Don't Miss!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಶ್ರುತಿ ನಾಯ್ಡು
'ಪ್ರೀತಿ ಇಲ್ಲದ ಮೇಲೆ' ಸೀರಿಯಲ್ ನಲ್ಲಿ ಅಭಿನಯಿಸಿ, 'ಬ್ರಹ್ಮಗಂಟು', 'ಶ್ರೀರಸ್ತು ಶುಭಮಸ್ತು', 'ಪುನರ್ ವಿವಾಹ', 'ಮಹಾದೇವಿ' ಅಂತಹ ಜನಪ್ರಿಯ ಧಾರಾವಾಹಿಗಳನ್ನು ಕಿರುತೆರೆ ಲೋಕಕ್ಕೆ ನೀಡಿದವರು ಶ್ರುತಿ ನಾಯ್ಡು.
ಕಿರುತೆರೆ ಲೋಕದಲ್ಲಿ ನಿರ್ಮಾಪಕಿ ಆಗಿ, ನಿರ್ದೇಶಕಿ ಆಗಿ ಗುರುತಿಸಿಕೊಂಡಿರುವ ಶ್ರುತಿ ನಾಯ್ಡು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಶ್ರುತಿ ನಾಯ್ಡು ಆಚರಿಸಿಕೊಂಡಿದ್ದಾರೆ.
ತಮ್ಮ ಬರ್ತಡೇ ಪ್ರಯುಕ್ತ 'ವನ್ಯಜೀವಿ ಸಂರಕ್ಷಣಾ ಅಭಿಯಾನ'ದ ಮೂಲಕ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಹೋಗಿದ್ದು ಮತ್ತು ಅಲ್ಲಿನ ವಾಚರ್ಸ್ ಮತ್ತು ಗಾರ್ಡ್ಸ್ ಗೆ ಮೆಡಿಕಲ್ ಕಿಟ್ ಗಳನ್ನು ನೀಡಿದ್ದಾರೆ ಶ್ರುತಿ ನಾಯ್ಡು.
''ಫಾರೆಸ್ಟ್ ವಾಚರ್ಸ್, ಗಾರ್ಡ್ಸ್ ಮೇಲೆ ವನ್ಯಜೀವಿಗಳು ಅಥವಾ ವಿಷ ಜಂತುಗಳು ದಾಳಿ ಮಾಡಿದರೆ, ತಕ್ಷಣಕ್ಕೆ ಆಸ್ಪತ್ರೆಗೆ ಹೋಗುವುದು ಕಷ್ಟ. ಹೀಗಾಗಿ, ತಕ್ಷಣ ಅನುಕೂಲ ಆಗುವ ಹಾಗೆ ವಾಚರ್ಸ್ ಮತ್ತು ಗಾರ್ಡ್ಸ್ ಗೆ ಮೆಡಿಕಲ್ ಕಿಟ್ ವಿತರಿಸಿದ್ದೇನೆ. ಸುಮಾರು 60 ವಾಚರ್ಸ್ ಮತ್ತು ಗಾರ್ಡ್ಸ್ ಗೆ ನಮ್ಮ ಸಂಸ್ಥೆಯಿಂಧ ಮೆಡಿಕಲ್ ಕಿಟ್ ಕೊಟ್ಟಿದ್ದೇನೆ'' ಎನ್ನುತ್ತಾರೆ ಶ್ರುತಿ ನಾಯ್ಡು.
ಹೈದರಾಬಾದ್ ರೇಪ್ ಕೇಸ್: ಹಳೇಕಾಲದ ಯೋಚನೆಗಳೇ ಸರಿ ಎಂದ ಶ್ರುತಿ ನಾಯ್ಡು
ಅಂದ್ಹಾಗೆ, ಕಿರುತೆರೆಯಲ್ಲಿ ಯಶಸ್ಸು ಕಂಡಿರುವ ಶ್ರುತಿ ನಾಯ್ಡು 'ಪ್ರೀಮಿಯರ್ ಪದ್ಮಿನಿ' ಚಿತ್ರಕ್ಕೂ ಬಂಡವಾಳ ಹಾಕಿದ್ದರು. ವಿಮರ್ಶಕರಿಂದ 'ಪ್ರೀಮಿಯರ್ ಪದ್ಮಿನಿ' ಮೆಚ್ಚುಗೆ ಗಳಿಸಿತ್ತು.
ಯಶಸ್ವಿ ನಿರ್ಮಾಪಕಿ ಆಗಿರುವ ಶ್ರುತಿ ನಾಯ್ಡುಗೆ ಒಳ್ಳೆಯ ಕಥೆ ಸಿಕ್ಕರೆ ಆಕ್ಷನ್ ಕಟ್ ನೂ ಹೇಳ್ತಾರಂತೆ. ಸದ್ಯ ಹುಟ್ಟುಹಬ್ಬದ ಸಂಭ್ರಮದಲ್ಲಿ ಇರುವ ಶ್ರುತಿ ನಾಯ್ಡುಗೆ ನಮ್ಮ ಕಡೆಯಿಂದಲೂ ಶುಭಾಶಯಗಳು.