Don't Miss!
- News ಡಾ. ಕೆ. ಸುಧಾಕರ್ ಅವರ ಪರ ಮತ ಹಾಕಲು, ದೂರದ ಆಸ್ಟ್ರೇಲಿಯಾ ದೇಶದಿಂದ ಬರುತ್ತಿದ್ದಾರೆ ಈ ಯುವಕ!
- Finance ಮೇರಿಲ್ಯಾಂಡ್ ಬಾಲ್ಟಿಮೋರ್ ಸೇತುವೆ ಕುಸಿತ: ಆರು ಕಾರ್ಮಿಕರು ನಾಪತ್ತೆ, ಸಾವಿನ ಶಂಕೆ
- Sports T20 World Cup ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ಡೌಟ್?
- Technology ಇಂದು ವಿವೋದ ಈ ಹೊಸ 5G ಫೋನ್ ಮಾರಾಟ!..ಆಫರ್ ಏನು ಗೊತ್ತಾ?
- Automobiles ಮೋಸ ಹೋಗಬೇಡಿ... ರಾಯಲ್ ಎನ್ಫೀಲ್ಡ್ ಬಗ್ಗೆ ನಿಮಗೆ ಯಾರೂ ಹೇಳದ ವಿಷಯಗಳಿವು!
- Lifestyle ಇಲ್ಲಿದೆ ವಿಶ್ವದ ಅತ್ಯಂತ ದುಬಾರಿ ಹಸು..! ₹40 ಕೋಟಿಗೆ ಹರಾಜು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಧಾ ಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಿಗ್ ಬಿ
Recommended Video
ನಟ ಅಮಿತಾಭ್ ಬಚ್ಚನ್ ನಿರೂಪಣೆಯ 'ಕೌನ್ ಬನೇಗ ಕರೋಡ್ ಪತಿ' ಕಾರ್ಯಕ್ರಮದಲ್ಲಿ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಭಾಗಿಯಾಗಿದ್ದಾರೆ. ಕಾರ್ಯಕ್ರಮದ ಪ್ರೊಮೋ ಹೊರಬಂದಿದ್ದು, ಪ್ರಸಾರದ ದಿನಾಂಕ ಬಹಿರಂಗವಾಗಿದೆ.
ಪ್ರೊಮೋದಲ್ಲಿ ಸುಧಾ ಮೂರ್ತಿ ಕಾಲಿಗೆ ಬಿದ್ದು ಬಿಗ್ ಬಿ ಆಶೀರ್ವಾದ ಪಡೆದಿದ್ದಾರೆ. ಸುಧಾ ಮೂರ್ತಿ ಸಾಧನೆಯನ್ನು ವೀಕ್ಷಕರಿಗೆ ಅಮಿತಾಬ್ ವಿವರಿಸಿದ್ದಾರೆ. ಸುಧಾ ಮೂರ್ತಿ ಅವರ ಸಮಾಜ ಸೇವೆಗೆ ನಮನ ಸಲ್ಲಿಸಿದ್ದಾರೆ.
'ಕೌನ್ ಬನೇಗ ಕರೋಡ್ ಪತಿ'ಯಲ್ಲಿ ಸುಧಾ ಮೂರ್ತಿ: ಅಮಿತಾಬ್ ಗೆ ಸಿಕ್ತು ವಿಶೇಷ ಉಡುಗೊರೆ
ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಸೋನಿ ವಾಹಿನಿಯಲ್ಲಿ ಪ್ರಸಾರ ಆಗಲಿದೆ. 'ಕೌನ್ ಬನೇಗ ಕರೋಡ್ ಪತಿ 11'ರ ಫೈನಲ್ ಸಂಚಿಕೆ ಇದಾಗಿದೆ. ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾ ಮೂರ್ತಿ ಮೂಲಕ ಸುಖಾಂತ್ಯ ಮಾಡಲಾಗುತ್ತಿದೆ.
ಸುಧಾ ಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆಯೇ ಬಹಿರಂಗ ಆಗಿತ್ತು. ಇದೀಗ ವಾಹಿನಿ ಅಧಿಕೃತವಾಗಿ ಪ್ರೊಮೋ ಬಿಡುಗಡೆ ಮಾಡಿ, ಕಾರ್ಯಕ್ರಮ ಪ್ರಸಾರದ ದಿನಾಂಕ ತಿಳಿಸಿದೆ.
ಕರೋಡ್ ಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಧಾಮೂರ್ತಿ, ಅಮಿತಾಬ್ ಬಚ್ಚನ್ ಗೆ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾರೆ. ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಗೆ ಗಿಫ್ಟ್ ಆಗಿ ನೀಡಿದ್ದಾರೆ. ಸುಧಾ ಮೂರ್ತಿ ಅವರು ಹೊಸ ಜೀವನ ನೀಡಿದ ದೇವದಾಸಿಯರು ಹೊಲಿದಿರುವ ಕೌದಿ ಇದಾಗಿದೆ.