Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರತ್ಯೂಷಾ ಆತ್ಮಹತ್ಯೆ ಕೇಸಲ್ಲಿ ಟ್ವಿಸ್ಟ್: ರಾಹುಲ್ ಮುಖವಾಡ ಕಳಚಿ ಬಿತ್ತು
'ಬಾಲಿಕಾ ವಧು' ಖ್ಯಾತಿಯ ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಅವರ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಆತ್ಮಹತ್ಯೆಗೂ ಮುನ್ನ ಪ್ರತ್ಯೂಷಾ ರಾಹುಲ್ ರಾಜ್ ಜೊತೆ ನಡೆಸಿದ ಫೋನ್ ಸಂಭಾಷಣೆ ಇದೀಗ ಪ್ರತ್ಯೂಷಾ ಪರ ವಕೀಲರ ಕೈ ಸ
2016 ಏಪ್ರಿಲ್ 1, ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡ, 'ಬಾಲಿಕಾ ವಧು' ಖ್ಯಾತಿಯ ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಪ್ರಕರಣ ಕೇಸ್ ಈಗಲೂ ಕೋರ್ಟ್ ನಲ್ಲಿ ನಡೆಯುತ್ತಿದೆ. ಇದೀಗ ಈ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ನಟಿ ಪ್ರತ್ಯೂಷಾ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಗೆಳೆಯ ರಾಹುಲ್ ರಾಜ್ ಸಿಂಗ್ ಜೊತೆ ಸಂಭಾಷಣೆ ನಡೆಸಿದ್ದರು. ಸುಮಾರು ಮೂರು ನಿಮಿಷಗಳ ಸಂಭಾಷಣೆಯಲ್ಲಿ, ಪ್ರತ್ಯೂಷಾ ಒಬ್ಬ ಮುಂಬೈ ಉದ್ಯಮಿ ಜೊತೆ ಹಾಸಿಗೆ ಹಂಚಿಕೊಂಡಿರುವ ವಿಚಾರದ ಬಗ್ಗೆ ಮಾತನಾಡಿದ್ದರು.[ಕಿರುತೆರೆ ನಟಿ ಪ್ರತ್ಯೂಷ ಸಾವಿನ ಬಗ್ಗೆ ರಾಖಿ ಸಾವಂತ್ ಹೇಳಿದ್ದೇನು?]
'ನಾನು ಈ ಕ್ಷೇತ್ರಕ್ಕೆ ನಟಿಸಬೇಕು ಅಂತ ಬಂದೆ, ಆದರೆ ನೀನು ನನ್ನನ್ನು ಈ ಮಟ್ಟಕ್ಕೆ ಕರೆ ತಂದು ನಿಲ್ಲಿಸಿದ್ದೀಯಾ. ನಿನಗೆ ಗೊತ್ತಿಲ್ಲ, ಇಂದು ನಾನು ಎಷ್ಟು ನೋವು ಅನುಭವಿಸುತ್ತಿದ್ದೇನೆ, ನನ್ನಲ್ಲಿ ಎಂತಹ ಕೆಟ್ಟ ಭಾವನೆ ಮೂಡುತ್ತಿದೆ ಅಂತ ನಿನಗೆ ಅರ್ಥ ಆಗೋದಿಲ್ಲ' ಹೀಗೆ ಮಾತಾಡಿ ಪ್ರತ್ಯೂಷಾ ಫೋನ್ ಕಟ್ ಮಾಡಿದ್ದಾರೆ.
ಈ ಫೋನ್ ಸಂಭಾಷಣೆ ಪ್ರತಿ ಪ್ರತ್ಯೂಷಾ ಪೋಷಕರ ಪರ ವಾದ ಮಾಡುತ್ತಿರುವ ವಕೀಲ ನೀರಜ್ ಗುಪ್ತಾ ಅವರಿಗೆ ಸಿಕ್ಕಿದೆ ಎಂದು ಮೂಲಗಳು ವರದಿ ಮಾಡಿವೆ.['ಬಾಲಿಕಾ ವಧು' ಪ್ರತ್ಯೂಷಾ ಆತ್ಮಹತ್ಯೆಗೆ ಏನು ಕಾರಣ?]
ಒಟ್ನಲ್ಲಿ ಪ್ರತ್ಯೂಷಾ ಅವರ ಈ ಫೋನ್ ಸಂಭಾಷಣೆ ನೋಡಿದರೆ, ಅವರ ಗೆಳೆಯ ರಾಹುಲ್ ಸಿಂಗ್ ಆಕೆಯನ್ನು ಒತ್ತಾಯಪೂರ್ವಕವಾಗಿ ವೈಶ್ಯಾವಾಟಿಕೆ ಕೆಲಸಕ್ಕೂ ದೂಡುತ್ತಿದ್ದರೇ?, ಅನ್ನೋ ಅನುಮಾನ ಕಾಡುತ್ತದೆ.