Don't Miss!
- News ಬಿಜೆಪಿ 400 ಸ್ಥಾನ ಪಡೆಯಲು ಹರಸಾಹಸ ಪಡುತ್ತಿರುವುದ್ಯಾಕೆ.?-ಯತೀಂದ ಸಿದ್ದರಾಮಯ್ಯ ಹೇಳಿದ್ದೇನು?
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ಕಲಾವಿದ ಶಂಕರ್ ರಾವ್ ನಿಧನ
'ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.
'ಪಾಪಾ ಪಾಂಡು' ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ 'ಬಿಸಿ-ಬಿಸಿ' ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. 'ಪರ್ವ', 'ಸಿಲ್ಲಿ-ಲಲ್ಲಿ' ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ.
ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್ ರಾವ್ ಎಳವೆಯಿಂದಲೇ ಸಿನಿಮಾ ಪ್ರೇಮಿ. ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು. 1956ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, 'ಗೆಳೆಯರ ಬಳಗ' ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. 'ನಟರಂಗ' ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಪಕರೊಬ್ಬರು 'ಯಾರ ಸಾಕ್ಷಿ' ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.