ನಟ ಸುದೀಪ್ ಆರೋಗ್ಯದಲ್ಲಿ ವ್ಯತ್ಯಯ: ಬಿಗ್ಬಾಸ್ ನಿರೂಪಣೆ ಇಲ್ಲ?
ನಟ ಸುದೀಪ್ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ಬಿಗ್ಬಾಸ್ ಸೇರಿದಂತೆ ಸಿನಿಮಾ ಚಿತ್ರೀಕರಣದಲ್ಲಿಯೂ ಸುದೀಪ್ ಪಾಲ್ಗೊಳ್ಳುತ್ತಿಲ್ಲ.
Recommended Video
ಪ್ರತಿ ವಾರಾಂತ್ಯದಲ್ಲಿ ಸುದೀಪ್, ಬಿಗ್ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದರು, ಆದರೆ ಅವರ ಆರೋಗ್ಯದಲ್ಲಿ ಸಣ್ಣ ಸಮಸ್ಯೆ ಉಂಟಾಗಿರುವ ಕಾರಣ ಈ ವಾರ ಸುದೀಪ್ ಅವರು ಬಿಗ್ಬಾಸ್ ನಿರೂಪಣೆ ಮಾಡುವುದು ಬಹುತೇಕ ಅನುಮಾನ.
ಸುದೀಪ್ ಅವರಿಗೆ ಕೊರೊನಾ ಆಗಿದೆ ಎನ್ನಲಾಗುತ್ತಿದೆ ಆದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಸುದೀಪ್ ಅವರ ಆಪ್ತ ಜಾಕ್ ಮಂಜು ಅವರನ್ನು ಮಾಹಿತಿಗಾಗಿ ಸಂಪರ್ಕಿಸಲು ಯತ್ನಿಸಲಾಯಿತಾದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ.

ಸುದೀಪ್ ಅವರು ನಟಿಸಿರುವ ಬಹುನಿರೀಕ್ಷಿತ ಸಿನಿಮಾ 'ವಿಕ್ರಾಂತ್ ರೋಣ'ದ ಬಿಡುಗಡೆ ದಿನಾಂಕ ಇಂದಷ್ಟೆ ಘೋಷಣೆಯಾಗಿದೆ. ಸಿನಿಮಾವು ಆಗಸ್ಟ್ 19 ರಂದು ಬಿಡುಗಡೆ ಆಗಲಿದೆ.
ಸುದೀಪ್ ನಟನೆಯ 'ಕೋಟಿಗೊಬ್ಬ 3' ಸಿನಿಮಾ ಬಿಡುಗಡೆಯು ಇದೇ ತಿಂಗಳು ಆಗಬೇಕಿತ್ತು. ಆದರೆ ಕೊರೊನಾ ಪ್ರಕರಣಗಳು ಹಠಾತ್ತನೆ ಏರಿಕೆಯಾಗಿ ಚಿತ್ರಮಂದಿರಗಳ ಮೇಲೆ ಸರ್ಕಾರವು ನಿರ್ಬಂಧ ಹೇರಿರುವ ಕಾರಣ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ.


Click it and Unblock the Notifications











