಲುಪುವವರು ಯಾರು?
Recommended Video
ಜೀ ಕನ್ನಡ ವಾಹಿನಿಯ 'ಸರಿಗಮಪ' ಸೀಸನ್ 14 ಕಾರ್ಯಕ್ರಮ ದೊಡ್ಡ ಜನಪ್ರಿಯತೆ ಗಳಿಸಿದೆ. ಈ ಕಾರ್ಯಕ್ರಮ ಇದೀಗ ಕ್ವಾಟರ್ ಫೈನಲ್ ಹಂತಕ್ಕೆ ಬಂದಿದೆ. ಇದೇ ಶನಿವಾರ ಮತ್ತು ಭಾನುವಾರ ಕ್ವಾರ್ಟರ್ ಫೈನಲ್ ಹಂತಕ್ಕೆ ಆಯ್ಕೆ ಆಗುವ ಮಕ್ಕಳು ಯಾರು ಎಂಬುದು ತಿಳಿಯಲಿದೆ.
ಈ ಕಾರ್ಯಕ್ರಮದ ದೊಡ್ಡ ಹೈಲೈಟ್ ಅಂದರೆ ಅಲ್ಲಿರುವ ಮಕ್ಕಳು. ಒಬ್ಬೊಬ್ಬರು ಕೂಡ ಇಷ್ಟು ದಿನ ತಮ್ಮ ಅಮೋಘ ಕಂಠಸಿರಿ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಒಬ್ಬರಿಗೆ ಇನ್ನೊಬ್ಬರು ಪೈಪೋಟಿ ನೀಡುವಂತೆ ಹಾಡುತ್ತಿದ್ದಾರೆ. ಎಷ್ಟೋ ಬಾರಿ ತೀರ್ಪುಗಾರರಾದ ಹಂಸಲೇಖ, ವಿಜಯ ಪ್ರಕಾಶ್ ಮತ್ತು ಅರ್ಜುನ್ ಜನ್ಯ ಅವರೇ ಮಕ್ಕಳು ಹಾಡು ಕೇಳಿ ಯಾರನ್ನು ಆಯ್ಕೆ ಮಾಡುವುದು ಎಂದು ಚಿಂತೆ ಮಾಡುತ್ತಾರೆ.
'ಸರಿಗಮಪ' ವೇದಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ
ಇನ್ನು ಸರಿಗಮಪ ಕಾರ್ಯಕ್ರಮದಲ್ಲಿ ಪ್ರತಿ ವಾರ ಎಲಿಮಿನೇಷನ್ ಇರುವುದಿಲ್ಲ. ಆದರೆ ಈ ಸಂಚಿಕೆಯಲ್ಲಿ ಟಾಪ್ ಐದು ಮಕ್ಕಳನ್ನು ಆಯ್ಕೆ ಮಾಡಲೇ ಬೇಕಾಗಿದೆ. ಇನ್ನೊಂದು ಈ ಕಾರ್ಯಕ್ರಮ ನೋಡುವ ವೀಕ್ಷಕರಿಗೆ ಸಹ ದೊಡ್ಡ ನಿರೀಕ್ಷೆ ಇದೆ.
ಇದೇ ಶನಿವಾರ ಮತ್ತು ಭಾನುವಾರ ಪ್ರಸಾರ ಆಗುವ ಈ ಸಂಚಿಕೆಯಲ್ಲಿ ಅತಿಥಿಗಳಾಗಿ 'ರಾಂಬೋ 2' ಚಿತ್ರತಂಡ ಆಗಮಿಸಿದೆ. ನಟ ಶರಣ್, ನಟಿ ಆಶಿಕಾ ರಂಗನಾಥ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮಕ್ಕಳ ಹಾಡನ್ನು ಎಂಜಾಯ್ ಮಾಡಿದ್ದಾರೆ.