Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು 'ಸರಿಗಮಪ'ಗೆ ಆಯ್ಕೆಯಾದ ಕನ್ನಡದ ಐಶ್ವರ್ಯ
ಜೀ ಕನ್ನಡ ವಾಹಿನಿಯ ಸ್ಪರ್ಧಿಗಳು ಸಿಕ್ಕಾಪಟ್ಟೆ ಜನಪ್ರಿಯತೆ ಗಳಿಸಿದ್ದನ್ನು ಪ್ರತಿ ಸೀಸನ್ ನಲ್ಲಿ ನೋಡುತ್ತಿದ್ದೇವೆ. ಅದೇ ರೀತಿ ತನ್ನ ಹಾಡುಗಳು ಮೂಲಕ ಮೆಚ್ಚುಗೆ ಪಡೆದಿದ್ದ ಗಾಯಕಿ ಐಶ್ವರ್ಯ ರಂಗರಾಜನ್.
ಐಶ್ವರ್ಯ ರಂಗನಾಥ್ 'ಸರಿಗಮಪ ಸೀಸನ್ 11' ರಲ್ಲಿ ಭಾಗಿಯಾಗಿದ್ದರು, ತಮ್ಮ ಗಾಯನ ಪ್ರತಿಭೆ ಮೂಲಕ ಟಾಪ್ 3 ಸ್ಥಾನಕ್ಕೆ ಆಯ್ಕೆ ಆದರು. ಟ್ರೋಫಿ ಗೆಲ್ಲದೆ ಇದ್ದರೂ ಅವರಿಗೆ ಅವಕಾಶಗಳು ಸಿಗುತ್ತಾ ಹೊಯ್ತು.
ಶಾಲೆಗೆ ಮರಳಿದ 'ಸರಿಗಮಪ' ತಂಡ : ಹಂಸಲೇಖ ಈಗ ಸ್ಕೂಲ್ ಮೇಷ್ಟ್ರು
ಈಗ ಈ ಗಾಯಕಿ ತಮಿಳಿನ ಸರಿಗಮಪ ಕಾರ್ಯಕ್ರಮಕ್ಕೆ ಆಯ್ಕೆ ಆಗಿದ್ದಾರೆ. ಮೆಗಾ ಆಡಿಷನ್ ನಲ್ಲಿ ಅವರು ಹಾಡಿದ ಶೈಲಿಗೆ ಎಲ್ಲರೂ ಫಿದಾ ಆಗಿದ್ದಾರೆ. ತೀರ್ಪುಗಾರರಾದ ಶ್ರೀನಿವಾಸ್ ಹಾಗೂ ಸುಜಾತ ಹಾಡು ಕೇಳಿ ಖುಷಿ ಆಗಿದ್ದಾರೆ. ನಿಮ್ಮನ್ನು ಪಡೆಯಲು ಈ ಕಾರ್ಯಕ್ರಮ ಅದೃಷ್ಟ ಮಾಡಿದೆ ಎಂದು ಐಶ್ವರ್ಯರನ್ನು ಕಾರ್ಯಕ್ರಮಕ್ಕೆ ಸ್ವಾಗತ ಮಾಡಿಕೊಂಡರು.
ಈ ಹಿಂದೆ ಗಾಯಕ ಸಂಚಿತ್ ಹೆಗ್ಡೆ ಕೂಡ ಕನ್ನಡದ ಕಾರ್ಯಕ್ರಮದ ನಂತರ ತಮಿಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಬಾರಿ ಕಾರ್ಯಕ್ರಮದಲ್ಲಿ ಬರೋಬ್ಬರಿ ನೂರು ಜೂರಿ ಮೆಂಬರ್ ಗಳು ಇದ್ದು, ಅದ್ದೂರಿಯಾಗಿ ಕಾರ್ಯಕ್ರಮ ಮಾಡಲಾಗುತ್ತಿದೆ.
ಗಾಯನ ಮಾತ್ರವಲ್ಲದೆ ಐಶ್ವರ್ಯ ಕಿರುಚಿತ್ರಗಳು ಹಾಗೂ 'ಮಗಳು ಜಾನಕಿ' ಧಾರಾವಾಹಿಯಲ್ಲಿಯೂ ಒಂದು ಪಾತ್ರ ಮಾಡಿದ್ದರು.