Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ವಿರುದ್ಧದ ಹೋರಾಟಕ್ಕೆ 30 ಕೋಟಿ ದೇಣಿಗೆ ಘೋಷಿಸಿದ ಸನ್ ಟಿವಿ
ಭಾರತದಲ್ಲಿ ಕೊರೊನಾ ವೈರಸ್ ಸಮಸ್ಯೆ ವಿಪರೀತವಾಗಿ ಕಾಡುತ್ತಿದೆ. ದೇಶದಲ್ಲಿ ಒಂದು ದಿನಕ್ಕೆ ಸುಮಾರು 4 ಲಕ್ಷದವರೆಗೂ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ ನಡುವೆ ಆಕ್ಸಿಜನ್ ಸಮಸ್ಯೆ, ಬೆಡ್ ಸಮಸ್ಯೆ, ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದ ಕಾರಣ ಅನೇಕ ಸಾವು-ನೋವು ಸಂಭವಿಸಿದೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ಸೆಲೆಬ್ರಿಟಿಗಳು, ಸಂಘ-ಸಂಸ್ಥೆಗಳು ಖಾಸಗಿಯಾಗಿ ಜನರಿಗೆ ಸಹಾಯ ಮಾಡುತ್ತಿವೆ. ಇದೀಗ, ಸನ್ ಟಿವಿ ನೆಟ್ವರ್ಕ್ ಕೊರೊನಾ ವಿರುದ್ಧ ಹೋರಾಡಲು 30 ಕೋಟಿ ದೇಣಿಗೆ ನೀಡುವುದಾಗಿ ಪ್ರಕಟಿಸಿದೆ.
ಸಂಕಷ್ಟದಲ್ಲಿರುವ ಕಾರ್ಮಿಕ, ಕಲಾವಿದ, ತಂತ್ರಜ್ಞರ ನೆರವಿಗೆ ಧಾವಿಸಿದ ಉಪೇಂದ್ರ
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟಕ್ಕೆ ಕೈ ಜೋಡಿಸುವುದಾಗಿ ಹಾಗೂ ಈ ಹಣ ಬಳಕೆ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ತಮಿಳು, ತೆಲುಗು, ಕನ್ನಡ, ಮಲಯಾಳಂ ಸೇರಿದಂತೆ ಇತರೆ ಭಾಷೆಯಲ್ಲಿ ಸನ್ ನೆಟ್ವರ್ಕ್ ವಾಹಿನಿಗಳನ್ನು ಹೊಂದಿದೆ. ಕಲಾನಿಧಿ ಮಾರನ್ ಸನ್ ನೆಟ್ವರ್ಕ್ ಸಂಸ್ಥೆಯ ಮಾಲೀಕರು. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಮೊಮ್ಮಗ.
ಪ್ರಸ್ತುತ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದಿಂದ ಸ್ಟಾಲಿನ್ ಮುಖ್ಯಮಂತ್ರಿಯಾಗಿದ್ದಾರೆ. ಕಲಾನಿಧಿ ಮಾರನ್ ಸಹ ಇದೇ ಕುಟುಂಬದವರು. ಕಳೆದ ವರ್ಷದ ಕೊರೊನಾ ವಿರುದ್ಧದ ಹೋರಾಟಕ್ಕೆ 10 ಕೋಟಿ ದೇಣಿಗೆ ಘೋಷಿಸಿತ್ತು ಸನ್ ನೆಟ್ವರ್ಕ್.