Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾನಿನ್ನೂ ಬದುಕಿದ್ದೀನಿ; ಸಾವಿನ ವದಂತಿ ಬಗ್ಗೆ 'ಶಕ್ತಿಮಾನ್' ನಟ ಮುಖೇಶ್ ಸ್ಪಷ್ಟನೆ
'ಶಕ್ತಿಮಾನ್' ಮತ್ತು 'ಮಹಾಭಾರತ' ಧಾರಾವಾಹಿ ಮೂಲಕ ದೇಶದ ಗಮನ ಸೆಳೆದಿದ್ದ ನಟ ಮುಖೇಶ್ ಖನ್ನಾ ಸಾವಿನ ವದಂತಿ ವೈರಲ್ ಆಗಿದೆ. ಕೋವಿಡ್-19 ನಿಂದ ಮುಖೇಶ್ ಖನ್ನಾ ನಿಧನರಾಗಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Recommended Video
ಮುಖೇಶ್ ಸಾವಿನ ಪೋಸ್ಟರ್ ಗಳನ್ನು ನೋಡಿ ಅಭಿಮಾನಿಗಳು, ಸ್ನೇಹಿತರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ತನ್ನ ಸಾವಿನ ಸುದ್ದಿಯನ್ನು ತಾವೆ ನೋಡಿ ಶಾಕ್ ಆದ ಮುಖೇಶ್ ಖನ್ನಾ ನಾನಿನ್ನೂ ಬದುಕಿದ್ದೀನಿ ಎಂದು ವಿಡಿಯೋ ಮೂಲಕ ಫುಲ್ ಗರಂ ಆಗಿದ್ದಾರೆ.
ಮಹಾಭಾರತ ಧಾರವಾಹಿ ನೋಡಬೇಡಿ: ಹಿರಿಯ ನಟನ ಹಳೆಯ ವಿಡಿಯೋ ವೈರಲ್
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಸಾವಿನ ವದಂತಿಗೆ ಸ್ಪಷ್ಟನ ನೀಡಿರುವ ಮುಖೇಶ್ ಖನ್ನಾ, ಯಾರೊಬ್ಬರ ಜೀವನದ ಬಗ್ಗೆಯೂ ಇಂಥ ಸುಳ್ಳು ಸುದ್ದಿಗಳನ್ನು ಹಬ್ಬಸಬೇಡಿ, ಮೊದಲು ಪರಿಶೀಲಿಸಿಕೊಳ್ಳಿ ಎಂದಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣವೇ ಹೊಣೆಯಾಗಲಿದೆ ಎಂದಿದ್ದಾರೆ.
'ನಿಮ್ಮ ಆಶೀರ್ವಾದದಿಂದ ನಾನು ಸಂಪೂರ್ಣವಾಗಿ ಆರೋಗ್ಯವಾಗಿ, ಚೆನ್ನಾಗಿ ಇದ್ದೀನಿ. ನನಗೆ ಕೋವಿಡ್ -19 ಇಲ್ಲ. ನನ್ನನ್ನು ಯಾವುದೇ ಆಸ್ಪತ್ರೆಗೂ ದಾಖಲಿಸಿಲ್ಲ. ಈ ವದಂತಿಯನ್ನು ಯಾರು ಹಬ್ಬಿಸಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಇದರ ಉದ್ದೇಶವೇನು ಎನ್ನುವುದು ನನಗೆ ಗೊತ್ತಿಲ್ಲ. ಇಂಥ ಸುಳ್ಳು ಸುದ್ದಿಯಿಂದ ಜನರ ಭಾವನೆಯನ್ನು ನೋವಿಸಬೇಡಿ' ಎಂದು ಹೇಳಿದ್ದಾರೆ.
'ಇಂಥ ಮಾನಸಿಕ ಅಸ್ಥಿರವಾಗಿರುವ ಜನರಿಗೆ ಯಾವ ಚಿಕಿತ್ಸೆ ನೀಡಬೇಕು. ಅವರನ್ನು ಯಾರು ಶಿಕ್ಷಿಸುತ್ತಾರೆ. ಸಾಕು, ಈಗಲೇ ಜಾಸ್ತಿ ಆಗಿದೆ. ಇಂಥ ನಕಲಿ ಸುದ್ದಿಗಳನ್ನು ನಿಲ್ಲಿಸಿ' ಕೋಪಗೊಂಡಿದ್ದಾರೆ.
1990 ದಶಕದಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಶಕ್ತಿಮಾನ್ ಮೂಲಕ ಮುಖೇಶ್ ಖನ್ನಾ ಪ್ರಸಿದ್ಧಿ ಪಡೆದಿದ್ದರು. ಬಳಿಕ ಬಿ ಆರ್ ಚೋಪ್ರಾ ಪ್ರಸಿದ್ಧ ಮಹಾಭಾರತ ಧಾರಾವಾಹಿಯಲ್ಲಿ ಭೀಷ್ಮ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದರು. ಈ ಎರಡು ಧಾರಾವಾಹಿಗಳು ಮುಖೇಶ್ ಖನ್ನಾ ವೃತ್ತಿ ಜೀವನದ ಬಹುಮುಖ್ಯವಾಗಿದೆ.