Don't Miss!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಣ್ಣದಲೋಕದಲ್ಲಿ ನವತಾರೆಯಾಗಿ ಮಿಂಚುತ್ತಿರುವ ಹ್ಯಾಂಡ್ಸಮ್ ಹುಡುಗ ವಿನಯ್ ಕಶ್ಯಪ್
ಬಣ್ಣದ ಜಗತ್ತು ಎನ್ನುವುದೇ ಹಾಗೆ, ಎಂತವರನ್ನು ತನ್ನತ್ತ ಸೆಳೆಯುವ ಶಕ್ತಿ ಹೊಂದಿದೆ. ಐಟಿ ಕ್ಷೇತ್ರದಲ್ಲಿ ಕೈ ತುಂಬಾ ಸಂಬಳ, ಒಳ್ಳೆಯ ಸ್ಥಾನಮಾನ ಹೊಂದಿದ್ದರು ಸಿನಿಮಾ, ಧಾರಾವಾಹಿ ಪ್ರಪಂಚಕ್ಕೆ ಬಂದು ಯಶಸ್ಸು ಕಂಡಿರುವ ಅನೇಕರನ್ನು ನೋಡಿದ್ದೇವೆ.
ಹೀಗೆ, ಐಟಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಹಾಗೂ ಒಳ್ಳೆಯ ವೇತನಕ್ಕೆ ಗುಡ್ ಬೈ ಹೇಳಿ ಬಣ್ಣದ ಜಗತ್ತಿಗೆ ಹಾಯ್ ಹೇಳಿರುವವರಲ್ಲಿ ಉದಯೋನ್ಮುಖ ಕಲಾವಿದ ವಿನಯ್ ಕಶ್ಯಪ್ ಸಿಂಹ ಸಹ ಒಬ್ಬರು.
ನಿಶ್ಚಿತಾರ್ಥ ಮಾಡಿಕೊಂಡ ಕಿರುತೆರೆಯ ಖ್ಯಾತ ನಟಿ ಚೈತ್ರಾ ರೆಡ್ಡಿ
ಚಿತ್ರಜಗತ್ತಿನಲ್ಲಿ ಮಿಂಚಬೇಕು ಎಂಬ ಆಸೆಯಿಂದ ಐಟಿ ಕ್ಷೇತ್ರ ಬಿಟ್ಟು ಪರಿಪೂರ್ಣವಾಗಿ ನಟನೆ ಕಡೆ ಗಮನಹರಿಸಿದ್ದಾರೆ. ಸದ್ಯ ವಿನಯ್ ಕಶ್ಯಪ್ ಕನ್ನಡ ಕಿರುತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಉದಯಟಿವಿಯಲ್ಲಿ ಪ್ರಸಾರವಾಗುವ ಸೇವಂತಿ ಧಾರಾವಾಹಿಯಲ್ಲಿ ಅಶ್ವಿನ್ ಪಾತ್ರದಲ್ಲಿ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಿದ್ದಾರೆ.
ಅದಕ್ಕೂ ಮುಂಚೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ 'ಅರಮನೆ' ಧಾರಾವಾಹಿಯಲ್ಲಿ ಅರುಣ್ ಎಂಬ ಪಾತ್ರದಲ್ಲಿ ಮಿಂಚಿದ್ದರು.
ಬಿಗ್ಬಾಸ್ ನಿರೂಪಣೆ ಮಾಡಲು ಸಮಂತಾ ಪಡೆಯುತ್ತಿದ್ದಾರೆ ಭಾರಿ ದೊಡ್ಡ ಮೊತ್ತ
ಆ ಕಡೆ ಸಿನಿಮಾ ಇಂಡಸ್ಟ್ರಿಗೂ ಕಾಲಿರುವ ವಿನಯ್ ಕಶ್ಯಪ್ 'ಮೃಗಶಿರಾ' ಖ್ಯಾತಿಯ ನಿರ್ದೇಶಕ ಶ್ರೀವತ್ಸ ಅವರ 'ಗದಾಯುದ್ಧ' ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ. ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ಧಾರಾವಾಹಿ ಹಾಗೂ ಸಿನಿಮಾ ಹೊರತು ಪಡಿಸಿ ಕೆಲವು ಸ್ಟೇಜ್ ಕಾರ್ಯಕ್ರಮಗಳು ಹಾಗೂ ಅವಾರ್ಡ್ ಕಾರ್ಯಕ್ರಮಗಳಲ್ಲೂ ಮಿಂಚಿದ್ದಾರೆ. 2018ರ ಸೈಮಾ ಪ್ರಶಸ್ತಿಗೆ ಆಯ್ಕೆಯಾಗಿದ್ದ ಒಂದು ಸ್ಟ್ರಾಂಗ್ ಕಾಫಿ ಕಿರುಚಿತ್ರದ ಅಭಿನಯಕ್ಕೆ ಉತ್ತಮ ಪ್ರಶಂಸೆ ಪಡೆದುಕೊಂಡಿದ್ದರು.
ರಂಗಭೂಮಿಯಲ್ಲೂ ಸಹ ತೊಡಗಿಕೊಂಡಿದ್ದರು. 2017-18ನೇ ಸಾಲಿನಲ್ಲಿ ತರಂಗ ಸಂಸ್ಥೆಯ ವಿದ್ಯಾರ್ಥಿಯಾಗಿದ್ದರು. ಕೋಟಿಗೊಬ್ಬಳು, ಟ್ರೈನ್ ಟು ಪಾಕಿಸ್ತಾನ್ ಎಂಬ ನಾಟಕಗಳಲ್ಲಿ ಹಾಗೂ ಬೀದಿ ನಾಟಕಗಳಲ್ಲಿಯೂ ವಿನಯ್ ಕಶ್ಯಪ್ ನಟಿಸಿ ತರಬೇತಿ ಪಡೆದುಕೊಂಡಿದ್ದರು.