Don't Miss!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿರಿ ಅತ್ತೆ ತುಳಸಿಗೆ ಸರ್ಪ್ರೈಸ್ ಕೊಡಲು ಕರೆದುಕೊಂಡು ಬಂದಿದ್ದೆಲ್ಲಿಗೆ?
ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ಅಭಿಲಾಷ್ ಹೊಸ ಪ್ರಾಡಕ್ಟ್ಗೆ ಆಡ್ ಶೂಟ್ ಇಟ್ಟುಕೊಂಡಿರುತ್ತಾನೆ. ಅದೇ ದಿನ ಮಾಧವ್ ಕೂಡ ಮಹಿಳೆಯರ ಮಸಾಲ್ ಪುಡಿಗಳ ಆಡ್ ಶೂಟ್ಗೆ ಒಪ್ಪಿಕೊಂಡಿರುತ್ತಾನೆ. ಪೂರ್ಣಿಮಾ ಮಾವನಿಗೆ ವಿಶ್ ಮಾಡಿ ಕಳಿಸುತ್ತಾಳೆ.
ಇನ್ನು ಇಬ್ಬರ ಆಡ್ ಶೂಟ್ ಕೂಡ ಒಂದೇ ಸ್ಥಳದಲ್ಲಿ ನಿಗದಿಯಾಗಿರುತ್ತದೆ. ಅಭಿಲಾಷ್ ಕರೆಸಿರುವ ನಟಿ ಕೂಡ ಮಾಧವ್ ಅವರನ್ನು ಮಾತನಾಡಿಸುತ್ತಾಳೆ. ಇದನ್ನು ನೋಡಿ ಅಭಿ ಸಿಟ್ಟು ಮಾಡಿಕೊಳ್ಳುತ್ತಾನೆ.
ಇನ್ನು ಜುಗ್ಗನ ಮನೆಯಲ್ಲಿ ಪ್ರಿಯಾಂಕ ಬೇಸರ ಮಾಡಿಕೊಂಡಿರುತ್ತಾಳೆ. ಸಮರ್ಥ್ನನ್ನು ಮದುವೆಯಾಗಬೇಕು ಎಂದು ಆಸೆ ಪಟ್ಟಿದ್ದಳು. ಆದರೆ ಅದು ನೆರವೇರಲಿಲ್ಲ ಎಂದು ಯೋಚಿಸುತ್ತಿರುವುದನ್ನು ನೋಡಿದ ಜುಗ್ಗ ಸಂಧ್ಯಾಳನ್ನು ಕೆರಳಿಸುತ್ತಾನೆ.
ಗಲಾಟೆ ಮಾಡಿದ ತಾತ
ಸಂಧ್ಯಾ ಈಗ ಹೇಗಾದರೂ ಮಾಡಿ ಅಮ್ಮನ ಮನೆಯೊಳಗೆ ಪ್ರವೇಶ ಪಡೆಯಬೇಕು ಎಂದು ತೀರ್ಮಾನಿಸಿದ್ದಾಳೆ. ಹಾಗಾಗಿ ಅಣ್ಣನ ಮದುವೆಯನ್ನೇ ನೆಪ ಮಾಡಿಕೊಂಡು ಬಂದಿದ್ದಾಳೆ. ಗಿಫ್ಟ್ ಹಿಡಿದು ಬಂದ ಸಂಧ್ಯಾಳನ್ನ ದತ್ತ ತಾತ ಕಂಡು ಬೈಯುತ್ತಿದ್ದಾರೆ. ಮನೆಯೊಳಗೆ ಪ್ರವೇಶ ಕೊಡದೇ ಇಲ್ಲಿಗ್ಯಾಕೆ ಬಂದೆ? ಮನೆ ಮರಿಯಾದಿಗೆ ಚ್ಯುತಿ ತಂದವಳು ಎಂದಲ್ಲಾ ಬೈಯುತ್ತಿದ್ದಾರೆ. ಸಂಧ್ಯಾ ಕೂಡ ಸುಮ್ಮನಿರದೆ ತಾತನ ಮಾತುಗಳಿಗೆ ಎದುರುತ್ತರ ಕೊಡುತ್ತಿರುತ್ತಾಳೆ.
ಮಗಳ ಬಗ್ಗೆ ಬೇಸರ ಮಾಡಿಕೊಂಡ ತುಳಸಿ
ಈ ವೇಳೆಗೆ ಸಮರ್ಥ್ ಬಂದು ತಾತನನ್ನು ಸಮಾಧಾನ ಮಾಡುತ್ತಾನೆ. ನಂತರ ಸಂಧ್ಯಾ ಜೊತೆ ಮಾತನಾಡಿ ಆಚೆ ಊಟಕ್ಕೆ ಹೋಗೋಣ ಎನ್ನುತ್ತಾನೆ. ಆದರೆ ಸಂಧ್ಯಾ ಈಗ ಬೇಡ. ಈ ಮನೆಯೊಳಗೆ ಒಟ್ಟಿಗೆ ಕೂತು ಊಟ ಮಾಡುವಂತಹ ದಿನ ಬರಲಿ ಎಂದು ಹೇಳಿ ಹೊರಡುತ್ತಾಳೆ. ತುಳಸಿ ಮಗಳು, ಅಳಿಯನನ್ನು ಮನೆಯೊಳಗೆ ಕರೆಯಲು ಆಗಲಿಲ್ಲ ಎಂದು ಚಿಂತಿಸುತ್ತಿರುತ್ತಾಳೆ. ಇನ್ನು ಸಂಧ್ಯಾ ಅಮ್ಮನ ಮನೆಗೆ ಎಂಟ್ರಿ ಸಿಕ್ಕ ಮೇಲೆ ಹೇಗಾದರೂ ಮಾಡಿ ಸಂಪೂರ್ಣ ಆಸ್ತಿಯನ್ನು ತನ್ನ ಪಾಲಾಗಿಸಿಕೊಳ್ಳಬೇಕು ಎಂದು ಪ್ಲಾನ್ ಮಾಡಿದ್ದಾಳೆ. ಆದರೆ, ಸಂಧ್ಯಾ ಪ್ಲಾನ್ ಸಕ್ಸಸ್ ಅಗಲು ಸಿರಿ ಅವಕಾಶ ಮಾಡಿಕೊಡುತ್ತಾಳಾ ಎಂಬುದೇ ಮುಂದಿನ ಕುತೂಹಲ.
