Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸರಿಗಮಪ' ವೇದಿಕೆಗೆ ಬರುತ್ತಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ
ಕನ್ನಡ ಕಿರುತೆರೆಯಲ್ಲಿ ಸದ್ಯ ಹೆಚ್ಚು ಜನಪ್ರಿಯತೆ ಹೊಂದಿರುವ ಕಾರ್ಯಕ್ರಮದ ಪೈಕಿ 'ಸರಿಗಮಪ' ಪ್ರಮುಖವಾದದ್ದು. ಈ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ನೋಡುಗರ ಮೆಚ್ಚುಗೆ ಗಳಿಸಿದೆ. ಮಕ್ಕಳ ಹಾಡುಗಳು ಕೇಳುವುದೇ ಒಂದು ಚಂದದಂತೆ ಇದೆ.
ಇಂತಹ ಕಾರ್ಯಕ್ರಮಕ್ಕೆ ಈಗ ಶ್ರೇಷ್ಠ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಬರುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಹಂಸಲೇಖ ಅವರು ಹಂಚಿಕೊಂಡಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಲೈವ್ ಬಂದಿದ್ದ ಹಂಸಲೇಖ ಈ ವಿಷಯವನ್ನು ಹೇಳಿದ್ದಾರೆ. ಸರಿಗಮಪ ಕಾರ್ಯಕ್ರಮದ ವೇದಿಕೆಗೆ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಬರುತ್ತಾರೆ ಎಂದು ಹಂಸಲೇಖ ತಮ್ಮ ಅಭಿಮಾನಿಗಳಿಗೆ ಹೇಳಿದ್ದಾರೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಹಂಸಲೇಖ ಅವರು ತುಂಬ ವರ್ಷ ಜೊತೆಗೆ ಕೆಲಸ ಮಾಡಿದ್ದಾರೆ. ಇಬ್ಬರು ಒಳ್ಳೆಯ ಆಪ್ತರಾಗಿರುವ ಕಾರಣ 'ಸರಿಗಮಪ' ಕಾರ್ಯಕ್ರಮಕ್ಕೆ ಎಸ್.ಪಿ.ಬಿ ಆಗಮಿಸುತ್ತಿದ್ದಾರೆ. ಈ ಹಿಂದೆ ಎಸ್.ಪಿ.ಬಿ ಕನ್ನಡದ 'ಎದೆ ತುಂಬಿ ಹಾಡುವೆನು' ಕಾರ್ಯಕ್ರಮ ತೀರ್ಪುಗಾರರಾಗಿದ್ದರು. ಅಂದಹಾಗೆ, 'ಸರಿಗಮಪ' ಕಾರ್ಯಕ್ರಮ 'ಜೀ ಕನ್ನಡ' ವಾಹಿನಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರ ಆಗುತ್ತದೆ. ಹಂಸಲೇಖ, ಅರ್ಜುನ್ ಜನ್ಯ ಮತ್ತು ವಿಜಯ ಪ್ರಕಾಶ್ ಕಾರ್ಯಕ್ರಮ ತೀರ್ಪುಗಾರರಾಗಿದ್ದಾರೆ.