Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತೂ ಇಂತೂ ಶ್ರುತಿ ಪ್ರಕಾಶ್ ಆಸೆ ಈಡೇರಿತು.!
ಅಂತೂ ಇಂತೂ ಶ್ರುತಿ ಮೊಗದಲ್ಲಿ ಮಂದಹಾಸ ಮೂಡಿದೆ. 'ಬಿಗ್ ಬಾಸ್' ಮನೆಯೊಳಗೆ ತಮ್ಮ ತಂದೆ ಬಂದ ಕಾರಣ ಶ್ರುತಿ ಮುಖದಲ್ಲಿ ಕಳೆ ಬಂದಿದೆ. ಅಲ್ಲಿಗೆ, ಶ್ರುತಿ ಆಸೆ ಈಡೇರಿದೆ.
ಕಳೆದ ಎರಡ್ಮೂರು ವಾರಗಳಿಂದ ಶ್ರುತಿ ಕೊಂಚ ಸಪ್ಪೆ ಆಗಿದ್ದರು. ಕಾರಣ, 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಹದಿಮೂರು ವಾರಗಳು ಕಳೆದರೂ, ತಮ್ಮ ಕುಟುಂಬದ ಕಡೆಯಿಂದ ಶ್ರುತಿಗಾಗಿ ಏನೂ ಲಭಿಸಿರಲಿಲ್ಲ.
ಪ್ರತಿ ವಾರ ಯಾರೇ ಕ್ಯಾಪ್ಟನ್ ಆದರೂ, ಅವರಿಗೆ ಅವರ ಕುಟುಂಬದ ಕಡೆಯಿಂದ ವಾಯ್ಸ್ ನೋಟ್ ಪ್ಲೇ ಆಗುತ್ತಿತ್ತು. ಒಂದು ವಾರ ಮಾತ್ರ ಯಾರ್ಯಾರು ನಾಮಿನೇಟ್ ಆಗಿದ್ದರೋ, ಅವರಿಗೆಲ್ಲ ಅವರವರ ಕುಟುಂಬದವರು ವಾಯ್ಸ್ ಮೆಸೇಜ್ ಕಳುಹಿಸಿದ್ದರು. ಆದ್ರೆ, ದುರಾದೃಷ್ಟವಶಾತ್ ಅಂದು ಶ್ರುತಿ ನಾಮಿನೇಟ್ ಆಗಿರಲಿಲ್ಲ. ಹಾಗೇ, ಶ್ರುತಿ ಕ್ಯಾಪ್ಟನ್ ಆದಾಗಲೂ, 'ವಾಯ್ಸ್ ಮೆಸೇಜ್' ಭಾಗ್ಯ ಆಕೆಗೆ ಸಿಕ್ಕಿರಲಿಲ್ಲ.
'ಬಿಗ್ ಬಾಸ್' ಮನೆಯೊಳಗೆ ಶ್ರುತಿ ಕಾಲಿಡುವಾಗಲೂ, ಆಕೆಯ ಕುಟುಂಬದವರು ಹಾಜರ್ ಇರಲಿಲ್ಲ. ಕಳೆದ ವಾರ ಎಲ್ಲ ಸ್ಪರ್ಧಿಗಳ ಮನೆಯವರಿಗೆ 'ಬಿಗ್ ಬಾಸ್' ಮನೆಯೊಳಗೆ ಹೋಗುವ ಅವಕಾಶ ಕಲ್ಪಿಸಲಾಗಿತ್ತು. ಆದ್ರೆ, ಆಗಲೂ ಶ್ರುತಿ ಪ್ರಕಾಶ್ ಕುಟುಂಬ ಬರಲಿಲ್ಲ. ''ಅನಿವಾರ್ಯ ಕಾರಣಗಳಿಂದ ಬರಲು ಸಾಧ್ಯ ಆಗಲಿಲ್ಲ'' ಎಂದು ಶ್ರುತಿ ಸಹೋದರಿ ವಿಡಿಯೋ ಮೆಸೇಜ್ ಕಳುಹಿಸಿದ್ದರು.
ತಮ್ಮಿಂದ ಶೋನಲ್ಲಿ ಏನೋ ಸಮಸ್ಯೆ ಆಗಿರಬೇಕು, ಹೀಗಾಗಿ ಯಾರೂ ಬಂದಿಲ್ಲ ಎಂದು ಶ್ರುತಿ ಬೇಸರಗೊಂಡಿದ್ದರು. ಇದನ್ನೆಲ್ಲ ಗಮನಿಸಿದ ಮೇಲೆ ಶ್ರುತಿ ತಂದೆ ಪ್ರಕಾಶ್ ನಿನ್ನೆ 'ಬಿಗ್ ಬಾಸ್' ಮನೆಯೊಳಗೆ ಪ್ರತ್ಯಕ್ಷವಾಗಿದ್ದರು. ಶ್ರುತಿ ಜೊತೆಗೆ ಕೆಲ ಕಾಲ ಕಳೆದರು. ತಂದೆಯನ್ನ ನೋಡಿದ್ಮೇಲೆ ಶ್ರುತಿ ಖುಷಿ ಪಟ್ಟರು.