ತುಳಸಿಗೆ ಸರ್ಪ್ರೈಸ್ ಕೊಡುತ್ತಾಳಾ ಸಿರಿ
ಇನ್ನು ತುಳಸಿ ಬೇಸರ ಮಾಡಿಕೊಂಡಿರುವುದನ್ನು ನೋಡಿದ ಸಿರಿ ಸಮಾಧಾನ ಮಾಡುತ್ತಾಳೆ. ನಂತರ ಹೋಟೆಲ್ ಗೆ ಊಟಕ್ಕೆ ಹೋಗೋಣ ಎಂದು ಹೇಳುತ್ತಾಳೆ. ಆದರೆ ತಾತನನ್ನು ಹೇಗೆ ಒಪ್ಪಿಸುವುದು ಎಂದಾಗ ಸಿರಿಯೇ ಮುಂದೆ ಹೋಗುತ್ತಾಳೆ. ತಾತ ಮೊದಲು ಒಪ್ಪುವುದಿಲ್ಲ. ನಂತರ ನೀವೆಲ್ಲಾ ಹೋಗಿ ಬನ್ನಿ ಎಂದು ಹೇಳಿ ಕಳಿಸುತ್ತಾರೆ. ಸಿರಿ ಅತ್ತೆಗೆ ಸರ್ಪ್ರೈಸ್ ಕೊಡುವುದಕ್ಕಾಗಿ ಮಾಧವ್ ಅವರ ಕೆಫೆಗೆ ಕರೆದುಕೊಂಡು ಹೋಗುತ್ತಾಳೆ. ಸೊಸೆಯ ಮೂಲಕವೇ ತುಳಸಿ ಮಾಧವ್ ನನ್ನು ಭೇಟಿಯಾಗುತ್ತಾಳಾ?
ತುಳಸಿಯನ್ನು ಬದಲಾಯಿಸುತ್ತಾಳಾ?
ಸಿರಿ ಮದುವೆಯಾಗಿ ಮನೆಗೆ ಬಂದಾಗಿನಿಂದಲೂ ತುಳಸಿಯನ್ನು ಗಮನಿಸುತ್ತಲೇ ಇರುತ್ತಾಳೆ. ತುಳಸಿ ಮನೆಯಲ್ಲಿ ಮಾವನ ಸೇವೆ ಮಾಡುತ್ತಾ, ಮಗನ ಕೆಲಸಗಳನ್ನೂ ತಾನೇ ಮಾಡುತ್ತಿರುತ್ತಾಳೆ. ಸದಾ ಇನ್ನೊಬ್ಬರ ಬಗ್ಗೆಯೇ ಯೋಚಿಸುತ್ತಿರುತ್ತಾಳೆ. ಕೆಫೆಗೆ ಬಂದಾಗಲೂ ತುಳಸಿ ತನ್ನ ಮಾವನ ಬಗ್ಗೆ ಯೋಚಿಸುತ್ತಿರುತ್ತಾಳೆ. ಅವರಿಗೆ ಫೋನ್ ಮಾಡಿ ಮಾತ್ರೆ ತೆಗೆದುಕೊಲ್ಳಲು ನೆನಪಿಸಬೇಕು ಎನ್ನುತ್ತಾಳೆ. ಇನ್ನು ನಿಮಗೆ ಏನಿಷ್ಟವೋ ಅದನ್ನೇ ಆರ್ಡರ್ ಮಾಡಿ ಎಂದರೆ, ತನಗೆ ಏನಿಷ್ಟ ಎಂದು ಯೋಚಿಸುತ್ತಾಳೆ. ಇದನ್ನೆಲ್ಲಾ ಗಮನಿಸಿದ ಸಿರಿ ಅತ್ತೆ ಸದಾ ಇನ್ನೊಬ್ಬರ ಬಗ್ಗೆ ಕಾಳಜಿ ವಹಿಸಿತ್ತಾರೆ. ಅವರ ಬಗ್ಗೆ ಒಂದು ನಿಮಿಷವೂ ಗಮನ ಕೊಡುವುದಿಲ್ಲ ಎಂಬುದನ್ನು ಅರಿತುಕೊಳ್ಳುತ್ತಾಳೆ. ಈ ಮೂಲಕವಾದರೂ ಅತ್ತೆಯನ್ನು ಸಿರಿ ಬದಲು ಮಾಡುತ್ತಾಳಾ ಕಾದು ನೋಡಬೇಕಿದೆ.