Don't Miss!
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿಂಗ್ ಪ್ರಕರಣ: ರಿಪಬ್ಲಿಕ್ ಟಿವಿ, ಇಂಡಿಯಾ ಟಿವಿ ವರದಿ ಬಗ್ಗೆ ಸುಪ್ರೀಂ ಅಸಮಾಧಾನ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ದೇಶದ ಗಮನ ಸೆಳೆದಿತ್ತು. ಮಾಧ್ಯಮಗಳಂತೂ ತಿಂಗಳಾನುಗಟ್ಟಲೆ ಈ ಕುರಿತು ಸುದ್ದಿಗಳನ್ನು ಪ್ರಸಾರ ಮಾಡಿತು.
ಕೆಲವು ಟಿವಿ ಮಾಧ್ಯಮಗಳಂತೂ ಕೊಲೆಯ ತನಿಖೆ ನಡೆಸಿ ತೀರ್ಪನ್ನೂ ನೀಡಿ ರಿಯಾ ಚಕ್ರವರ್ತಿ ಮತ್ತಿತರರನ್ನು ಅಪರಾಧಿಗಳೆಂದು ನಿರ್ಣಯಿಸಿಬಿಟ್ಟವು. ರಿಯಾ ಅನ್ನು ಬಂಧಿಸಬೇಕು ಎಂದು ಸ್ವತಃ ರಿಪಬ್ಲಿಕ್ ಟಿವಿ ನಿರೂಪಕ ಅರ್ನಾಬ್ ಗೋಸ್ವಾಮಿ ಅರಚಾಡಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ರಿಪಬ್ಲಿಕ್ ಟಿವಿ ಹಾಗೂ ಟೈಮ್ಸ್ ನೌ ಮಾಧ್ಯಮಗಳ ವರದಿಗಳು ಪ್ರಾಥಮಿಕ ಸಾಕ್ಷ್ಯಗಳನ್ನು ತಿರಸ್ಕರಿಸಿ ಮಾಡಿದ ವರದಿಗಳು ಎಂದು ಹೇಳಿದೆ. ಆದರೆ ಆ ಮಾಧ್ಯಮಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ನಿರಾಕರಿಸಿದೆ ಬಾಂಬೆ ಹೈಕೋರ್ಟ್.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, 'ಅಪರಾಧದ ದೃಶ್ಯಗಳ ಪುನರ್ನಿರ್ಮಾಣ, ಸಂಭಾವ್ಯ ಸಾಕ್ಷಿಗಳ ಸಂದರ್ಶನ, ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡುವುದನ್ನು ಮಾಧ್ಯಮಗಳು ಮಾಡಬಾರದು' ಎಂದಿದ್ದಾರೆ.
ಅಪರಾಧ ಪ್ರಕರಣ ಕುರಿತಾಗಿ ಮಾಧ್ಯಮ ಸಂವಾದಗಳು, ವಿಶೇಷ ಸಂದರ್ಶನಗಳನ್ನು ಮಾಧ್ಯಮಗಳು ಮಾಡಬಾರದು ಎಂದು ಸಹ ಹೈಕೋರ್ಟ್ ಹೇಳಿದೆ.
ಸುಶಾಂತ್ ಸಿಂಗ್ ಪ್ರಕರಣದ ವರದಿ ಮಾಡುವಾಗ ಮಾಧ್ಯಮಗಳು ಸಂಯಮದಿಂದ ವರದಿ ಮಾಡಬೇಕು ಎಂದು ಈ ಹಿಂದೆ ಸಹ ಬಾಂಬೆ ಹೈಕೋರ್ಟ್ ಸೂಚಿಸಿತ್ತು.