Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಂದನ್ ಶೆಟ್ಟಿ-ನಿವೇದಿತಾ ಎಂಗೇಜ್ ಬಗ್ಗೆ ಸುದೀಪ್ ಹೇಳಿದ್ದೇನು?
Recommended Video
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು.
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.
Bigg Boss Kannada 7: ದೊಡ್ಮನೆ ಟಿಕೆಟ್ ಪಡೆದ ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಇಲ್ಲಿದೆ
ಈ ಸ್ನೇಹ ಈಗ ಪ್ರೀತಿಯಾಗಿ, ದಾಂಪತ್ಯಕ್ಕೆ ಸಜ್ಜಾಗಿದೆ. ಈ ವಿಷಯದ ಬಗ್ಗೆ ಬಿಗ್ ಬಾಸ್ ಕನ್ನಡ ನಿರೂಪಕ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ''ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಪ್ರೀತಿ ಅವರಿಗೆ ಸಂಬಂಧಪಟ್ಟಿದ್ದು. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಇದು ಬಿಗ್ ಬಾಸ್ ಸಾಧ್ಯವಾಗಿದ್ದು ಎಂದು ಹೇಳಲ್ಲ. ಬಿಗ್ ಬಾಸ್ ಬಳಿಕ ಆಗಿರುವ ಬೆಳವಣಿಗೆ. ಆ ಬಗ್ಗೆ ಸಂತೋಷವಿದೆ'' ಎಂದಿದ್ದಾರೆ.
ಬಿಗ್ ಬಾಸ್ ಸಂಭಾವನೆ ಬಗ್ಗೆ ಕೇಳಿದ್ದಕ್ಕೆ ಸುದೀಪ್ ಏನಂದ್ರು?
ಬಿಗ್ ಬಾಸ್ ಮುಗಿಸಿದ ಮೇಲೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅನೇಕ ವೇದಿಕೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಬರ್ತಡೇ, ಪಾರ್ಟಿ ಎಂದು ಸೆಲೆಬ್ರೇಟ್ ಮಾಡಿದ್ದರು. ಇದನ್ನೆಲ್ಲ ಗಮನಿಸಿದ ಜನಸಾಮಾನ್ಯರು ಇವರಿಬ್ಬರ ಮಧ್ಯೆ ಲವ್ ಇದೆ ಎಂದು ಹೇಳುತ್ತಿದ್ದರು.
ಅಂತಿಮವಾಗಿ, ಆ ಅಂತೆ-ಕಂತೆಗಳಿಗೆ ಚಂದನ್ ಶೆಟ್ಟಿ ಯುವ ದಸರಾ ವೇದಿಕೆಯಲ್ಲಿ ತೆರೆ ಎಳೆದಿದ್ದರು. ಈಗ ಅಧಿಕೃತವಾಗಿ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದು, ಎರಡು ಮನೆಯವರು ಮದುವೆಗೆ ಸಮ್ಮತಿಸಿದ್ದಾರಂತೆ. ಸದ್ಯದಲ್ಲೇ ಮದುವೆಯಾಗುವ ಪ್ಲಾನ್ ಕೂಡ ಮಾಡಿಕೊಂಡಿದ್ದಾರಂತೆ.