Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಶ್ರುತಿ ನಾಯ್ಡು
'ಪ್ರೀತಿ ಇಲ್ಲದ ಮೇಲೆ' ಸೀರಿಯಲ್ ನಲ್ಲಿ ಅಭಿನಯಿಸಿ, 'ಬ್ರಹ್ಮಗಂಟು', 'ಶ್ರೀರಸ್ತು ಶುಭಮಸ್ತು', 'ಪುನರ್ ವಿವಾಹ', 'ಮಹಾದೇವಿ' ಅಂತಹ ಜನಪ್ರಿಯ ಧಾರಾವಾಹಿಗಳನ್ನು ಕಿರುತೆರೆ ಲೋಕಕ್ಕೆ ನೀಡಿದವರು ಶ್ರುತಿ ನಾಯ್ಡು.
ಕಿರುತೆರೆ ಲೋಕದಲ್ಲಿ ನಿರ್ಮಾಪಕಿ ಆಗಿ, ನಿರ್ದೇಶಕಿ ಆಗಿ ಗುರುತಿಸಿಕೊಂಡಿರುವ ಶ್ರುತಿ ನಾಯ್ಡು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಶ್ರುತಿ ನಾಯ್ಡು ಆಚರಿಸಿಕೊಂಡಿದ್ದಾರೆ.
ತಮ್ಮ ಬರ್ತಡೇ ಪ್ರಯುಕ್ತ 'ವನ್ಯಜೀವಿ ಸಂರಕ್ಷಣಾ ಅಭಿಯಾನ'ದ ಮೂಲಕ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಹೋಗಿದ್ದು ಮತ್ತು ಅಲ್ಲಿನ ವಾಚರ್ಸ್ ಮತ್ತು ಗಾರ್ಡ್ಸ್ ಗೆ ಮೆಡಿಕಲ್ ಕಿಟ್ ಗಳನ್ನು ನೀಡಿದ್ದಾರೆ ಶ್ರುತಿ ನಾಯ್ಡು.
''ಫಾರೆಸ್ಟ್ ವಾಚರ್ಸ್, ಗಾರ್ಡ್ಸ್ ಮೇಲೆ ವನ್ಯಜೀವಿಗಳು ಅಥವಾ ವಿಷ ಜಂತುಗಳು ದಾಳಿ ಮಾಡಿದರೆ, ತಕ್ಷಣಕ್ಕೆ ಆಸ್ಪತ್ರೆಗೆ ಹೋಗುವುದು ಕಷ್ಟ. ಹೀಗಾಗಿ, ತಕ್ಷಣ ಅನುಕೂಲ ಆಗುವ ಹಾಗೆ ವಾಚರ್ಸ್ ಮತ್ತು ಗಾರ್ಡ್ಸ್ ಗೆ ಮೆಡಿಕಲ್ ಕಿಟ್ ವಿತರಿಸಿದ್ದೇನೆ. ಸುಮಾರು 60 ವಾಚರ್ಸ್ ಮತ್ತು ಗಾರ್ಡ್ಸ್ ಗೆ ನಮ್ಮ ಸಂಸ್ಥೆಯಿಂಧ ಮೆಡಿಕಲ್ ಕಿಟ್ ಕೊಟ್ಟಿದ್ದೇನೆ'' ಎನ್ನುತ್ತಾರೆ ಶ್ರುತಿ ನಾಯ್ಡು.
ಹೈದರಾಬಾದ್ ರೇಪ್ ಕೇಸ್: ಹಳೇಕಾಲದ ಯೋಚನೆಗಳೇ ಸರಿ ಎಂದ ಶ್ರುತಿ ನಾಯ್ಡು
ಅಂದ್ಹಾಗೆ, ಕಿರುತೆರೆಯಲ್ಲಿ ಯಶಸ್ಸು ಕಂಡಿರುವ ಶ್ರುತಿ ನಾಯ್ಡು 'ಪ್ರೀಮಿಯರ್ ಪದ್ಮಿನಿ' ಚಿತ್ರಕ್ಕೂ ಬಂಡವಾಳ ಹಾಕಿದ್ದರು. ವಿಮರ್ಶಕರಿಂದ 'ಪ್ರೀಮಿಯರ್ ಪದ್ಮಿನಿ' ಮೆಚ್ಚುಗೆ ಗಳಿಸಿತ್ತು.
ಯಶಸ್ವಿ ನಿರ್ಮಾಪಕಿ ಆಗಿರುವ ಶ್ರುತಿ ನಾಯ್ಡುಗೆ ಒಳ್ಳೆಯ ಕಥೆ ಸಿಕ್ಕರೆ ಆಕ್ಷನ್ ಕಟ್ ನೂ ಹೇಳ್ತಾರಂತೆ. ಸದ್ಯ ಹುಟ್ಟುಹಬ್ಬದ ಸಂಭ್ರಮದಲ್ಲಿ ಇರುವ ಶ್ರುತಿ ನಾಯ್ಡುಗೆ ನಮ್ಮ ಕಡೆಯಿಂದಲೂ ಶುಭಾಶಯಗಳು.