Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಖತ್ ಸಂಡೇ ವಿತ್ ಸುದೀಪ್ ಜೊತೆ ಸುಮಂತ್, ಕೃತಿ
ಸುವರ್ಣ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ 2' ಅರ್ಧ ಶತಕ ಪೂರೈಸಿ ಮುನ್ನಡೆದಿದೆ. ಈ ವಾರ ಗುರುಪ್ರಸಾದ್ ಮತ್ತು ಸಂತೋಷ್ ನಾಮಿನೇಟ್ ಆಗಿದ್ದಾರೆ. ಆದರೆ ಅವರಿಬ್ಬರಲ್ಲಿ ಯಾರೊಬ್ಬರೂ ಮನೆಯಿಂದ ಹೊರಗೆ ಹೋಗುತ್ತಿಲ್ಲ.
ಓಟಿಂಗ್ ಲೈನ್ಸ್ ಇಲ್ಲದ ಕಾರಣ ಅವರು ಮನೆಯಲ್ಲೇ ಉಳಿಯುತ್ತಾರೆ. ಆದರೆ ಈ ವಿಷಯ ಮಾತ್ರ ಅತ್ತ ಗುರುಪ್ರಸಾದ್ ಇತ್ತ ಸಂತೊಷ್ ಅವರಿಬ್ಬರಿಗೂ ಗೊತ್ತಿಲ್ಲ. ಒಟ್ಟಾರೆ ಸುದೀಪ್ ಈ ವಾರ ಅವರಿಬ್ಬರ ಜೊತೆ ಟಪಾಂಗುಚಿ ಆಡುವುದಂತೂ ಇದ್ದೇ ಇದೆ. ಜೊತೆಗೆ ವೀಕ್ಷಕರಿಗೆ ಭರಪೂರ ಮನರಂಜನೆ. [ಹೆಚ್ಚಾಗಿ ನೋವನ್ನೇ ಉಂಡ 'ನೀಲಕಂಠ' ರವಿಚಂದ್ರನ್]
ಇವರಿಬ್ಬರ ಜೋಡಿಯ 'ತಿರುಪತಿ ಎಕ್ಸ್ ಪ್ರೆಸ್' ಚಿತ್ರ ಬಿಡುಗಡೆಗೆ (ಸೆಪ್ಟೆಂಬರ್ 5) ಸಿದ್ಧವಾಗಿದೆ. ಈ ಚಿತ್ರದ ಬಗೆಗಿನ ತಮ್ಮ ಅನುಭವಗಳನ್ನು ಬಿಗ್ ಬಾಸ್ ವೇದಿಕೆ ಮೇಲೆ ಕೃತಿ ಮತ್ತು ಸುಮಂತ್ ಹಂಚಿಕೊಳ್ಳಲಿದ್ದಾರೆ. 'ದಿಲ್ ವಾಲಾ' ಚಿತ್ರದ ಬಳಿಕ ಸುಮಂತ್ ಈ ಚಿತ್ರದ ಮೇಲೆ ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ಈಗಾಗಲೆ ಬಿಗ್ ಬಾಸ್ ವೇದಿಕೆ ಮೇಲೆ ಹಲವಾರು ತಾರೆಗಳು ಬಂದು ತಮ್ಮ ಅನುಭಗಳನ್ನು ಹಂಚಿಕೊಂಡಿದ್ದಾರೆ. ಅವರಲ್ಲಿ ಮುಖ್ಯವಾಗಿ ರವಿಚಂದ್ರನ್, ರವಿಶಂಕರ್, ವಿಜಯ್ ಪ್ರಕಾಶ್, ಉಮಾಶ್ರೀ, ತಾರಾ, ಎಸ್ ನಾರಾಯಣ್ ಮುಂತಾದವರು. (ಒನ್ಇಂಡಿಯಾ ಕನ್ನಡ)