Don't Miss!
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹುಚ್ಚ ವೆಂಕಟ್ ಗೆಲ್ಲುವ ಸಾಧ್ಯತೆ ಇತ್ತು': ಸುದೀಪ್ ಹೀಗೆ ಹೇಳಿದ್ಯಾಕೆ?
ಬಿಗ್ ಬಾಸ್ ಕನ್ನಡ ಏಂಟನೇ ಆವೃತ್ತಿ ಆರಂಭವಾಗುತ್ತಿದೆ. ಈ ಸಲ ಯಾರ್ ಯಾರು ಮನೆಯೊಳಗೆ ಎಂಟ್ರಿ ಪಡೆದುಕೊಳ್ಳುತ್ತಾರೆ ಎಂಬ ಲೆಕ್ಕಾಚಾರ, ಚರ್ಚೆ ಜೋರಾಗಿ ನಡೆಯುತ್ತಿದೆ. ಬಿಗ್ ಬಾಸ್ ಹೊಸ ಸೀಸನ್ ಆರಂಭ ಹಿನ್ನೆಲೆ ಬೆಂಗಳೂರಿನಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಸುದ್ದಿಗೋಷ್ಠಿ ನಡೆಸಿದರು.
ಬಿಗ್ ಬಾಸ್ ಕಾರ್ಯಕ್ರಮದ ಅನುಭವದ ಬಗ್ಗೆ ಮಾತನಾಡಿದ ಸುದೀಪ್ ''ಮೂರನೇ ಆವೃತ್ತಿಯಲ್ಲಿ ಹುಚ್ಚ ವೆಂಕಟ್ ಗೆಲ್ಲುವ ಸಾಧ್ಯತೆ ಇತ್ತು'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಗ್ ಸುದ್ದಿ: ಬಿಗ್ ಬಾಸ್ ಮನೆಗೆ ಮೊಟ್ಟ ಮೊದಲ ಸಲ ರಾಜಕಾರಣಿ ಎಂಟ್ರಿ?
ಒಬ್ಬ ನಿರೂಪಕನಾಗಿ ಒಂದೆರಡು ವಾರ ನೋಡಿದ್ಮೇಲೆ ಸ್ಪರ್ಧಿಗಳ ಮನಸ್ಥಿತಿ ಬಗ್ಗೆ ನಿರ್ಧರಿಸಬಹುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಸುದೀಪ್, ''ಸಾಧ್ಯವಿಲ್ಲ, ಬಹಳ ಒಳ್ಳೆಯ ಹೆಸರು ಇರೋರು ಹಾಳಾಗಿರುವುದನ್ನು ನೋಡಿದ್ದೇನೆ, ಒಳ್ಳೆ ಅಭಿಪ್ರಾಯ ಇಲ್ಲದವರ ಮೇಲೆ ಸಿಕ್ಕಾಪಟ್ಟೆ ಪಾಸಿಟಿವ್ ರೆಸ್ಪಾನ್ಸ್ ಪಡೆದುಕೊಂಡಿದ್ದು ನೋಡಿದ್ದೇನೆ'' ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹುಚ್ಚ ವೆಂಕಟ್ ಅವರನ್ನು ಉದಾಹರಣೆಯನ್ನಾಗಿ ನೀಡಿದ ಸುದೀಪ್ ''ಅಂದು ವೆಂಕಟ್, ಹಲ್ಲೆ ಮಾಡಿರಲಿಲ್ಲ ಅಂದಿದ್ದರೆ ಗೆಲ್ಲುವ ಸಾಧ್ಯತೆ ಇತ್ತು. ಅವರಿಗೆ ಬಹಳ ಚೆನ್ನಾಗಿ ವೋಟಿಂಗ್ ಬರ್ತಿತ್ತು. ಜನರಿಗೆ ಅವರು ಇಷ್ಟ ಆಗಿದ್ದರು. ಆದರೆ, ಪ್ರಚೋದನಕಾರಿಯಾಗಿ ನಡೆದ ಸನ್ನಿವೇಶಗಳಲ್ಲಿ ಆ ಘಟನೆ ಆಯಿತು. ಆ ಬಗ್ಗೆ ಬೇಸರ ಇದೆ'' ಎಂದು ಹೇಳಿದ್ದಾರೆ.
ಕಾಕತಾಳೀಯ ಅಂದ್ರೆ ಹುಚ್ಚ ವೆಂಕಟ್ ಅವರು ಹಲ್ಲೆ ಮಾಡಿದ ಎಪಿಸೋಡ್ಗೂ ಮುಂಚೆ ಬೆಳಗ್ಗೆ ಸುದೀಪ್ ಅವರು ಗುಂಡ್ಕಲ್ ಬಳಿ ''ಪರಂ, ನನಗೆ ಯಾಕೋ ಈ ವ್ಯಕ್ತಿ ಗೆಲ್ಲಬಹುದು ಅಂತ ಹೇಳಿದ್ದರಂತೆ. ದುರಾದೃಷ್ಟವಶಾತ್ ಅದೇ ದಿನ ಆ ಘಟನೆ ನಡೆಯಿತು'' ಎಂದು ಸುದೀಪ್ ಹೇಳಿಕೊಂಡಿದ್ದಾರೆ.