Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆ ನಟ ಚೇತನ, ಗಾಯಕ ವೆಂಕಟಾದ್ರಿ ವಿಧಿವಶ
ಕನ್ನಡ ಕಿರುತೆರೆಯಲ್ಲಿ ಎಲ್ಲರ ಪ್ರೀತಿಗೆ ಪಾತ್ರರಾಗಿ ವೆಂಕಟಾದ್ರಿ ಎಂದೇ ಆತ್ಮೀಯರಾಗಿದ್ದ ವೆಂಕಟಾದ್ರಿ ಮೈಸೂರು ಸುಬ್ಬಾರಾವ್ (57) ಇನ್ನು ನೆನಪು ಮಾತ್ರ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ (ಜನವರಿ 31) ಮಧ್ಯಾಹ್ನ 2.15ಕ್ಕೆ ವಿಧಿವಶರಾಗಿದ್ದಾರೆ.
ಕಳೆದ 10 ದಿನಗಳಿಂದ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 4 ದಿನಗಳಿಂದ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರ ಅಂತ್ಯಕ್ರಿಯೆಗಳು ಭಾನುವಾರ (ಫೆಬ್ರವರಿ 1) ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಬಾಗಲಕುಂಟೆಯ ಅವರ ಸ್ವಗೃಹದಲ್ಲಿ ನೆರವೇರಲಿವೆ. ಅವರ ಸ್ವಗೃಹದ ವಿಳಾಸ ಹೀಗಿದೆ - #567, ಹಂಸಧ್ವನಿ, 23ನೇ ಕ್ರಾಸ್, ಬಾಗಲಕುಂಟೆ, ಹೆಸರಘಟ್ಟ ರಸ್ತೆ, ಬೆಂಗಳೂರು- 560073.
ವೆಂಕಟಾದ್ರಿ ಅವರು ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರ ಫೇಸ್ ಬುಕ್ ನಲ್ಲಿ ಶೀಘ್ರ ಗುಣಮುಖರಾಗಲಿ ಎಂಬ ಸಂದೇಶಗಳ ಮಹಾಪೂರವೇ ಹರಿದು ಬರುತ್ತಿತ್ತು. ಇದೀಗ ಅವರ ಹಠಾತ್ ಕಣ್ಮರೆಯಿಂದ ಅವರ ಫೇಸ್ ಬುಕ್ ಪುಟಗಳ ತುಂಬ ಸಂತಾಪ ಮಡುಗಟ್ಟಿದೆ. (ಫಿಲ್ಮಿಬೀಟ್ ಕನ್ನಡ)