Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಟೈಲಿಶ್ ಲುಕ್ ನಲ್ಲಿ ಮಿಂಚಿರುವ 'ಸರಿಗಮಪ' ಸ್ಪರ್ಧಿ ಸುಹಾನಾ ಸೈಯದ್
'ಜೀ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಸರಿಗಮಪ ಸೀಸನ್ 13' ಕಾರ್ಯಕ್ರಮದಲ್ಲಿ ಎಲ್ಲ ಸ್ಪರ್ಧಿಗಳು ವೀಕ್ಷಕರಿಗೆ ಬಹಳ ಇಷ್ಟ ಆಗಿದ್ದರು. ಅದರಲ್ಲಿಯೂ ಸುಹಾನಾ ಸೈಯದ್ ಹಾಡು ಅಂದರೆ ಎಲ್ಲರಿಗೂ ಸಖತ್ ಫೇವರಿಟ್ ಆಗಿತ್ತು.
ಉತ್ತರ ಕರ್ನಾಟಕದ ಕಲಿ ಸುನೀಲ್ ಗೆಲುವಿಗೆ ಕಾರಣ ಕೊಟ್ಟ ಅರ್ಜುನ್ ಜನ್ಯ
ಸುಹಾನಾ ಸೈಯದ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಹುಡುಗಿ. ಇಷ್ಟು ದಿನ ತಮ್ಮ ಹಾಡಿನ ಮೂಲಕ ಮನೆ ಮಾತಾಗಿದ್ದ ಈ ಹುಡುಗಿ ಈಗ ತಮ್ಮ ಸ್ಟೈಲಿಶ್ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಸುಹಾನಾ ಸೈಯದ್ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫೋಟೋ ನೋಡಿದವರು ವಾವ್... ಅಂತ ಹೊಗಳುತ್ತಿದ್ದಾರೆ. ಬೈಕ್ ಓಡಿಸುವ ಸುಹಾನಾ ಫೋಟೋ ನೋಡಿದವರಿಗಂತೂ ಇದು ನಿಜಕ್ಕೂ ಸರಿಗಮಪ ಸುಹಾನಾ ನಾ.? ಎಂದು ಬಾಯಿ ಮೇಲೆ ಬೆರಳಿಟ್ಟಿದ್ದಾರೆ.
ಸಂದರ್ಶನ: ಜೀವನ ಮತ್ತು ಸ್ಪರ್ಧೆ.. ಎರಡರಲ್ಲೂ ಗೆದ್ದ ಮೆಹಬೂಬ್ ಸಾಬ್
ಸರಿಗಮಪ ಕಾರ್ಯಕ್ರಮದ ಮೂಲಕ ಸುಹಾನಾ ದೊಡ್ಡ ಜನಪ್ರಿಯತೆಯನ್ನು ಗಳಿಸಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಅವರು ಹಾಡಿದ 'ಮುಕುಂದ ಮುರಾರಿ' ಹಾಡನ್ನು ಮರೆಯುವುದಕ್ಕೆ ಆಗಲ್ಲ. ಸರಿಗಮಪ ಕಾರ್ಯಕ್ರಮ ಶುರುವಿನಲ್ಲಿ ಸಖತ್ ಸುದ್ದಿ ಮಾಡಿದ್ದ ಸುಹಾನಾ ಸೈಯದ್ ಸೆಮಿ ಫೈನಲ್ ನಲ್ಲಿ ಎಲಿಮಿನೇಟ್ ಆದರು.