Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ನಿರೂಪಣೆ ಬಗ್ಗೆ ಬೇಸರಗೊಂಡ ವೀಕ್ಷಕ: ಖಡಕ್ ಉತ್ತರ ಕೊಟ್ಟ ಕಿಚ್ಚ
Recommended Video
ಕನ್ನಡ, ಹಿಂದಿ, ತಮಿಳು ಹಾಗೂ ತೆಲುಗು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಲಿಸಿದ್ರೆ, ಕಿಚ್ಚ ಸುದೀಪ್ ಅತ್ಯುತ್ತಮ ನಿರೂಪಕ ಎನ್ನುವುದು ವೀಕ್ಷಕರ ಅಭಿಪ್ರಾಯ. ಅದನ್ನ ಪ್ರತಿಯೊಬ್ಬರು ಕೂಡ ಒಪ್ಪಿಕೊಂಡಿದ್ದಾರೆ.
ಅಲ್ಲೊಬ್ಬ, ಇಲ್ಲೊಬ್ಬ ವ್ಯಕ್ತಿ ಕಿಚ್ಚನ ನಿರೂಪಣೆ ಬಗ್ಗೆ ಹಾಗೂ ಬಿಗ್ ಬಾಸ್ ಸ್ಪರ್ಧಿಗಳ ಬಳಿ ಸುದೀಪ್ ನಡೆದುಕೊಳ್ಳುವ ರೀತಿಯ ಬಗ್ಗೆ ಬೇಸರ ವ್ಯಕ್ತಪಡಿಸಿರುವುದು ಉಂಟು. ಆದ್ರೆ, ಇದ್ಯಾವುದಕ್ಕು ಸುದೀಪ್ ತಲೆಕೆಡಸಿಕೊಂಡಿಲ್ಲ ಮತ್ತು ಪ್ರತಿಕ್ರಿಯೆ ನೀಡುವುದಿಲ್ಲ. ಸಮಾಧಾನವಾಗಿ ಎಲ್ಲವನ್ನ ಮ್ಯಾನೇಜ್ ಮಾಡ್ತಾರೆ.
ಆದ್ರೀಗ, ಸುದೀಪ್ ನಿರೂಪಣೆ ಬಗ್ಗೆ ಬಿಗ್ ಬಾಸ್ ವೀಕ್ಷಕರೊಬ್ಬರು ಕಿಚ್ಚನಿಗೆ ಪ್ರಶ್ನಿಸಿದ್ದಾರೆ. ಅದಕ್ಕೆ ಸುದೀಪ್ ಕೂಡ ಅಷ್ಟೇ ಬುದ್ಧಿವಂತಿಕೆಯಿಂದ ಉತ್ತರ ಕೊಟ್ಟಿದ್ದಾರೆ. ಹಾಗಿದ್ರೆ, ಸುದೀಪ್ ಬಗ್ಗೆ ಆ ಅಭಿಮಾನಿ ಹೇಳಿದ್ದೇನು? ಸುದೀಪ್ ಕೊಟ್ಟ ಉತ್ತರವೇನು? ಮುಂದೆ ಓದಿ.....
ಸುದೀಪ್ ಪಕ್ಷಪಾತ ಮಾಡ್ತಾರಂತೆ?
ಬಿಗ್ ಬಾಸ್ ನಿರೂಪಣೆಯಲ್ಲಿ ಸುದೀಪ್ ಪಕ್ಷಪಾತ ಮಾಡ್ತಿದ್ದಾರೆ ಎಂಬ ಆರೋಪವನ್ನ ಪ್ರೇಕ್ಷಕನೊಬ್ಬ ಮಾಡಿದ್ದಾರೆ. ಸ್ಪರ್ಧಿ ಬಳಿ ಸುದೀಪ್ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನ ಕಾಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.
ಆ ವ್ಯಕ್ತಿ ಮಾಡಿದ ಕಾಮೆಂಟ್ ನೋಡಿ
''ನನ್ನ ವಿನಮ್ರ ವಿನಂತಿ...ಪಕ್ಷಪಾತಿ ನಿರೂಪಣೆ ಮಾಡಬೇಡಿ. ಜೆಕೆ ಅವರ ವಿಚಾರದಲ್ಲಿ ನೀವು ಮಾಡಿದ್ದನ್ನ ಇಡೀ ಕರ್ನಾಟಕದ ಜನ ನೋಡಿದ್ದಾರೆ'' ಎಂದು ಕಾಮೆಂಟ್ ಮಾಡಿದ್ದಾರೆ.
ಸುದೀಪ್ ದಂಪತಿಗೆ 'ಜೆಕೆ' ಧನ್ಯವಾದ ಹೇಳಿದ್ದೇಕೆ?
ಸುದೀಪ್ ಕೊಟ್ಟು ಬುದ್ಧಿವಂತಿಕೆ ಉತ್ತರ
''ಈ ವೀಕ್ಷಕನಿಗೆ ಟ್ವಿಟ್ಟರ್ ನಲ್ಲೇ ಉತ್ತರ ಕೊಟ್ಟ ಸುದೀಪ್, ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಖಚಿತವಾಗಿ ಸರ್....ಈ ಸಂದೇಶವನ್ನ ನನಗೆ ಕಳುಹಿಸಲು ಕರ್ನಾಟಕದ ಎಲ್ಲಾ ಜನರು ನಿಮ್ಮನ್ನು ಸಂಪರ್ಕಿಸಿದ್ದಾರೆ ಎಂದು ನಾನು ಖುಷಿ ಪಡುತ್ತೇನೆ'' ಎಂದು ಹೇಳುವ ಮೂಲಕ ಆ ಪ್ರೇಕ್ಷಕನಿಗೆ ಉತ್ತರಿಸಿದ್ದಾರೆ.
ಅಭಿಮಾನಿಗಳು ಅಭಿಪ್ರಾಯ
ಟಿವಿ ವೀಕ್ಷಕನೊಬ್ಬನ ಈ ಸಂದೇಶ ಸುದೀಪ್ ಅಭಿಮಾನಿಗಳಿಗೆ ಬೇಸರ ತರಿಸಿದೆ. ಸುದೀಪ್ ಅವರ ನಿರೂಪಣೆ ಬಗ್ಗೆ ಮಾತನಾಡುವ ಹಕ್ಕಿಲ್ಲ ನಿಮಗೆ, ನೀವು ಸರಿಯಾಗಿ ಕಾರ್ಯಕ್ರಮ ನೋಡಿಲ್ಲ. ಅವರು ಅತ್ಯುತ್ತಮ ನಿರೂಪಕ. ಎಲ್ಲಿಯೂ ಪಕ್ಷಪಾತ ಮಾಡಿಲ್ಲ. ಮಾಡುವ ಅವಶ್ಯಕತೆ ಅವರಿಗಿಲ್ಲ ಎಂದು ತಿರುಗೇಟು ನೀಡುತ್ತಿದ್ದಾರೆ.